ಮಡಿಕೇರಿ ನ.22 NEWS DESK : ಇತ್ತೀಚಿಗೆ ನಿಧನರಾದ ವಿರಾಜಪೇಟೆ ತಾಲ್ಲೂಕಿನ ನರಿಯಂದಡ ಗ್ರಾಮ ಪಂಚಾಯಿತಿಯ ಚೆಯ್ಯಂಡಾಣೆ ಭಾಗದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಪೊಕುಲ್ರ0ಡ ಸಿದ್ಧಾರ್ಥ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ವಲಯ ಅಧ್ಯಕ್ಷರು ಕೋಡಿರ ವಿನೋದ್ ನಾಣಯ್ಯ, ಪಂಚಾಯಿತಿ ಸದಸ್ಯರು ಸುಬೈರ್, ಮಮ್ಮದ್, ಪಕ್ಷದ ಪ್ರಮುಖರು ಶೈಲಾ ಕುಟ್ಟಪ್ಪ, ಪ್ರಕಾಶ್ ಉಪಸ್ಥಿತರಿದ್ದರು.











