ವಿರಾಜಪೇಟೆ ನ.13 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಕನ್ನಡ ಭಾಷಾ ವಿಭಾಗದ ವತಿಯಿಂದ ಕರುನಾಡ ಸಂಭ್ರಮ 2025 ರ ಅಂಗವಾಗಿ ಲೇಖಕರೊಂದಿಗೆ ಸoವಾದ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕ ಹಾಗೂ ವಿರಾಜಪೇಟೆ ಉಪ ಖಜಾನೆಯ ಅಧೀಕ್ಷಕರಾದ ಗಣೇಶ್ ನಿಲವಾಗಿಲು ಅವರ ಚಕ್ರವರ್ತಿ ನೆಪೋಲಿಯನ್ ಹಾಗೂ ಹುಣಸೂರಿನ ಅರಸು ಕೃತಿಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವು ನಡೆಯಿತು. ವಿದ್ಯಾರ್ಥಿಗಳು ಲೇಖನದ ಕುರಿತ ಚರ್ಚೆಗಳಲ್ಲಿ ಭಾಗವಹಿಸಿ ಅನೇಕ ವಿಚಾರಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಈ ಸಂದರ್ಭ ವಿದ್ಯಾರ್ಥಿಗಳ ಕುರಿತು ಮಾತನಾಡಿದ ಲೇಖಕ ಗಣೇಶ್ ನಿಲವಾಗಿಲು ಅವರು ವಿದ್ಯಾರ್ಥಿಗಳು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು. ಒಳ್ಳೆಯ ಪುಸ್ತಕಗಳನ್ನು ಓದಬೇಕು. ಪುಸ್ತಕಗಳನ್ನು ಓದುವುದರ ಮೂಲಕ ಇತರರಿಗೆ ಜ್ಞಾನವನ್ನು ನೀಡಬೇಕು. ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಶಿಕ್ಷಣದ ಹಂತದಿಂದಲೇ ಕನ್ನಡ ನಾಡು ನುಡಿಯ ಶ್ರೀಮoತಿಕೆಯನ್ನು ಹೆಚ್ಚಿಸುವ ಕಾರ್ಯಗಳಲ್ಲಿ ತೊಡಗಿಸಿ ಕೊಳ್ಳಬೇಕೆಂದು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾoಶುಪಾಲರಾದ ಪ್ರೊ. ಡಿ.ಕೆ.ಸರಸ್ವತಿ, ಸಾಹಿತ್ಯವು ಜೀವನದ ಗತಿಬಿಂಬ ಮತ್ತು ಪ್ರತಿಬಿಂಬವಾಗಿದೆ. ನಿತ್ಯವೂ ನೂತನ ಅನುಭವಗಳನ್ನು ಆನಂದಿಸುವ ಮನುಷ್ಯನು ಅದನ್ನು ಕಟ್ಟುವ ಹಾಗೂ ಕೃತಿ ರಚಿಸುವ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾರ್ಥಿನಿಯರಾದ ಸುಹೈರ ಹಾಗೂ ಕೀರ್ತನ ಲೇಖಕರ ಕೃತಿಗಳನ್ನು ವಿಮರ್ಶಿಸಿದರು. ಈ ಸಂದರ್ಭ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ಬಸವರಾಜು.ಕೆ, ಉಪನ್ಯಾಸಕರಾದ ಡಾ. ಪ್ರಭು. ಡಿ, ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











