
ಮಡಿಕೇರಿ ನ.13 NEWS DESK : ಮಿಸ್ಟರ್ ಇಂಡಿಯಾ ಯೂನಿವರ್ಸ್ 2025 ಪ್ರಶಸ್ತಿಗೆ ಭಾಜನರಾದ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲ ಗ್ರಾಮದ ಕರಿನೆರವಂಡ ಬಿಶನ್ ಮಾದಪ್ಪ ಅವರನ್ನು ಗೋಣಿಕೊಪ್ಪದಲ್ಲಿ ನಡೆದ ಏಕತಾ ಯಾತ್ರೆ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಪರಿಮಳ ಸಭಾಂಗಣದಲ್ಲಿ ನಡೆದ ಏಕತಾ ಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ಬಿಶನ್ ಮಾದಪ್ಪ ಅವರನ್ನು ಬಿಜೆಪಿ ವತಿಯಿಂದ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಸನ್ಮಾನಿಸಿದರು. ಈ ಸಂದರ್ಭ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ಕೆದಮುಳ್ಳೂರು ಗ್ರಾ.ಪಂ ಉಪಾಧ್ಯಕ್ಷ ಎಂ.ಎಂ.ಪರಮೇಶ್ವರ, ಮಾಜಿ ಸದಸ್ಯ ಚೋಟು ಬಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು. ಇದೇ ಅ.6 ರಿಂದ 13 ರವರೆಗೆ ರಾಜಸ್ಥಾನದ ಝೀ ಸ್ಟುಡಿಯೋ ಜೈಪುರದಲ್ಲಿ ನಡೆದ ಸ್ಪರ್ಧೆಯಲ್ಲಿ ಬಿಶನ್ ಮಾದಪ್ಪ ಅವರು ಮಿಸ್ಟರ್ ಇಂಡಿಯಾ ಯೂನಿವರ್ಸ್ ಆಗಿ ಆಯ್ಕೆಯಾಗಿದ್ದರು.









