ಮಡಿಕೇರಿ ನ.14 NEWS DESK : ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡೂರು- ಕಲ್ಲುಕಂಡಿ ರಸ್ತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪರಿಶೀಲಿಸಿದರು. ಸೋಮವಾರಪೇಟೆ ತಾಲ್ಲೂಕು ಹಾನಗಲ್ ಪಂಚಾಯಿತಿ ವ್ಯಾಪ್ತಿಯ ಯಡೂರು ಗ್ರಾಮದ ಕಲ್ಲುಕಂಡಿ – ದೊಡ್ಡದಿಣ್ಣೆ ಪ್ರದೇಶದ ನಡುವೆ ಸಂಪರ್ಕ ರಸ್ತೆ ಇಲ್ಲದೆ ಅನಾನುಕೂಲವಾಗುತ್ತಿರುವುದನ್ನು ಗಮನಿಸಿದ ಶಾಸಕ ಡಾ.ಮಂತರ್ ಗೌಡ ಈ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ರೈತರು ಹಾಗೂ ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದಿಸಿದ ಶಾಸಕರು ಕಲ್ಲುಕಂಡಿ – ಯಡೂರು ಗ್ರಾಮದ ದೊಡ್ಡದಿಣೆ ನಡುವೆ ಸಂಪರ್ಕ ರಸ್ತೆಯನ್ನು ನಿರ್ಮಿಸಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಕೆ.ಎಂ.ಲೋಕೇಶ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ.ಸತೀಶ್, ಹಾನಗಲ್ ವಲಯ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಪ್ರದೀಪ್, ಬೂತ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ, ಗ್ರಾಮ ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಮತ್ತು ಸಮಿತಿ ಸದಸ್ಯರು, ಕಾಂಗ್ರೆಸ್ ಪ್ರಮುಖರಾದ ಡಿ.ಸಿ.ರಾಜು, ನಾಗೇಶ್, ಜಗದೀಶ್, ವಿನು, ವೈ ಎಮ್ ನಾಗರಾಜು, ಯುವ ಮುಖಂಡ ಕಾರ್ತಿಕ್, ವಿವಿಧ ಮಹಿಳಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.











