ಮಡಿಕೇರಿ ಡಿ.15 NEWS DESK : ಮಡಿಕೇರಿ ತಾಲ್ಲೂಕಿನ ಮರಗೋಡು ಹೊಸ್ಕೇರಿ ಗ್ರಾಮದ ಬೇರಂಗಿ ಬೆಟ್ಟದ ‘ಬಯಲ ಈಶ್ವರ ಸನ್ನಿಧಿ’ಯಲ್ಲಿ ಡಿ.21 ರಂದು ಏಳನೇ ವಾರ್ಷಿಕೋತ್ಸವ ನಡೆಯಲಿದೆ. ವಾರ್ಷಿಕೋತ್ಸವ ಪ್ರಯುಕ್ತ ಅಂದು ಬೆಳಗ್ಗೆ 10 ಗಂಟೆಗೆ ಈಶ್ವರನ ಸನ್ನಿಧಿಯಲ್ಲಿ ವಿಶೇಷ ಪೂಜೆ, ಮಹಾ ಮಂಗಳಾರತಿ ನಡೆಯಲಿದೆ. ಬಳಿಕ ಭಕ್ತರಿಗೆ ಅನ್ನದಾನವನ್ನು ಏರ್ಪಡಿಸಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಿ.ಎಂ.ರಾಮಣ್ಣ ಮನವಿ ಮಾಡಿದ್ದಾರೆ.











