ಮಡಿಕೇರಿ ನ.27 NEWS DESK : ಅಂಚೆ ಅದಾಲತ್ನ ಮುಂದಿನ ಸಭೆಯು ಡಿಸೆಂಬರ್, 08 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ, ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ ಅಶೋಕ್ ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಡಿಸೆಂಬರ್, 05 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಡಿಸೆಂಬರ್, 08 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.










