ಮಡಿಕೇರಿ ನ.13 NEWS DESK : ಕೊಡಗು ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಗೋಣಿಕೊಪ್ಪ ಮತ್ತು ದ ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಚೆಪ್ಪುಡೀರ ಅರುಣ್ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಗೋಣಿಕೊಪ್ಪ ಹರಿಶ್ಚಂದ್ರಪುರದಲ್ಲಿರುವ ಗೋಣಿಕೊಪ್ಪ ಟ್ರೇಡರ್ಸ್ ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅರುಣ್ ಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಶಾಸಕರು, ಈಗಾಗಲೇ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ತನ್ನ ಪ್ರಯತ್ನದಿಂದಾಗಿ ವಿರಾಜಪೇಟೆ ಕ್ಷೇತ್ರಾದ್ಯಂತ ಕ್ರೀಡಾ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ತರಲಾಗಿದೆ. ನೂತನ ಕ್ರೀಡಾ ವಸತಿ ನಿಲಯಗಳು ತರಬೇತಿ ಕೇಂದ್ರಗಳು ನೂತನ ಮೈದಾನಗಳು ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದು, ಅರುಣ್ ಮಾಚಯ್ಯನವರು ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಕ್ಷೇತ್ರದ ಹಾಗೂ ಜಿಲ್ಲೆಯ ಕ್ರೀಡಾ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಿದರು. ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು ಪಂಚಾಯಿತಿ ಅಧ್ಯಕ್ಷರು ಕುಲ್ಲಚಂಡ ಪ್ರಮೋದ್ ಗಣಪತಿ, ಸುನಿಲ್ ಮಾದಪ್ಪ, ಗಿರೀಶ್ ಗಣಪತಿ, ಅರುಣ್ ಪೂಣಚ್ಚ, ಅಜಿತ್ ಅಯ್ಯಪ್ಪ, ಎ ಜೆ ಬಾಬು, ಅರವಿಂದ್ ಕುಟ್ಟಪ್ಪ, ಕೇಶವ್ ಕಾಮತ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.











