ಮಡಿಕೇರಿ ನ.21 NEWS DESK : ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದ ಕರಾಟೆ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸಣ್ಣುವಂಡ ಎಸ್.ರಶ್ಮಿ ಪೆÇನ್ನಮ್ಮ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ್ದಾಳೆ. ಇವಳಿಗೆ ಕರಾಟೆ ಬೋಧಕರಾದ ಸೋಮಣ್ಣ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.











