Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೈಸೂರಿನಲ್ಲಿ ಅರೆಭಾಷೆ ದಿನಾಚರಣೆ : ಅರೆಭಾಷೆ ಸಮುದಾಯ ತಮ್ಮ ಇತಿಹಾಸ ಅರಿತು ಮುನ್ನಡೆಯಲು ಡಾ.ಕುಶ್ವಂತ್ ಕರೆ*
ಇತ್ತೀಚಿನ ಸುದ್ದಿಗಳು

*ಮೈಸೂರಿನಲ್ಲಿ ಅರೆಭಾಷೆ ದಿನಾಚರಣೆ : ಅರೆಭಾಷೆ ಸಮುದಾಯ ತಮ್ಮ ಇತಿಹಾಸ ಅರಿತು ಮುನ್ನಡೆಯಲು ಡಾ.ಕುಶ್ವಂತ್ ಕರೆ*

ಡಿಸೆಂಬರ್ 16, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ನಾಪೋಕ್ಲು ಡಿ.16 NEWS DESK : ಅರೆಭಾಷೆ ಸಮುದಾಯಕ್ಕೆ ತನ್ನದೇ ಆದ ಇತಿಹಾಸವಿದ್ದು, ಪ್ರಾಚೀನ ಕಾಲದಿಂದಲೂ ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ ಎಂದು ನಿವೃತ್ತ ಮೇಜರ್, ಡಾ.ಕುಶ್ವಂತ್ ಕೋಳಿಬೈಲು ಅವರು ಅಭಿಪ್ರಾಯ ಪಟ್ಟರು. ಮೈಸೂರಿನ ಕೊಡಗು ಗೌಡ ಸಮಾಜದ ಆಶ್ರಯದಲ್ಲಿ ನಡೆದ ಅರೆಭಾಷೆ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಸಮುದಾಯದ ಸಹಬಾಳ್ವೆಯಿಂದಾಗಿ ಪ್ರಾಚೀನ ಕಾಲದ ಎಲ್ಲಾ ಊರುಗಳ ದೇವಾಲಯಗಳಲ್ಲಿ ತಕ್ಕ ಮುಖ್ಯಸ್ಥರಾಗಿ ಅಧಿಕಾರ ಹೊಂದಿ ಅಂದಿನ ಕಾಲದ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದರು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು. ಭಾರತದಿಂದ ಬ್ರಿಟಿಷರನ್ನು ಓಡಿಸಲು, 1837ರಲ್ಲೇ ಕೆದಂಬಾಡಿ ರಾಮೇಗೌಡ ಹಾಗೂ ಗುಡ್ಡೆಮನೆ ಅಪ್ಪಯ್ಯ ಗೌಡ ಎಲ್ಲಾ ಜನರನ್ನು ಸಂಘಟಿಸಿ ಹೋರಾಡಿರುವುದು ಅವರ ನಾಯಕತ್ವದ ಗುಣವನ್ನು ತೋರಿಸುತ್ತದೆ. ಇಂತಹ ಗುಣವನ್ನು ಹೊಂದಿದ ಸಮುದಾಯ ತನ್ನ ಇತಿಹಾಸವನ್ನು ಅರಿತುಕೊಂಡು ಮುನ್ನಡೆಯುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು. ಸಮಾರಂಭದಲ್ಲಿ ಭಾಗವಹಿಸಿದ್ದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಪೆÇನ್ನಚ್ಚನ ಮೋಹನ ಮಾತನಾಡಿ, ಅರೆ ಭಾಷೆಯನ್ನು ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳಿಸದೆ ಬೇರೆಯವರಿಗೂ ಕಲಿಸಿದಾಗ ಭಾಷೆ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ ಎಂದರು. ಇದೇ ಸಂದರ್ಭ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಮೈಸೂರಿನ ಉದ್ಯಮಿ ಚೆರಿಯಮನೆ ನರೇಶ್ ಕುಮಾರ್ ಅವರು, ಪ್ರತಿಯೊಬ್ಬರು ಸಮಯದ ಪಾಲನೆಯೊಂದಿಗೆ ಚಟುವಟಿಕೆಯಲ್ಲಿ ತೊಡಗಬೇಕು, ಸ್ಥಳೀಯ ಪರಿಸರದೊಂದಿಗೆ ಮಿಳಿ ತವಾಗಿರುವ ಅರೆ ಭಾಷೆ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಕರೆ ನೀಡಿದರು. ಮೈಸೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಅವರು ಮಾತನಾಡಿ, ಅರೆಭಾಷಿಕ ಸಮುದಾಯದ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಈ ಸಾಲಿನಿಂದ ವಿದ್ಯಾರ್ಥಿವೇತನ ನೀಡುತ್ತಿದ್ದು, ಅದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಉದ್ಯಮಿ ಗುಡ್ಡೆಮನೆ ಸತೀಶ್ ಬಾಲಕೃಷ್ಣ ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾನಡ್ಕ ಪದ್ಮಾಜಿ ದಂಪತಿಗಳು ಹಾಗೂ ಕುಯುಮುಡಿ ಅಶ್ವಿನಿ ಕುಮಾರ್ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡಿದ ಬಹುಮಾನಗಳನ್ನು ಗಣ್ಯರು ವಿತರಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಗೌಡ ಸಮಾಜದ ಕಾರ್ಯದರ್ಶಿ ಪೊನ್ನೆಟಿ ನಂದ ಸ್ವಾಗತಿಸಿದರೆ, ನಿರ್ದೇಶಕ ಪಟ್ಟಡ ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಹ ಕಾರ್ಯದರ್ಶಿ ನಡುಮನೆ ಚೆಂಗಪ್ಪ ವಂದಿಸಿದರು. ಇದೇ ಸಂದರ್ಭದಲ್ಲಿ ಅರೆ ಭಾಷೆ ದಿನಾಚರಣೆಯ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಅಲ್ಲದೆ ಮೈಸೂರಿನ ಕೊಡಗು ಗೌಡ ಯುವ ವೇದಿಕೆಯವರು ಏರ್ಪಡಿಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜದ ಪದಾಧಿಕಾರಿಗಳಾದ ಕುದುಪಜೆ ಚಂದ್ರಶೇಖರ್, ನಡುವಟಿರ ಲಕ್ಷ್ಮಣ್, ಹೊಸೂರು ರಾಘವ, ಕುಂಟುಪುಣಿ ರಮೇಶ್, ಚಪ್ಪೇರ ಯಮುನಾ, ಕುಂಟುಪುಣಿ ಶೀಲ, ತೋಟಂಬೈಲು ಇಂದಿರಾ ಮೊದಲಾದವರು ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಭಾಗಮಂಡಲದಲ್ಲಿ ಅರೆಭಾಷೆ ದಿನಾಚರಣೆ*
Next Article *ಮಡಿಕೇರಿಯಲ್ಲಿ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ : ಸಾಧಕರಿಗೆ ಸನ್ಮಾನ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.