Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *‘ಹಿರಿಯರ ಕವಿಗೋಷ್ಠಿ’ : ಯುವ ಪೀಳಿಗೆಗೆ ಸಾಹಿತ್ಯ ರಚನೆಯ ಪ್ರೇರಣೆ ನೀಡಬೇಕು : ಕವಿ ಕಾಜೂರು ಸತೀಶ್*
ಇತ್ತೀಚಿನ ಸುದ್ದಿಗಳು

*‘ಹಿರಿಯರ ಕವಿಗೋಷ್ಠಿ’ : ಯುವ ಪೀಳಿಗೆಗೆ ಸಾಹಿತ್ಯ ರಚನೆಯ ಪ್ರೇರಣೆ ನೀಡಬೇಕು : ಕವಿ ಕಾಜೂರು ಸತೀಶ್*

December 9, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.9 NEWS DESK : ಆಧುನೀಕತೆಯ ಸ್ಪರ್ಶವಿಲ್ಲದೆ, ಬದುಕಿನ ಅನುಭವಗಳನ್ನು ಯಾವುದೇ ಅಡೆ ತಡೆಗಳಿಲ್ಲದೆ ಸಾಹಿತ್ಯದ ಮೂಲಕ ಹೊರಹೊಮ್ಮಿಸುತ್ತಿದ್ದ ಹಿರಿಯ ಸಾಹಿತಿಗಳು ಇಂದಿನ ಯುವ ಪೀಳಿಗೆಗೆ ಸಾಹಿತ್ಯ ರಚನೆಯ ಕುರಿತು ಪ್ರೇರಣೆಯನ್ನು ನೀಡಬೇಕು ಎಂದು ಕವಿ ಕಾಜೂರು ಸತೀಶ್ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ನಡೆದ ‘ಹಿರಿಯರ ಕವಿಗೋಷ್ಠಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಕಲ್ಪನೆಯೇ ಇಲ್ಲದ ದಿನಗಳಲ್ಲಿ ಕುಟುಂಬದ ಸದಸ್ಯರೊಂದಿಗೆ ಸಂತೋಷದಿಂದ ಬೆರೆತು, ತಮ್ಮ ಅನುಭವಗಳನನ್ನು ಹಿರಿಯರು ಬರಹಕ್ಕಿಳಿಸುತ್ತಿದ್ದರು. ಅಂತಹ ಪರಿಸ್ಥಿತಿಗಳಿಗೆ ತದ್ವಿರುದ್ಧವಾಗಿರುವ ಸ್ಥಿತಿಯನ್ನು ನಾವಿಂದು ಕಾಣುತ್ತಿದ್ದೇವೆ, ಮೊಬೈಲ್, ಸಾಮಾಜಿಕ ಜಾಲತಾಣಗಳ ಹಾವಳಿ ಮೆದುಳನ್ನು ಕಿತ್ತು ಬಗೆದು ತಿನ್ನುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಪ್ರಶಾಂತವಾದ ಅಂದಿನ ದಿನಮಾನಗಳ ಪರಿಸ್ಥಿತಿ ಇಂದು ಬದಲಾಗಿದೆ. ಇಂತಹ ಕಾಲ ಘಟ್ಟದಲ್ಲಿ ಹಿಂದಿನ ಮತ್ತು ಇಂದಿನ ಪರಿಸ್ಥಿತಿಗಳನ್ನು ಮಿಳಿತಗೊಳಿಸಿ ಸೃಜನಾತ್ಮಕವಾದ ಬರವಣಿಗೆಯಲ್ಲಿ ತೊಡಗಿಸಿಕೊಳ್ಳುವುದೇ ಒಂದು ದೊಡ್ಡ ಸವಾಲೆಂದು ಅಭಿಪ್ರಾಯಿಸಿದ ಕಾಜೂರು ಸತೀಶ್, ಹಿರಿಯ ಸಾಹಿತಿಗಳು ತಮ್ಮ ಅನುಭವಗಳನ್ನು ಹೊಸ ತಲೆಮಾರಿಗೆ ಹಸ್ತಾಂತರಿಸಬೇಕೆಂದು ನುಡಿದರು. *ಸೃಜನಶೀಲತೆಯ ಕಾರ್ಯ* ಕಾವ್ಯವೆನ್ನುವುದು ಸಂವೇದನೆ ಮತ್ತು ಸೃಜನಶೀಲತೆಯ ಕಾರ್ಯವೇ ಆಗಿದೆಯೆಂದು ಅಭಿಪ್ರಾಯಿಸಿದ ಕಾಜೂರು ಸತೀಶ್, ಹುಲಿ ಬೇಟೆಗಾಗಿ ಚಿರತೆಯನ್ನು ಬೆನ್ನಟ್ಟುವುದನ್ನು ಕಾಣುವ ಸಂದರ್ಭ ಜಿಂಕೆಯ ಪ್ರಾಣ ಭಯದೊಂದಿಗೆ ಹುಲಿಯ ಹಸಿವನ್ನು ಕಾಣುವ ಸೂಕ್ಷ್ಮ ಮನಸ್ಥಿತಿಯನ್ನು ಹೊಂದಿರುವಾತ ‘ಕವಿ’ ಎನಿಸಿಕೊಳ್ಳುತ್ತಾನೆ. ತಾವು ಬರೆಯುವ ಯಾವುದೇ ವಿಷಯಗಳಲ್ಲಿ ತಾದಾತ್ಮ್ಯತೆಯನ್ನು ಹೊಂದುವ ಹಾಗೂ ತಾವೇ ಆ ವಿಷಯವಾಗಿ ಹೋಗುವ ಮನಸ್ಥಿತಿ ಅತ್ಯವಶ್ಯ. ಕುವೆಂಪು ಅವರು ಹೇಳಿದಂತೆ ನೀಲ ಆಗಸದ ಕುರಿತು ಬರೆಯುವಾತ ಆಗಸದ ನೀಲಿಯೇ ಆಗಿಬಿಡಬೇಕೆನ್ನುವ ಮಾತನ್ನು ಅವರು ಉಲ್ಲೇಖಿಸಿದರು. *ಯುವ ಸಮೂಹದ ಸಂಕಷ* ಆಧುನಿಕ ಜಗತ್ತಿನ ಮೊಬೈಲ್‍ಗಳು, ಸ್ಮಾರ್ಟ್ ಫೋನ್‍ಗಳು ಗಂಭೀರ ಬರವಣಿಗೆಯ ಪ್ರಯತ್ನಗಳಿಗೆ ದೊಡ್ಡ ಅಡ್ಡಿಯೇ ಆಗಿ ಹೋಗುತ್ತಿವೆ. ಒಂದೊಳ್ಳೆಯ ಕೃತಿಯ ಓದಿನ ನಡುವೆ ಮೊಳಗಿ ಬಿಡುವ ಮೊಬೈಲ್ ರಿಂಗ್, ಓದಿನ ರಸಭಂಗವನ್ನು ಉಂಟುಮಾಡುತ್ತದೆಯೆಂದು ಅಭಿಪ್ರಾಯಿಸಿದ ಅವರು, ಇದು ಬರವಣಿಗೆಯ ಹಂತಗಳಲ್ಲು ಸಾಕಷ್ಟು ತೊಡಕುಗಳನ್ನು ಸೃಷ್ಟಿಸುತ್ತಿವೆ. ಇವುಗಳನ್ನು ಮೀರಿ ಯುವ ಸಮೂಹ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಹಿರಿಯರು ತಮ್ಮ ಅನುಭವಗಳಿಂದ ಮಾರ್ಗದರ್ಶನ ಮಾಡುವ ಅಗತ್ಯತೆ ಇರುವುದಾಗಿ ತಿಳಿಸಿದರು.
ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿನ ಹಿರಿಯ ಕವಿಗಳನ್ನು ಒಗ್ಗೂಡಿಸುವ ಪ್ರಯತ್ನವಾಗಿ ಹಿರಿಯರ ಕವಿಗೋಷ್ಠಿಯನ್ನು ನಡೆಸಲಾಗಿದೆ. ಜಿಲ್ಲೆಯಲ್ಲಿ ಐವತ್ತಕ್ಕೂ ಹೆಚ್ಚಿನ ಹಿರಿಯ ಕವಿಗಳಿದ್ದು, ಮುಂಬರುವ ದಿನಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇವರೆಲ್ಲರನ್ನೂ ಸೇರಿಸುವ ಪ್ರಯತ್ನಗಳು ನಡೆಯಲಿದೆಯೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಸಾಹಿತಿ ಬಿ.ಎ.ಷಂಶುದ್ದೀನ್, ಸಾಹಿತಿ ಕೃಪಾದೇವರಾಜ್ ಉಪಸ್ಥಿತರಿದ್ದರು. *ಕವನ ವಾಚನ* ಇದೇ ಸಂದರ್ಭ ಜಿಲ್ಲೆಯ ವಿವಿಧೆಡೆಗ¼ ಹಿರಿಯ ಸಾಹಿತಿಗಳು ಕವನಗಳನ್ನು ವಾಚಿಸಿ ಗಮನ ಸೆಳೆದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್ ಸರ್ವರನ್ನೂ ಸ್ವಾಗತಿಸಿದರು. ಉಪನ್ಯಾಸಕಿ ಪ್ರತಿಮಾ ರೈ ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ನಿಧನ ಸುದ್ದಿ* 
Next Article *ಪ್ರವಾಸೋದ್ಯಮ ಕ್ಷೇತ್ರ ಉತ್ತೇಜನಕ್ಕೆ ಎಲ್ಲಾ ರೀತಿಯಿಂದಲೂ ಕೇಂದ್ರ ಸರ್ಕಾರ ಸಹಕಾರ ನೀಡಲಿದೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.