Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ : ಶಿಕ್ಷಕರು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ : ಶರ್ಮಿಳಾ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ : ಶಿಕ್ಷಕರು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ : ಶರ್ಮಿಳಾ ಸಲಹೆ*

ಡಿಸೆಂಬರ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಡಿ.12 NEWS DESK : ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮದ ಪ್ರೌಢಶಾಲಾ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಪಾಂಡುರಂಗ ಪ್ರಥಮ ಸ್ಥಾನವನ್ನು ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಐರಿನ್ ಉಷಾ ದ್ವಿತೀಯ ಸ್ಥಾನವನ್ನು ಪಡೆದರು. ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಮೋದ್ ಹಾಗೂ ಇಸಿಓ ಜಾನೆಟ್ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದರು. ಸಾಮಾನ್ಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಸಿ.ಎಂ.ಮುನೀರ್, ಬಿ.ಎಂ.ಮೀನಾ ಹಾಗೂ ಬಿ.ಎನ್.ಜಯಂತಿ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗಮಂಡಲದ ಜ್ಞಾನೋದಯ ಪ್ರೌಢಶಾಲೆಯ ಶಿಕ್ಷಕಿ ಪ್ರತಿಭಾ ಎಂ ಪ್ರಥಮ ಸ್ಥಾನ ಗಳಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಮಡಿಕೇರಿಯ ಯುರೋ ಕಿಡ್ಸ್ ಶಾಲೆಯ ಶಿಕ್ಷಕಿ ರಶ್ಮಿ ದೀಪ ಪ್ರಥಮ ಸ್ಥಾನವನ್ನು ಪುತ್ಯಪೆರಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮೋಹನ್ ಪೆರಾಜೆ ದ್ವಿತೀಯ ಸ್ಥಾನವನ್ನು, ಚೆಂಬು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರೋಹಿತ್ ಕುಮಾರ್ ತೃತೀಯ ಸ್ಥಾನವನ್ನು ಗಳಿಸಿದರು. ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ನಾಪೋಕ್ಲು ಕೆಪಿಎಸ್ ಶಾಲೆಯ ಚಂದ್ರಮತಿ ಪ್ರಥಮ ಸ್ಥಾನವನ್ನು ಮಡಿಕೇರಿಯ ಯುರೋಕಿಡ್ಸ್ ಶಾಲೆಯ ಚೈತನ್ಯ ಬಿ.ಪಿ.ದ್ವಿತೀಯ ಸ್ಥಾನವನ್ನು ಹಾಗೂ ಕಡಗದಾಳು ಸಿಆರ್ಪಿ ನಿಶಾ ಪಿ.ಸಿ ತೃತೀಯ ಸ್ಥಾನವನ್ನು ಗಳಿಸಿದರು. ಸಾಮಾನ್ಯ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಚೆಯ್ಯಂಡಾಣೆಯ ಸಿಆರ್ಪಿ ಪವಿತ್ರ ಪ್ರಥಮ ಸ್ಥಾನವನ್ನು ,ಪೆರಾಜೆ ಕುಂದಲ್ಪಾಡಿಯ ಶಿಕ್ಷಕ ಎನ್.ಎಸ್ ಕುಮಾರ್ ದ್ವಿತೀಯ ಸ್ಥಾನವನ್ನು, ಮಡಿಕೇರಿಯ ಕ್ಷೇತ್ರ ಸಂಪನ್ಮೂಲ ಸಮನ್ವಯ ವ್ಯಕ್ತಿ ವೀಣಾ ಎನ್ ದ್ವಿತೀಯ ಸ್ಥಾನವನ್ನು ಗಳಿಸಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಮೇಕೇರಿ ಸಿಆರ್ ಪಿ ಕಲ್ಪನಾ ಪಿ.ಆರ್ ಪ್ರಥಮ ಸ್ಥಾನವನ್ನು, ಜ್ಞಾನೋದಯ ಭಾಗಮಂಡಲ ಶಾಲೆಯ ವರ್ಷ ಎಂ.ಎ ದ್ವಿತೀಯ ಸ್ಥಾನವನ್ನು ಹಾಗೂ ಚೇರಂಬಾಣೆಯ ಸಿಆರ್‍ಪಿಬಿ ಚಂದ್ರಿಕಾ ದ್ವಿತೀಯ ಸ್ಥಾನವನ್ನು ಗಳಿಸಿದರು. :: ಸಭಾ ಕಾರ್ಯಕ್ರಮ :: ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮೂಹ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಶರ್ಮಿಳಾ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಶೈಕ್ಷಣಿಕ ವರ್ಷದಲ್ಲಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಅಂತೆಯೇ ಶಿಕ್ಷಕರು ಸಹ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ವಿವಿಧ ಸಹಪಠ್ಯ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ವಿವಿಧ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ ಮಾತನಾಡಿ, ಶಿಕ್ಷಕರ ಕಲ್ಯಾಣ ನಿಧಿ ಶಿಕ್ಷಕರ ಪ್ರತಿಭೆಗಳನ್ನು ಗುರುತಿಸಲು ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸುತ್ತಿದೆ. ಆದರೆ ಸಹಪಠ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಶಿಕ್ಷಕರ ಸಂಖ್ಯೆ ಇಳಿಮುಖಗೊಳ್ಳುತ್ತಿದೆ, ಶಾಲಾ ಜಂಜಾಟದಿಂದ ಹೊರಬಂದು ಶಿಕ್ಷಕರು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದರು.ಎಲೆಮರೆಯ ಕಾಯಿಯಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶಿಕ್ಷಕರು ನಮ್ಮನಡುವೆ ಇದ್ದಾರೆ. ಅಂತಹ ಪ್ರತಿಭಾವಂತ ಶಿಕ್ಷಕರನ್ನು ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಗೌರವಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವೈಪಿಸಿ ಕೃಷ್ಣಪ್ಪ ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಇಸಿಒ ಜಾನೆಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಆಶುಭಾಷಣ, ಪ್ರಬಂಧ ,ಸಾಮಾನ್ಯ ಜ್ಞಾನದ ರಸಪ್ರಶ್ನೆ, ವಿಜ್ಞಾನ ರಸಪ್ರಶ್ನೆ ,ಚಿತ್ರಕಲೆ ಪಾಠೋಪಕರಣ ತಯಾರಿ ಸೇರಿದಂತೆ ವಿವಿಧ ಸ್ಪರ್ಧೆಗಳು ಜರುಗಿದವು. ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿವಿಧ ಶಿಕ್ಷಕರು ಪಾಲ್ಗೊಂಡಿದ್ದರು. ವಿಜೇತ ಶಿಕ್ಷಕರಿಗೆ ಕ್ರಮವಾಗಿ ರೂ.1500, ರೂ.1000 ಮತ್ತು ರೂ.500 ನಗದು ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ವರದಿ : ದುಗ್ಗಳ ಸದಾನಂದ. 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.