Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮನೆ ಮನೆ ಭೇಟಿ ಸಹಿ ಸಂಗ್ರಹ ಅಭಿಯಾನ : ಸಿಪಿಐ(ಎಂ) ಪಕ್ಷದಿಂದ ಬೃಹತ್ ಪ್ರತಿಭಟನಾ ಬಹಿರಂಗ ಸಭೆ*
ಇತ್ತೀಚಿನ ಸುದ್ದಿಗಳು

*ಮನೆ ಮನೆ ಭೇಟಿ ಸಹಿ ಸಂಗ್ರಹ ಅಭಿಯಾನ : ಸಿಪಿಐ(ಎಂ) ಪಕ್ಷದಿಂದ ಬೃಹತ್ ಪ್ರತಿಭಟನಾ ಬಹಿರಂಗ ಸಭೆ*

December 17, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.17 NEWS DESK : ಜನಸಾಮಾನ್ಯರು ಹಾಗೂ ರೈತರ ಸಮಸ್ಯೆಗಳನ್ನು ಅರಿತು ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಹೋರಾಟಗಳನ್ನು ರೂಪಿಸಲು ಸಿಪಿಐ(ಎಂ) ಪಕ್ಷ ಮುಂದಾಗಿದೆ ಎಂದು ಪಕ್ಷದ ಕಾರ್ಯದರ್ಶಿ ಹೆಚ್.ಬಿ.ರಮೇಶ್ ತಿಳಿಸಿದರು. ವಿರಾಜಪೇಟೆಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಪಕ್ಷದ ವತಿಯಿಂದ ಡಿ.21ರಂದು ಹಮ್ಮಿಕೊಂಡಿರುವ ಹೋರಾಟದ ಕುರಿತು ಡಿ.15ರ ವರೆಗೆ ಮನೆ ಮನೆಗೆ ಭೇಟಿ ಮತ್ತು ಸಹಿ ಸಂಗ್ರಹ ಕಾರ್ಯಕ್ರಮ ಮಾಡಲಾಗಿದೆ. ಜನಸಾಮಾನ್ಯರು, ರೈತರ ಸಮಸ್ಯೆಗಳನ್ನು ಆಲಿಸಿ, ಅವರ ಬೇಡಿಕೆಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರದ ಮುಂದೆ ಇಡಬೇಕು ಎಂದು ಪಕ್ಷ ತೀರ್ಮಾನಿಸಿದೆ. ಡಿ.21 ರಂದು 50 ಸಾವಿರಕ್ಕೂ ಹೆಚ್ಚು ಜನರು ಸೇರಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಾಗೂ ಬಹಿರಂಗ ಸಭೆ ಮೂಲಕ ಸರಕಾರಕ್ಕೆ ಬೇಡಿಕೆಗಳ ಪಟ್ಟಿ ಸಲ್ಲಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡರು. ಕಾಫಿ ಬೆಳೆಯುವ ಕೊಡಗಿನಲ್ಲಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಜಿಲ್ಲೆಯ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸುವ ದೃಷ್ಟಿಯಿಂದ ಕೊಡಗು ಜಿಲ್ಲೆಗೆ ರೈಲು ಅವಶ್ಯಕತೆ ಇದ್ದು, ಶೀಘ್ರದಲ್ಲಿ ಕೇಂದ್ರ ಸರಕಾರ ಇದನ್ನು ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರಕಾರ ಬಂಡವಾಳ ಶಾಹಿಗಳ ಪಕ್ಷವಾಗಿದೆ. ರೈತರ, ಕೂಲಿಕಾರ್ಮಿಕರ, ಬಡವರ, ದಿನ ದಲಿತರ ವಿರೋಧಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ದೇಶದ ಬಹುಸಂಖ್ಯಾತರನ್ನು ವಂಚಿಸುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರ ಪಾಲಿಗೆ ಹಿಡಿ ಶಾಪವಾಗಿದೆ. ದಿನ ಬಳಕೆ ವಸ್ತುಗಳು, ಕೃಷಿ ಚಟುವಟಿಕೆ ವಸ್ತುಗಳು ದುಬಾರಿ ಮಾಡಿದೆ ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐಎಂ ಪಕ್ಷ ಸ್ವಾತಂತ್ರಕ್ಕಾಗಿ ತ್ಯಾಗ, ಬಲಿದಾನ ನೀಡಿದ ಪಕ್ಷವಾಗಿದೆ. ಬಡವರ, ಕೂಲಿ ಕಾರ್ಮಿಕರ, ದಿನ ದಲಿತರ ಪಕ್ಷವಾಗಿದೆ. ನಮ್ಮ ಹಕ್ಕಿಗಾಗಿ ನಿರಂತರ ಹೋರಾಟ ಅನಿವಾರ್ಯ. ಹೀಗಾಗಿ ಮನೆ ಮನೆ ಭೇಟಿ ನೀಡಿ ಸಹಿ ಸಂಗ್ರಹಿಸಿ ಜನಾಂದೋಲನಾ ನಡೆಸಲಾಗುತ್ತಿದೆ ಎಂದರು. ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯರಾದ ಭರತ್ ಪಿ.ಆರ್ ಮಾತನಾಡಿ, ಕಳೆದ 20 ದಿನಗಳಿಂದ ಮನೆಮನೆ ಭೇಟಿ ನೀಡಿ ಸಾವಿರಾರು ಸಹಿ ಸಂಗ್ರಹ ಮಾಡಿ ಕರಪತ್ರಗಳನ್ನು ಹಂಚಲಾಗಿದೆ. ಸಾಮಾಜಿಕ ನ್ಯಾಯ, ಸಮಾನತೆ, ಮಹಿಳೆ, ಅಲ್ಪಸಂಖ್ಯಾತರು, ಖಾಸಗಿಕರಣ, ಕೋಮುವಾದ, ರೇಷನ್ ವ್ಯವಸ್ಥೆ, ದಲಿತ ಮತ್ತು ಆದಿವಾಸಿಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಜನಸಾಮಾನ್ಯರನ್ನು ಭಾದಿಸುತ್ತಿರುವ ಗಂಭೀರ ಸಮಸ್ಯೆಗಳನ್ನು ಪರಿಹರಿಸಬೇಕು, ಜನಸಾಮಾನ್ಯರ ಬೇಡಿಕೆಗಳನ್ನು ಗಮನದಲ್ಲಿಟ್ಟು ಅಭಿವೃದ್ದಿಯೋಜನೆಗಳನ್ನು ರೂಪಿಸಬೇಕು ಎಂಬ ಆಗ್ರಹದೊಂದಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ, ಕೈಗಾರಿಕೆಗಳು, ಕೃಷಿ, ಸಂಬಂಧಿಸಿ ಸ್ಥಳೀಯ ಜನತೆಯ ಹಿತಾಸಕ್ತಿಗಳನ್ನು ಎತ್ತಿಹಿಡಿಯಬೇಕು, ಆರೋಗ್ಯ ರಂಗದಲ್ಲಿ ಪಿ.ಪಿ.ಪಿ ಮಾದರಿಗೆ ಅವಕಾಶ ನೀಡಬಾರದು, ಶ್ರಮಿಕರಿಗೆ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುವುದು ಸೇರಿದಂತೆ ಸೇವೆಗಳ ಖಾಸಗೀಕರಣ ತಡೆಯಬೇಕು. ಈ ನಿಟ್ಟಿನಲ್ಲಿ ನಮ್ಮ ಪ್ರತಿಭಟನಾ ಬಹಿರಂಗ ಸಭೆ ನಡೆಯಲಿದೆ. ಎಲ್ಲ ದುಡಿಯುವ ಕೈಗಳು ಸಹಕಾರ ನೀಡಿ ಬಹಿರಂಗ ಸಭೆಯಲ್ಲಿ ಭಾಗವಹಿಸಬೇಕು ಎಂದರು. ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯರಾದ ಎ.ಸಿ.ಸಾಬು ಮಾತನಾಡಿ, ಅಸಂಘಟಿತ ಕಾರ್ಮಿಕರ ಶೋಷಣೆಗೆ ಕಡಿವಾಣ ಹಾಕುವುದು ಮುಂತಾದ ವಿಷಯಗಳ ಜೊತೆಗೆ, ಅಭಿವೃದ್ದಿ ಎಂಬುದು ಸಮಾಜದ ಮೇಲ್ಪದರದಲ್ಲಿರುವ ಜನಗಳಿಗಷ್ಟೆ ಸೀಮಿತವಾಗದೆ ಸಮಸ್ತ ಜನವಿಭಾಗಗಳನ್ನು ಒಳಗೊಳ್ಳುವಂತೆ ಯೋಜನೆಗಳನ್ನು ರೂಪಿಸಬೇಕು ಎಂಬ ಆಗ್ರಹದೊಂದಿಗೆ ಸಿಪಿಐಎಂ ಪಕ್ಷವು ಬಹಿರಂಗ ಸಭೆ ಹಮ್ಮಿಕೊಂಡಿದೆ. ಶಿಕ್ಷಣ, ಆರೋಗ್ಯದ ಲಾಭಿಗಳು, ರಿಯಲ್ ಎಸ್ಟೇಟ್ ಮುಂತಾದ ದೊಡ್ಡ ಉದ್ಯಮಿಗಳ ಪರವಾಗಿ ಆಳುವ ವರ್ಗ ರೂಪಿಸುತ್ತಿರುವ ಇಂದಿನ ಏಕಪಕ್ಷೀಯ ಅಭಿವೃದ್ಧಿಗೆ ಪರ್ಯಾಯವಾದ ಕಣ್ಣೋಟದೊಂದಿಗೆ, ಜನ ಸಾಮಾನ್ಯರ ಬದುಕು ಉತ್ತಮಗೊಳಿಸುವ ಉದ್ದೇಶದೊಂದಿಗೆ ನಡೆಯುತ್ತಿರುವ ಈ ಜನಾಗ್ರಹ ಕಾರ್ಯಕ್ರಮವನ್ನು ಜಿಲ್ಲೆಯ ಜನತೆ ಬೆಂಬಲಿಸಬೇಕು ಎಂದು ಹೇಳಿದರು. ಈ ಸಂದರ್ಭ ಸಿಪಿಐ(ಎಂ)ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಪದ್ಮಿನಿ ಶ್ರೀಧರ್ ಸೇರಿದಂತೆ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಬದುಕು-ಬರಹ ಉಪನ್ಯಾಸ ಕಾರ್ಯಕ್ರಮ : ಮೊಗಳ್ಳಿ ಗಣೇಶ್ ಅವರ ಚಿಂತನೆಗಳು ನಮ್ಮನ್ನು ಹೃದಯಕ್ಕೆ ಇಳಿಸುತ್ತವೆ : ಡಾ.ರೇಣುಕಾ ಪ್ರಸಾದ್*
Next Article *ಬೆಳಗಾವಿಯ ಸುವರ್ಣ ಸೌಧದ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರ ಪ್ರತಿಭಟನೆ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.