Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ : ಗಮನ ಸೆಳೆದ ನೃತ್ಯ ವೈಭವ*         
ಇತ್ತೀಚಿನ ಸುದ್ದಿಗಳು

*ನಾಪೋಕ್ಲು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ : ಗಮನ ಸೆಳೆದ ನೃತ್ಯ ವೈಭವ*         

ಡಿಸೆಂಬರ್ 16, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ನಾಪೋಕ್ಲು ಡಿ.16 NEWS DESK : ಶಿಸ್ತು, ವಿದೇಯತೆ ಮತ್ತು ಸಮಯ ಪಾಲನೆ ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕಾದ ಉತ್ತಮ ಹವ್ಯಾಸಗಳು ಎಂದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ  ಚೌರಿರ ಡಾ.ಜಗತ್ ತಿಮ್ಮಯ್ಯ ಹೇಳಿದರು. ನಾಪೋಕ್ಲು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಪೆÇೀಷಕರು ಮಕ್ಕಳಿಗೆ ಒಳ್ಳೆಯ ಮಾರ್ಗದರ್ಶನ ನೀಡದಿದ್ದರೆ ಮಕ್ಕಳು ಬೆಳೆಯಲು ಸಾಧ್ಯವಿಲ್ಲ. ಪೋಷಕರು ಮಕ್ಕಳಿಗೆ ಶಿಸ್ತು ಮತ್ತು ಸಮಯ ಪಾಲನೆಯ ಮಹತ್ವದ ಅರಿವು ಮೂಡಿಸಬೇಕು. ಮಕ್ಕಳಿಗೆ ಯಾವತ್ತು ಒಳ್ಳೆಯದನ್ನು ಹೇಳಿಕೊಡಬೇಕು. ಮಕ್ಕಳ ಬುದ್ಧಿ ಸ್ಮಿತಕ್ಕೆ ಬಂದಾಗ ಅವರು ಖಂಡಿತ ಒಳ್ಳೆಯದನ್ನು ಪಾಲಿಸುತ್ತಾರೆ ಎಂದರು.  ಕೊಡಗಿನ ಮಕ್ಕಳಲ್ಲಿ ಶಿಸ್ತು ಇದೆ. ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಅವರು ಜೀವನದುದ್ದಕ್ಕು ಶಿಸ್ತನ್ನು ಪಾಲಿಸಿದರು. ಅಂತಹ ನಾಡಿನಲ್ಲಿ ಹುಟ್ಟಿದ ಮಕ್ಕಳು ಶಿಸ್ತುಬದ್ಧ ಜೀವನ ನಡೆಸಲು ಶಕ್ತರು ಎಂದ ಅವರು, ಇಂದಿನ ದಿನಗಳಲ್ಲಿ ಆಂಗ್ಲ ಭಾಷೆಯ ಅಗತ್ಯ ಬಹಳಷ್ಟು ಇದೆ. ಭಾಷೆ ಕಲಿತರೆ ಎಲ್ಲಿ ಹೋದರು ಯಶಸ್ಸು ಸಿಗುತ್ತದೆ. ನಮ್ಮ ಜೀವನದ ಬಹುಪಾಲು ಅವಧಿಯನ್ನು ಮೊಬೈಲ್ ಆಕ್ರಮಿಸಿಕೊಂಡಿದೆ. ಮೊಬೈಲ್‍ನಲ್ಲಿ ಉತ್ತಮವಾದ ವಿಚಾರಗಳಿವೆ. ಆ ಉತ್ತಮ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಬಗ್ಗೆ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು ಎಂದು ಜಗತ್ ತಿಮ್ಮಯ್ಯ ಹೇಳಿದರು.  ಶಾಲೆಯಲ್ಲಿ ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳು ಹತ್ತು ಹಲವಾರು ಇವೆ. ಎನ್‍ಸಿಸಿ ಅಂತಹ ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಎಸಿಸಿಯಲ್ಲಿ ತೊಡಗಿಸಿಕೊಂಡರೆ ಸಮಾಜದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದರು. ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಉನ್ನತ ಸ್ಥಾನಮಾನಗಳನ್ನು ಪಡೆದಿದ್ದು ಸಂಸ್ಥೆಗೆ  ಕೀರ್ತಿಯನ್ನು ತಂದಿದ್ದಾರೆ ಎಂದ ಅವರು ಸಂಸ್ಥೆಯ ಉನ್ನತಿಕರಣಕ್ಕೆ ಎಲ್ಲರ ಸಹಕಾರ ಅವಶ್ಯಕತೆವಾಗಿದ್ದು ಸಹಕರಿಸುವಂತೆ ಮನವಿ ಮಾಡಿದರು. ಪೋಷಕರು ಮಕ್ಕಳ ಓದಿನ ಬಗ್ಗೆ ಗಮನಹರಿಸಿ ಕೈಜೋಡಿಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಿ  ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನಗಳನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭ ಆಡಳಿತ ಮಂಡಳಿಯ ಉಪಾಧ್ಯಕ್ಷ ನೆರವಂಡ  ಸುನಿಲ್ ದೇವಯ್ಯ, ಕಾರ್ಯದರ್ಶಿ ನಾಯಕಂಡ ದೀಪಕ್ ಚಂಗಪ್ಪ, ನಿರ್ದೇಶಕರುಗಳಾದ ಬಿದ್ದಾಟಂಡ ಪಾಪ ಮುದ್ದಯ್ಯ, ಬಿದ್ದಾಟಂಡ ಮುತ್ತಣ್ಣ, ಬೊಳ್ಳಚೆಟ್ಟಿರ ಸುರೇಶ್, ಕಲಿಯಂಡ ಕೌಶಿಕ್ ಕುಶಾಲಪ್ಪ, ಅಪ್ಪಚೆಟೊಳಂಡ ನವೀನ್ ಅಪ್ಪಯ್ಯ, ಚೌರಿರ ಮಂದಣ್ಣ, ಭಟ್ಟಿರ ಸುಬ್ಬಯ್ಯ, ಹಾಗೂ ಕೇಟೋಳಿರ ಅಪ್ಪಚ್ಚ ಶಿಕ್ಷಕ ಬೃಂದಾ, ಸಿಬ್ಬಂದಿ, ಪೆÇೀಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಶಿಕ್ಷಕಿ ಪಾಡಿಯಮ್ಮಂಡ ಚಂದ್ರಕಲಾ ಮಹೇಶ್ ಸ್ವಾಗತಿಸಿದರು. ಕಲ್ಯಾಟಂಡ ತನುಜ ಅತಿಥಿಗಳ ಪರಿಚಯ ಮಾಡಿದರು. ಶಾಲಾ ಚಟುವಟಿಕೆ ವರದಿಯನ್ನು ವಿದ್ಯಾರ್ಥಿ ನಾಯಕಿ ಸಾನ್ವಿಕ ಹಾಗೂ ಶಾಲಾ ವರದಿಯನ್ನು ಪ್ರಾಂಶುಪಾಲೆ ಕಲ್ಯಾಟಂಡ ಶಾರದಾ ವಾಚಿಸಿದರು, ಉದಿಯಂಡ ಶ್ವೇತಾ ಲೀಲಾವತಿ ಹಾಗೂ ಬೊಟ್ಟೋಳಂಡ ಸೌಮ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಬೊಳ್ಳಚೆಟ್ಟಿರ  ಶೋಭ ವಂದಿಸಿದರು. ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿ  ಜನಮನ ಸೆಳೆಯಿತು.

ವರದಿ : ದುಗ್ಗಳ ಸದಾನಂದ.

 

 

 

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ : ಸಾಧಕರಿಗೆ ಸನ್ಮಾನ*
Next Article *ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಚಿತ್ರಕಲಾ ಸ್ಪರ್ಧೆ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.