ಮಡಿಕೇರಿ ನ.21 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿರಾಜಪೇಟೆ ತಾಲ್ಲೂಕು ವತಿಯಿಂದ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರನ್ನು ಸನ್ಮಾನಿಸಲಾಯಿತು. ಗಾಯತ್ರಿ ನರಸಿಂಹ ಅವರು ಕಳೆದ 20 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವುದನ್ನು ಪರಿಗಣಿಸಿ ಗೋಣಿಕೊಪ್ಪದ ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ನಡೆದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಗೋಣಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪ್ರಮೋದ್ ಗಣಪತಿ, ಮಾಜಿ ಅಧ್ಯಕ್ಷೆ ಸೌಮ್ಯ ಬಾಲಕೃಷ್ಣ, ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಹರೀಶ್, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಉಷಾರಾಣಿ, ಗೋಣಿಕೊಪ್ಪ ಪೊಲೀಸ್ ಇಲಾಖೆಯ ಕಾವೇರಮ್ಮ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮುದಾಯ ಇಲಾಖೆಯ ವೈದ್ಯಾಧಿಕಾರಿ ಡಾ.ಗ್ರೀಷ್ಮಾ, ಗೋಣಿಕೊಪ್ಪ ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಚಂದನ ಹಾಗೂ ಇತರರು ಇದ್ದರು.











