

ವಿರಾಜಪೇಟೆ ನ.19 NEWS DESK : ವಿರಾಜಪೇಟೆಯ ತೆಲುಗು ಶೆಟ್ಟರ ಬೀದಿಯ ಇತಿಹಾಸ ಪ್ರಸಿದ್ಧ ಶ್ರೀ ದಕ್ಷಿಣ ಮಾರಿಯಮ್ಮ ದೇವಾಲಯದಲ್ಲಿ ನ.26 ರಂದು ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ. ಅಂದು ಬೆಳಿಗ್ಗೆ 5 ಗಂಟೆಗೆ ಗಣಪತಿ ಪೂಜೆ, ಮಾರಿಯಮ್ಮ ದೇವಿಗೆ ಅಭಿಷೇಕ ಹಾಗೂ ಅಲಂಕಾರ ಪೂಜೆ, ಸುಬ್ರಹ್ಮಣ್ಯ ದೇವರಿಗೆ ಅಭಿಷೇಕ ಮತ್ತು ಅಲಂಕಾರ ಪೂಜೆ ಮತ್ತು ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಲಿದೆ. ಮಹಾಪೂಜೆಯ ಬಳಿಕ ನೆರೆದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿ ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕಾರ್ಯದಲ್ಲಿ ಪಾಲ್ಗೋಳ್ಳುವಂತೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ವಕೀಲರು ಆಗಿರುವ ಟಿ.ಪಿ ಕೃಷ್ಣ ತಿಳಿಸಿದ್ದಾರೆ.











