ಸುಂಟಿಕೊಪ್ಪ ನ.27 NEWS DESK : ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯ ವಿವಿಧ ದೇವಾಲಯಗಳಲ್ಲಿ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪನ್ಯದ ಮಳ್ಳೂರು ಬೆಳ್ಳಾರಿಕಮ್ಮ ದೇವಾಲಯದಲ್ಲಿ ವಿಶೇಷ ಪೂಜೆಗಳು, ನಾಗ ಪೂಜೆ, ಅಭಿμÉೀಕ ಪೂಜೆ, ಅರಸಿನ, ಕುಂಕುಮಾರ್ಚನೆ ಪೂಜೆಯನ್ನು ಪ್ರಧಾನ ಅರ್ಚಕ ಮಂಜುನಾಥ್ ಉಡುಪ ನೆರವೇರಿಸಿದರು. ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ದೇವಾಲಯ ಸಮಿತಿಯ ಪಟ್ಟೆಮನೆ ಉದಯಕುಮಾರ್, ಮಾಗಲು ವಸಂತ, ಪಟ್ಟೆಮನೆ ಅನಿಲ್ ಕುಮಾರ್ ಸೇರಿದಂತೆ ಇತರರು ಇದ್ದರು. ಕೆದಕಲ್ ಭದ್ರಕಾಳಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಅಭಿμÉೀಕ, ಹರಕೆ ಒಪ್ಪಿಸುವುದು, ವಿಶೇಷ ಪೂಜೆ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಮಧ್ಯಾಹ್ನ ದೀಪರಾಧನೆ, ಮಹಾಪೂಜೆ ನೆರವೇರಿತು. ಸುಂಟಿಕೊಪ್ಪ, ಬೋಯಿಕೇರಿ, ಕೆದಕಲ್, ಮಡಿಕೇರಿ, ಹಾಲೇರಿ ಸೇರಿದಂತೆ ಇತರೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೇವರ ದರ್ಶನ ಪಡೆದರು. ನೆರೆದವರಿಗೆ ಅನ್ನದಾನ ನಡೆಯಿತು. ಸುಂಟಿಕೊಪ್ಪ ಮಧುರಮ್ಮ ಬಡಾವಣೆಯಲ್ಲಿ ನಾಗದೇವರ ದೇವಾಲಯದಲ್ಲಿ ಸುಬ್ರಮಣ್ಯ ಷಷ್ಠಿ ಅಂಗವಾಗಿ ನಾಗದೇವರ 32ನೇ ವರ್ಷದ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಿಗ್ಗೆ ನಾಗ ದೇವರಿಗೆ ಕ್ಷೀರಾಭಿಷೇಕ, ಮದ್ಯಾಹ್ನ ವಿವಿಧ ಬಗೆಯ ಹೂವಿನ ಅಲಂಕಾರ ಪೂಜೆ ನಡೆದವು. ಮದ್ಯಾಹ್ನದ ನಂತರ ಮಹಾಪೂಜೆ, ಆರಾಧನಾ ಪೂಜೆ ಹಾಗೂ ಮಹಾಮಂಗಳಾರತಿ ನಡೆಯಿತು.ನಂತರ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನೆರವೇರಿತು. ದೇವಾಲಯದ ಎ.ಎಂ.ರಘು, ರಾಣಿ, ಧನು ಕಾವೇರಪ್ಪ ಮತ್ತಿತರರು ಇದ್ದರು. ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ನಾಗ ದೇವರಿಗೆ ಷಷ್ಠಿ ಪ್ರಯುಕ್ತ ವಿಶೇಷ ಪೂಜೆ, ಅಲಂಕಾರ ಮತ್ತು ದೀಪರಾಧನೆ ನಡೆಯಿತು. ಮಾದಾಪುರ ರಸ್ತೆಯಲ್ಲಿರುವ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾದ ನಾಗದೇವರಿಗೆ ವಿಶೇಷ ಅಭಿಷೇಕ ಪೂಜೆಯನ್ನು ನೆರವೇರಸಲಾಯಿತು. ಟ್ರಸ್ಟಿ ಎ.ಲೋಕೇಶ್ ಕುಮಾರ್, ದೇವಾಲಯ ಸಮಿತಿಯ ಸದಾಶಿವ ರೈ, ಸುನಿಲ್ ಕುಮಾರ್, ದಿವಾಕರ್, ಮಂಜುನಾಥ್ ಇತರರು ಇದ್ದರು.










