Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ : ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಸನ ಸಾಧ್ಯ : ಹಿರಿಯ ಪತ್ರಕರ್ತ ರವಿ ಕುಮಾರ್ ಟೆಲೆಕ್ಸ್ ಅಭಿಮತ*
ಇತ್ತೀಚಿನ ಸುದ್ದಿಗಳು

*ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ : ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಸನ ಸಾಧ್ಯ : ಹಿರಿಯ ಪತ್ರಕರ್ತ ರವಿ ಕುಮಾರ್ ಟೆಲೆಕ್ಸ್ ಅಭಿಮತ*

ಡಿಸೆಂಬರ್ 16, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಕುಶಾಲನಗರ ಡಿ.16 NEWS DESK : ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳುವುದರಿಂದ‌ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ಹಿರಿಯ ಪತ್ರಕರ್ತ ರವಿ ಕುಮಾರ್ ಟೆಲೆಕ್ಸ್ ಅಭಿಮತ ವ್ಯಕ್ತಪಡಿಸಿದರು. ಕುಶಾಲನಗರ ಸಮೀಪದ ಹುಣಸೆವಾಡಿ ಸರ್ಕಲ್ ನಲ್ಲಿರುವ ಕೂರ್ಗ್ ವಾಟರ್ ಪಾರ್ಕ್ ನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿ ಅಸ್ತಿತ್ವಕ್ಕೆ ಬಂದಿರುವ ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಕರ್ತರ ಉದ್ಯೋಗ, ಜೀವನ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತದೆ. ಇದೀಗ ರಚನಾತ್ಮಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸಿ ಮಾದರಿಯಾಗುತ್ತಿದೆ. ಇದಕ್ಕೆ ಕೊಡಗು ಸಂಘ ಪ್ರೇರಣಾ ಶಕ್ತಿಯಾಗಿದೆ. ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿ. ಈ ಕಾರ್ಯಕ್ರಮವನ್ನು ರಾಜ್ಯ ಮಟ್ಟದಲ್ಲಿ ವಿಸ್ತರಿಸುವ ಪ್ರಯತ್ನ ಮಾಡಲಾಗುವುದು ಎಂದ ಅವರು, ಕೊಡಗು ಸಾಂಸ್ಕೃತಿಕ ವೈಭವದ ತವರೂರು ಎಂದು ಬಣ್ಣಿಸಿದರು. ಪತ್ರಕರ್ತರ ಸಾಂಸ್ಕೃತಿಕ ವೇದಿಕೆಯನ್ನು ತಬಲ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ, ಖ್ಯಾತ ಹಾಸ್ಯ ನಟ ತುಕಾಲಿ ಸ್ಟಾರ್ ಎಂದು ಪ್ರಸಿದ್ಧಿ ಪಡೆದ ಸಂತೋಷ್ , ನಗು ಮನಸನ್ನು ಪ್ರಫುಲ್ಲಗೊಳಿಸುತ್ತದೆ. ಜೊತೆಗೆ ಯಶಸ್ಸು ನೀಡುತ್ತದೆ. ಬಡವ, ಶ್ರೀಮಂತ ಎಂಬ ಬೇಧ ಭಾವವಿಲ್ಲವಿರುವುದು ನಗುವಿಗೆ ಮಾತ್ರ. ನಗು ಆರೋಗ್ಯವನ್ನು ವೃದ್ಧಿಸುವುದರೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುತ್ತದೆ ಎಂದು ಪ್ರತಿಪಾದಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಸಮಸಮಾಜ ಪರಿಕಲ್ಪನೆ ಅಡಿಯಲ್ಲಿ ಪತ್ರಕರ್ತರು ಕೆಲಸ ಮಾಡಬೇಕು. ಪತ್ರಕರ್ತರು ಪೂರ್ವಾಗ್ರಹ ಪೀಡಿತರಾಗದೆ ಸಮಾಜದ ಪ್ರತಿಬಿಂಬವಾಗಬೇಕು ಎಂದು ಕರೆ ನೀಡಿದರು.
ರಾಜ್ಯ ಸಮಿತಿ ನಿರ್ದೇಶಕಿ ಬಿ.ಆರ್. ಸವಿತಾ ರೈ ಮಾತನಾಡಿ, ಪತ್ರಕರ್ತರು ಪ್ರತಿಭಾವಂತರಾಗಿದ್ದರೂ ವೃತ್ತಿ ಜಂಜಾಟದಿಂದ ಪ್ರತಿಭೆ ಅನಾವರಣ ಸಾಧ್ಯವಾಗುವುದಿಲ್ಲ. ಪತ್ರಕರ್ತರ ಸಾಂಸ್ಕೃತಿಕ ವೇದಿಕೆಯಿಂದ ಬಾಂಧವ್ಯ ವೃದ್ಧಿಯೊಂದಿಗೆ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆಯಾಗಲಿದೆ ಎಂದು ತಿಳಿಸಿದರು. ಸಾಂಸ್ಕೃತಿಕ ವೇದಿಕೆ ಸಂಚಾಲಕ ಟಿ.ಆರ್. ಪ್ರಭುದೇವ್  ಪ್ರಾಸ್ತಾವಿಕವಾಗಿ ಮಾತನಾಡಿ, ಮುಂದಿನ ದಿನಗಳಲ್ಲಿ ರಾಜ್ಯದ ಪತ್ರಕರ್ತರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಚಿಂತನೆ ಇದೆ. ಜೊತೆಗೆ ಚಳಿಗಾಲದ ಕವಿಗೋಷ್ಠಿ ಹಾಗೂ ಪತ್ರಕರ್ತರ ಕುಟುಂಬಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು. ಸದಾ ವೃತ್ತಿ ಜಂಜಾಟದಲ್ಲಿರುವ ಪತ್ರಕರ್ತರ ಪ್ರತಿಭೆ ಅನಾವರಣಕ್ಕೆ ಈ ವೇದಿಕೆ ಸಹಕಾರಿಯಾಗಲಿದೆ ಎಂದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ವೃತ್ತಿ ಒತ್ತಡದಲ್ಲಿರುವ ಪತ್ರಕರ್ತರಿಗೆ ಈ ಸಾಂಸ್ಕೃತಿಕ ವೇದಿಕೆ ಸಹಕಾರಿಯಾಗಲಿದೆ. ಪ್ರತಿಭಾವಂತ ಪತ್ರಕರ್ತರು ತಮ್ಮ ಪ್ರತಿಭೆ ಅನಾವರಣಕ್ಕೆ ವೇದಿಕೆಯನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭ ತುಕಾಲಿ ಸಂತೋಷ್, ರವಿಕುಮಾರ್ ಟೆಲೆಕ್ಸ್, ಹಿರಿಯ ಕಲಾವಿದ ಪರಮೇಶ್ ಸಾಗರ್, ಗಾಯಕ ಸತೀಶ್, ಕೂರ್ಗ್ ವಾಟರ್ ಪಾರ್ಕ್ ಮಾಲೀಕ ಲಕ್ಷ್ಮೀ ನಾರಾಯಣ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ರಾಷ್ಟ್ರೀಯ ಸಮಿತಿ ಸದಸ್ಯ ಪಳೆಯಂಡ ಪಾರ್ಥ ಚಿಣ್ಣಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ ಅಯ್ಯಪ್ಪ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ವೀರಾಜಪೇಟೆ ತಾಲೂಕು ಸಂಘದ ಅಧ್ಯಕ್ಷ ರೆಜಿತ್ ಕುಮಾರ್, ಪತ್ರಕರ್ತರ ಸಾಂಸ್ಕೃತಿಕ ವೇದಿಕೆ ಸಹ ಸಂಚಾಲಕ ಮಲ್ಲಿಕಾರ್ಜುನ್ ಸೇರಿದಂತೆ ಇನ್ನಿತರರು ಹಾಜರಿದ್ದರು. ಸದಸ್ಯ ರಘು ಹೆಬ್ಬಾಲೆ ಪ್ರಾರ್ಥಿಸಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ.ರಾಕೇಶ್ ಸ್ವಾಗತಿಸಿ, ಸದಸ್ಯ ಚನ್ನನಾಯಕ ನಿರೂಪಿಸಿ, ಜಿಲ್ಲಾ ನಿರ್ದೇಶಕ ಜಗದೀಶ್ ಜೋಡುಬೀಟಿ ವಂದಿಸಿದರು.ಮಲ್ಲಿಕಾರ್ಜುನ್ ಹಾಗೂ ಜಯಪ್ರಕಾಶ್ ಅತಿಥಿ ಪರಿಚಯ ಮಾಡಿದರು. ಇದೇ ಸಂದರ್ಭ ಪತ್ರಕರ್ತರು ಕೂರ್ಗ್ ವಾಟರ್ ಪಾರ್ಕ್ ನಲ್ಲಿ ಸಾಹಸ ಹಾಗೂ ಜಲಕ್ರೀಡೆಯ ಅನುಭವ ಪಡೆದುಕೊಂಡರು.
:: ಹಾಸ್ಯದ ಕಚಗುಳಿಯಿಟ್ಟ ತುಕಾಲಿ ಸಂತೋಷ್ ::  ಬಿಗ್ ಬಾಸ್ ಸ್ಪರ್ಧಿ, ಹಾಸ್ಯ ನಟ ತುಕಾಲಿ ಸಂತೋಷ್ ಚಲನಚಿತ್ರ ನಟರ ಮಿಮಿಕ್ರಿ ಹಾಗೂ ಹಾಸ್ಯ ಚಟಾಕಿ ಮೂಲಕ ನಗುವಿನ ಹೊನಲು ಹರಿಸಿದರು.  ಧಿರೇಂದ್ರ ಗೋಪಾಲ್, ಅಂಬರೀಶ್, ದೇವರಾಜ್, ಮುಸುರಿ ಕೃಷ್ಣಮೂರ್ತಿ, ಯಶ್, ಹುಚ್ಚ ವೆಂಕಟ್ ಸೇರಿದಂತೆ ಇನ್ನಿತರ ನಟರ ಧ್ವನಿಯನ್ನು ಅನುಕರಿಸುವದರೊಂದಿಗೆ ಹಾಸ್ಯದ ಕಚಗುಳಿಯಿಟ್ಟು ರಂಜಿಸಿದರು. :: ಪತ್ರಕರ್ತರ ಸಾಂಸ್ಕೃತಿಕ ಕಲರವ ::  ಕಾರ್ಯಕ್ರಮದಲ್ಲಿ ಅನೇಕ ಪತ್ರಕರ್ತರು ಗಾಯನ, ಮಿಮಿಕ್ರಿ ಹಾಗೂ ಕವನ ವಾಚನ ಮೂಲಕ ಸಾಂಸ್ಕೃತಿಕ ಕಲರವ ಮೂಡಿಸಿದರು. ರೆಜಿತ್ ಕುಮಾರ್, ಮಲ್ಲಿಕಾರ್ಜುನ್, ಕುಡೆಕಲ್ ಗಣೇಶ್, ಶಿವರಾಜ್, ಸತೀಶ್ ಸಿಂಗಿ, ರಫೀಕ್ ಅಹಮ್ಮದ್, ಮುಸ್ತಾಫ, ಅಬ್ದುಲ್ಲಾ, ಪ್ರಭುದೇವ್, ಜಯಪ್ರಕಾಶ್, ಸತೀಶ್ ಸಿಂಗಿ ಅವರಿಂದ ಗಾಯನ, ರೆಜಿತ್, ಚನ್ನನಾಯಕ, ಮಲ್ಲಿಕಾರ್ಜುನ್ ಮಿಮಿಕ್ರಿ ಮಾಡಿ ರಂಜಿಸಿದರು. ಅಬ್ದುಲ್ಲಾ ಹಾಗೂ ಜಗದೀಶ್ ಜೋಡುಬೀಟಿ ಕವನ ವಾಚಿಸಿ ಮುದ ನೀಡಿದರು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಯಡವನಾಡಿನ ಹಸಿರು ಪರಿಸರದಲ್ಲಿ ಕವಿಗೋಷ್ಠಿ :  ಕವಿತೆ ಹುಟ್ಟಬೇಕೇ ಹೊರತು ಕಟ್ಟುವುದಲ್ಲ : ಕವಯಿತ್ರಿ ಲೀಲಾಕುಮಾರಿ ತೊಡಿಕಾನ ಅಭಿಮತ*
Next Article *ನಿಟ್ಟೂರಿನಲ್ಲಿ ಮಣ್ಣು ಪರೀಕ್ಷೆ ಮಾಹಿತಿ ಕಾರ್ಯಕ್ರಮ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.