Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿಟಮಿನ್ ಡಿ3 : ಆರೋಗ್ಯಕ್ಕೆ ಅಗತ್ಯವಾದ ಸೂರ್ಯ ರಶ್ಮಿ ವಿಟಮಿನ್ : ಡಾ.ಬಿ.ಸೂರ್ಯ ಕುಮಾರ್*
ಇತ್ತೀಚಿನ ಸುದ್ದಿಗಳು

*ವಿಟಮಿನ್ ಡಿ3 : ಆರೋಗ್ಯಕ್ಕೆ ಅಗತ್ಯವಾದ ಸೂರ್ಯ ರಶ್ಮಿ ವಿಟಮಿನ್ : ಡಾ.ಬಿ.ಸೂರ್ಯ ಕುಮಾರ್*

December 11, 20252 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಡಿ.11 NEWS DESK :  ಮಾನವ ದೇಹಕ್ಕೆ ಅತ್ಯಂತ ಮುಖ್ಯವಾದ ಪೋಷಕಾಂಶಗಳಲ್ಲಿ ಒಂದಾದ ವಿಟಮಿನ್ ಡಿ3 ಯನ್ನು ಕೋಲೆಕ್ಯಾಲ್ಸಿಫೆರಾಲ್ ಎಂದೂ ಕರೆಯುತ್ತಾರೆ. ಇದು ದೇಹದಲ್ಲಿ ಹಾರ್ಮೋನ್‌ನಂತೆ ಕಾರ್ಯನಿರ್ವಹಿಸುತ್ತದೆ ಮತ್ತು ಮೂಳೆ ಆರೋಗ್ಯ, ರೋಗನಿರೋಧಕ ಶಕ್ತಿ, ಹೃದಯ ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆಧುನಿಕ ಜೀವನದಲ್ಲಿ ಅದರ ಕೊರತೆಯು ಸಾಮಾನ್ಯವಾಗಿದ್ದರೂ, ಸರಳ ಕ್ರಮಗಳ ಮೂಲಕ ಅದನ್ನು ನಿಯಂತ್ರಿಸಬಹುದು. :: ವಿಟಮಿನ್ ಡಿ3ಯ ಮಹತ್ವ :: ಇದು ಮೂಳೆಗಳ ಬೆಳವಣಿಗೆ ಮತ್ತು ಬಲಕ್ಕೆ ಅತ್ಯಗತ್ಯ. ಇದು ನಮ್ಮ ಆಹಾರದಿಂದ ಕ್ಯಾಲ್ಸಿಯಂ ಮತ್ತು ಫಾಸ್ಫರಸ್ ಹೀರಿಕೊಳ್ಳುವಿಕೆಯನ್ನು ಸುಧಾರಿಸುತ್ತದೆ. ಇದರಿಂದಾಗಿ ಆಸ್ಟಿಯೋಪೋರೋಸಿಸ್ ಮತ್ತು ರಿಕೆಟ್ಸ್ ನಂತಹ ಕಾಯಿಲೆಗಳನ್ನು ತಡೆಯುತ್ತದೆ. ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಸಂಶೋಧನೆಗಳ ಪ್ರಕಾರ, ವಿಟಮಿನ್ ಡಿ3 ಕ್ಯಾನ್ಸರ್, ಮಧುಮೇಹ, ಹೃದಯರೋಗಗಳು ಮತ್ತು ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಎಲ್ಲರೂ ಮನೆಯ ಒಳಗಡೆ ಇದ್ದುದರಿಂದ ಬಿಸಿಲಿಗೆ ಮೈಯನ್ನು ಒಡ್ಡಿ ಕೊಳ್ಳುವುದು ಕಡಿಮೆಯಾಗಿ, ವಿಟಮಿನ್ ಡಿ3ಯ ಕೊರತೆಯಿಂದ ರೋಗದ ತೀವ್ರತೆಯನ್ನು ಹೆಚ್ಚಿಸಿದೆ ಎಂದು ಅಧ್ಯಯನಗಳು ತೋರಿಸಿವೆ. :: ಮೂಲಗಳು :: 
ವಿಟಮಿನ್ ಡಿ3ಯ ಮುಖ್ಯ ಮೂಲ ಸೂರ್ಯನ ಬೆಳಕು. ಚರ್ಮದ ಮೇಲೆ ಸೂರ್ಯನ ಅಲ್ಟ್ರಾವೈಯಲೆಟ್ ಬಿ (ಯುವಿಬಿ) ಕಿರಣಗಳು ಬೀಳುವಾಗ ದೇಹವೇ ವಿಟಮಿನ್ ಡಿ3ಯನ್ನು ಉತ್ಪಾದಿಸುತ್ತದೆ. ಪ್ರತಿದಿನ 15-20 ನಿಮಿಷಗಳ ಸೂರ್ಯನ ಬೆಳಕು ಸಾಕು. ಆದರೆ, ಆಧುನಿಕ ಜೀವನ ಶೈಲಿಯಿಂದಾಗಿ, ಏಸಿ ಕೋಣೆಯಲ್ಲಿ ಕೆಲಸ ಮಾಡುವುದರಿಂದ ಅನೇಕರು ಇದನ್ನು ಪಡೆಯುವುದಿಲ್ಲ. ಆಹಾರ ಮೂಲಗಳಲ್ಲಿ ಮತ್ತಿ/ಭೂತಾಯಿ (ಸಾಲ್ಮನ್), ಬಂಗುಡೆ (ಮ್ಯಾಕರೆಲ್) ಮೀನುಗಳು, ಮೊಟ್ಟೆಯ ಹಳದಿ ಭಾಗ, ಕಾಡ್ ಲಿವರ್ ಆಯಿಲ್ ಮತ್ತು ಸುಧಾರಿತ (ಫೋರ್ಟಿಫೈಡ್ ) ಹಾಲು, ಕೆಲವು ಧಾನ್ಯಗಳು ಸೇರಿವೆ. ಸಸ್ಯಾಹಾರಿಗಳಿಗೆ ಯುವಿಬಿ ಬೆಳಕಿಗೆ ಒಡ್ಡಿಕೊಂಡ ಅಣಬೆ ಉತ್ತಮ ಮೂಲ. :: ಕೊರತೆಯ ಲಕ್ಷಣಗಳು : : ಬೇಗನೇ ದಣಿವು, ನಿರಂತರ ಆಯಾಸ, ಮೂಳೆ ನೋವು, ಬೆನ್ನು ನೋವು, ಸ್ನಾಯು ದೌರ್ಬಲ್ಯ, ಕೂದಲು ಉದುರುವಿಕೆ, ಖಿನ್ನತೆ ಮತ್ತು ಆಗಾಗ್ಗೆ ಸೋಂಕುಗಳು. ಮಕ್ಕಳಲ್ಲಿ ರಿಕೆಟ್ಸ್ (ಮೂಳೆಗಳ ವಕ್ರತೆ), ವಯಸ್ಕರಲ್ಲಿ ಆಸ್ಟಿಯೋಮಲೇಷಿಯಾ (ಮೂಳೆಗಳ ಮೃದುತ್ವ) ದಿಂದ ಬಿದ್ದು ಎಲುಬು ಮುರಿಯುವ ಅಪಾಯ ಕಾಣಿಸಬಹುದು. ರಕ್ತ ಪರೀಕ್ಷೆಯ ಮೂಲಕ ಕೊರತೆಯನ್ನು ಗುರುತಿಸಬಹುದು. :: ಪರಿಹಾರಗಳು : : ಕೊರತೆಯನ್ನು ತಡೆಯಲು ಪ್ರತಿದಿನ ಸೂರ್ಯನ ಬೆಳಕನ್ನು ಪಡೆಯಿರಿ. ಸೂರ್ಯರಕ್ಷಣಾ ಕ್ರೀಮ್ ಬಳಸದೆ ಬೆಳಿಗ್ಗೆ ಅಥವಾ ಸಂಜೆ ಸಮಯದಲ್ಲಿ ನಡೆಯಿರಿ. ಆಹಾರದಲ್ಲಿ ವಿಟಮಿನ್ ಡಿ ಸಮೃದ್ಧ ಆಹಾರಗಳನ್ನು ಸೇರಿಸಿ. 600 ರಿಂದ 1000 ಮೈಕ್ರೋ ಗ್ರಾಂ ಪೂರಕ (ಸಪ್ಲಿಮೆಂಟ್‌) ಗಳನ್ನು ತೆಗೆದುಕೊಳ್ಳಿ. ಆದರೆ ಅತಿ ಪ್ರಮಾಣದಲ್ಲಿ ತೆಗೆದು ಕೊಳ್ಳುವುದರಿಂದ ರಕ್ತದಲ್ಲಿ ಕ್ಯಾಲ್ಸಿಯಂ ಹೆಚ್ಚು (ಹೈಪರ್ಸ್‌ಕಾಲ್ಸಿಮಿಯಾ) ಆಗಿ ವಾಂತಿ, ಮಲಬದ್ಧತೆ, ಕಿಡ್ನಿ ಕಲ್ಲುಗಳ ಅಪಾಯ ಉಂಟಾಗಬಹುದು. ಹೀಗಾಗಿ ಎಚ್ಚರಿಕೆ ಅಗತ್ಯ, ವೈದ್ಯರ ಮೇಲ್ವಿಚಾರಣೆಯಿಲ್ಲದೆ ಇದನ್ನು ತೆಗೆದು ಕೊಳ್ಳುವುದು ತಪ್ಪು. ನಿಯಮಿತ ಬಿಸಿಲಿಗೆ ಮೈಯನ್ನು ಒಡ್ಡಿ ಕೊಳ್ಳುವಿಕೆ ಮತ್ತು ಸಮತೋಲಿತ ಜೀವನಶೈಲಿಯ ಮೂಲಕ ವಿಟಮಿನ್ ಡಿ3ಯ ಮಟ್ಟವನ್ನು ಸರಿಯಾಗಿರಿಸಿ. ಇದು ನಿಮ್ಮ ದೇಹವನ್ನು ಬಲಿಷ್ಠಗೊಳಿಸಿ, ರೋಗಗಳಿಂದ ರಕ್ಷಿಸುತ್ತದೆ.

ವರದಿ : ಡಾ. ಕೆ.ಬಿ.ಸೂರ್ಯ ಕುಮಾರ್  

Share. Facebook Twitter Pinterest LinkedIn Tumblr Email WhatsApp
Previous Article*ನಮ್ಮ ಜಿಲ್ಲೆ ನಮ್ಮ ಹೆಮ್ಮೆ : ಕಾವೇರಿ ಶಾಲೆಯಲ್ಲಿ ಪುತ್ತರಿ ಹಬ್ಬದ ಸಂಭ್ರಮ*
Next Article *ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ : ಕಠಿಣ ಕ್ರಮಕ್ಕೆ ಸಂಸದ ಯದುವೀರ್‌ ಆಗ್ರಹ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.