Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿಯಲ್ಲಿ  ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಮೈಸೂರು ವಿಭಾಗ ಮಟ್ಟದ ‘ಗಾನ ಸುಧೆ’ : ಗೀತೆ ಗಾಯನದ ಮೂಲಕ ದೇಶಭಕ್ತಿ ಮೆರೆದ 8 ಜಿಲ್ಲೆಗಳ ವಿದ್ಯಾರ್ಥಿಗಳು*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ  ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಮೈಸೂರು ವಿಭಾಗ ಮಟ್ಟದ ‘ಗಾನ ಸುಧೆ’ : ಗೀತೆ ಗಾಯನದ ಮೂಲಕ ದೇಶಭಕ್ತಿ ಮೆರೆದ 8 ಜಿಲ್ಲೆಗಳ ವಿದ್ಯಾರ್ಥಿಗಳು*

November 23, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ನ.23 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಕೊಡಗು ಜಿಲ್ಲಾ ಸಂಸ್ಥೆ,, ಮಡಿಕೇರಿ, ವತಿಯಿಂದ ಕಬ್ಸ್-ಬುಲ್ ಬುಲ್ಸ್-ಸ್ಕೌಟ್ಸ್-ಗೈಡ್ಸ್-ರೋವರ್ಸ್-ರೇಂಜರ್ಸ್ ಮಕ್ಕಳಿಗೆ ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತೆಗಾಯನ ಸ್ಪರ್ಧೆ-2025 ‘ಗಾನ ಸುಧೆ’ ಮಡಿಕೇರಿಯಲ್ಲಿ ನಡೆಯಿತು. ಒಟ್ಟು 8 ಜಿಲ್ಲೆಗಳ 320 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೀತೆ ಗಾಯನದ ಮೂಲಕ ದೇಶಭಕ್ತಿ ಮೆರೆದರು. ಮಡಿಕೇರಿ ನಗರದ ಜೂನಿಯರ್ ಕಾಲೇಜು ಆವರಣದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ(ಪಿಎಂಶ್ರೀ) ಸಭಾಂಗಣದಲ್ಲಿ ನಡೆದ ‘ಗಾನ ಸುಧೆ’ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿವೈಎಸ್‌ಪಿ ಪೆಮ್ಮಂಡ ಎ.ಸೂರಜ್ ಅವರು ಈ ರೀತಿಯ ಸ್ಪರ್ಧಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಐಕ್ಯತೆಯನ್ನು ಮೂಡಿಸುತ್ತದೆ ಮತ್ತು ಪೂರ್ವಜರ ದೇಶಭಕ್ತಿಯನ್ನು ನೆನಪಿಸುತ್ತದೆ ಎಂದರು. ಐಕ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಸಮವಸ್ತçಧಾರಿ ವಿಭಾಗವಾದ ಪೊಲೀಸ್ ಮತ್ತು ಸೇನೆ ಕೂಡ ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಮಹತ್ವಪೂರ್ಣವಾದ ಈ ರೀತಿಯ ಕಾರ್ಯಮಗಳು ವಿದ್ಯಾರ್ಥಿಗಳಿಂದ ಸದ್ಬಳಕೆಯಾಗಬೇಕು ಎಂದು ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಉತ್ತಮ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದು ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳ ಸವಿನೆನಪಿಗೆ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಹೊರ ಜಿಲ್ಲೆಗೆ ಭೇಟಿ ನೀಡಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಅಲ್ಲಿನ ಆಕರ್ಷಕ ಪ್ರದೇಶಗಳನ್ನು ವೀಕ್ಷಿಸಬೇಕು ಎಂದು ಕಿವಿಮಾತು ಹೇಳಿದರು. ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಕೂಡ ಕಾರ್ಯಕ್ರಮಗಳಿಗೆ ಸಹಕಾರ ನೀಡಲಿದೆ. ಜಿಲ್ಲಾ ಪೊಲೀಸರ ಸಾಂಸ್ಕೃತಿಕ ವೇದಿಕೆಯು ಕಾರ್ಯನಿರ್ವಹಿಸುತ್ತಿದ್ದು, ಉತ್ತಮ ಹಾಡುಗಾರರಿದ್ದಾರೆ. ಇಲಾಖೆಯ ಕಲಾವಿದರು ಕಾರ್ಯಕ್ರಮ ನೀಡಲು ಸಿದ್ಧರಿದ್ದಾರೆ ಎಂದು ಪೆಮ್ಮಂಡ ಎ.ಸೂರಜ್ ತಿಳಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್ ಅವರು ಕೊಡಗಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಾಯಕತ್ವದ ಗುಣವನ್ನು ಬೆಳೆಸುತ್ತಿದೆ ಎಂದು ಶ್ಲಾಘಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ಇಂದಿನ ಮಕ್ಕಳೇ ದೇಶದ ಮುಂದಿನ ಭವಿಷ್ಯವಾಗಿದ್ದಾರೆ, ಎಂಟು ಜಿಲ್ಲೆಗಳ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ದೇಶಭಕ್ತಿಯ ‘ಗಾನ ಸುಧೆ’ಯಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ ಎಂದರು. ಈ ರೀತಿಯ ಕಾರ್ಯಕ್ರಮಗಳಿಂದ ಸಂಸ್ಕೃತಿಯ ವಿನಿಮಯವಾಗುತ್ತದೆ, ಪರಸ್ಪರ ವಿದ್ಯಾರ್ಥಿಗಳ ಪರಿಚಯವಾಗುತ್ತದೆ. ಭವಿಷ್ಯದ ಗೆಲುವಿಗಾಗಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಸೋಲೇ ಗೆಲುವಿನ ಮೆಟ್ಟಿಲಾಗಿದೆ, ಸೋಲು, ಗೆಲುವಿಗಿಂತ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದು ಕರೆ ನೀಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಪಾಜೆ ಅಧ್ಯಕ್ಷ ಧನಂಜಯ ಎಂ. ಅವರು ಮಾತನಾಡಿ ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳ ಉತ್ಸಾಹದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಸ್ಕೌಟ್ ನ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ ಅವರು ‘ಗಾನ ಸುಧೆ’ ಸ್ಪರ್ಧೆಯ ಕುರಿತು ವಿವರಿಸಿದರು. *ತೀವ್ರ ಪೈಪೋಟಿ* ದೇಶಭಕ್ತಿಯ ಗೀತೆ ಗಾಯನ ಗುಂಪು ಸ್ಪರ್ಧೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳÀ 320 ವಿದ್ಯಾರ್ಥಿಗಳು ತೀವ್ರ ಪೈಪೋಟಿ ನೀಡಿದರು. ಸಮವಸ್ತçಧಾರಿಗಳಾಗಿದ್ದ  ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ಹಾಡಿ ಪ್ರೇಕ್ಷಕರ ಗಮನ ಸೆಳೆಯಿತು. ತೀರ್ಪುಗಾರರಾಗಿ ಕಲಾವಿದರಾದ ಶೋಭಾ ಸುಬ್ಬಯ್ಯ, ವೀಣಾ ಹೊಳ್ಳ, ಮಮತಾ ಶಾಸ್ತ್ರಿ, ಲಕ್ಷ್ಮೀ ಭಟ್, ಸುಮನಾ ರಾವ್ ಹಾಗೂ ಮೇಘನಾ ಭಟ್ ಕಾರ್ಯನಿರ್ವಹಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ರಾಜ್ಯ ಆಯುಕ್ತರಾದ(ಸ್ಕೌಟ್) ಬಿ.ಕೆ.ಬಸವರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಎನ್.ಎಂ.ಜಗದೀಶ್, ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಕಾರ್ಯದರ್ಶಿ ಚಂದ್ರಶೇಖರ್ ಆರ್.ಪಿ, ಪೊನ್ನಂಪೇಟೆ ಅಧ್ಯಕ್ಷ ಕಾಳಿಮಾಡ ಎಂ.ಮೋಟಯ್ಯ, ಕಾರ್ಯದರ್ಶಿ ಕೆ.ಬಿ.ಉಷಾರಾಣಿ, ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು.ರಂಜಿತ್, ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮ ಕುಮಾರ್, ಜಿಲ್ಲಾ ಬುಲ್ ಬುಲ್ ಆಯುಕ್ತೆ ಡೈಸಿ ಫ್ರಾನ್ಸಿಸ್, ಕಾರ್ಯದರ್ಶಿ ಎಂ.ಎಂ.ವಸಂತಿ, ಕೋಶಾಧಿಕಾರಿ ಟಿ.ಎಂ.ಮುದ್ದಯ್ಯ, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಜಿಲ್ಲಾ ಸಹಾಯಕ ಆಯುಕ್ತ (ಸ್ಕೌಟ್) ಕೆ.ಬಿ.ಗಣೇಶ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎಚ್.ಕೆ.ಭವಾನಿ, ಸ್ಕೌಟ್ಸ್, ಗೈಡ್ಸ್ ನ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರದಲ್ಲಿ ವೈದ್ಯಕೀಯ ಕಾರ್ಯಾಗಾರ*
Next Article *ಕೊಡವ ನ್ಯಾಷನಲ್ ಡೇ ಪ್ರಯುಕ್ತ ದೇವಟ್ ಪರಂಬ್ ನಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎನ್‌ಸಿ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.