Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ದಕ್ಷಿಣ ಪ್ರಾಂತ ಸಮ್ಮೇಳನ ಸಮಾರೋಪ : ಮನೋಜ್ ನಂದೀಶಪ್ಪಗೆ ಎಬಿವಿಪಿ ಯುವ ಪುರಸ್ಕಾರ ಪ್ರದಾನ*
ಇತ್ತೀಚಿನ ಸುದ್ದಿಗಳು

*ದಕ್ಷಿಣ ಪ್ರಾಂತ ಸಮ್ಮೇಳನ ಸಮಾರೋಪ : ಮನೋಜ್ ನಂದೀಶಪ್ಪಗೆ ಎಬಿವಿಪಿ ಯುವ ಪುರಸ್ಕಾರ ಪ್ರದಾನ*

December 19, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.19 NEWS DESK : ‘ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ’ ಎನ್ನುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಧ್ಯೇಯ ವಾಕ್ಯದ ಸಾಕಾರವಾಗಬೇಕಿದ್ದಲ್ಲಿ, ನಮ್ಮಲ್ಲಿ ನಾವು ಪರಿವರ್ತನೆಯನ್ನು ಕಾಣುವುದು ಅವಶ್ಯ. ಇಂತಹ ಪರಿವರ್ತನೆಗಾಗಿ ‘ಅಧ್ಯಯನ’ಕ್ಕೆ ಮಹತ್ವವನ್ನು ನೀಡಬೇಕೆಂದು ಖ್ಯಾತ ವಾಗ್ಮಿ ಹಾಗೂ ಮೀಡಿಯಾ ಮಾಸ್ಟರ್ ಯೂ ಟ್ಯೂಬ್ ಸಂಸ್ಥಾಪಕ ಎಂ.ಎಸ್.ರಾಘವೇಂದ್ರ ಯುವ ಸಮೂಹಕ್ಕೆ ಕರೆ ನೀಡಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 45ನೇ ದಕ್ಷಿಣ ಪ್ರಾಂತ ಸಮ್ಮೇಳನದ ಕೊನೆಯ ಹಾಗೂ ಮೂರನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಬ್ರಿಟಿಷರ ಆಳ್ವಿಕೆಯ ಅವಧಿಯಲ್ಲಿ ಜಾರಿಗೆ ಬಂದ ಮೆಕಾಲೆ ಶಿಕ್ಷಣ ಪದ್ಧತಿ ನಮ್ಮಲ್ಲಿ ‘ಪ್ರಶ್ನಿಸುವ’ ಮನೋಭಾವವನ್ನು ಮರೆಸಿ, ಗುಲಾಮಗಿರಿತನವನ್ನಷ್ಟೆ ತುಂಬಿತು. ಸ್ವಾತಂತ್ರ್ಯ ಬಂದು ಇಲ್ಲಿಯವರೆಗೂ ನಾವು ಅಂದಿನ ಶಿಕ್ಷಣ ಪದ್ಧತಿಗಳಡಿಯಲ್ಲೇ ಸಾಗುತ್ತಿದ್ದೇವೆ ಎಂದು ವಿಷಾದಿಸಿದರು. ಸ್ವಾತಂತ್ರ್ಯ ಬಂದ ಅವಧಿಯಲ್ಲಿಯೂ ಗುಲಾಮಗಿರಿತನದ ಮನೋಭಾವವೆ ನಮ್ಮನ್ನು ಆವರಿಸಿತ್ತು. ಇವುಗಳ ನಡುವೆ ಕೆಲವರು ಯುವ ಸಮೂಹದಲ್ಲಿ ರಾಷ್ಟ್ರಾಭಿಮಾನವನ್ನು, ಸ್ವಾಭಿಮಾನವನ್ನು ತುಂಬುವ ಮೂಲಕ, ವ್ಯಕ್ತಿಯಿಂದ ರಾಷ್ಟ್ರ ನಿರ್ಮಾಣ ಎನ್ನುವ ಚಿಂತನೆಗಳನ್ನು ಯುವ ಸಮೂಹದಲ್ಲಿ ತುಂಬುವ ಪ್ರಯತ್ನಗಳಿಗೆ ಮುಂದಾದರು. ಅದರ ಫಲಸ್ವರೂಪವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಸ್ತಿತ್ವಕ್ಕೆ ಬಂದಿತೆಂದು ತಿಳಿಸಿದರು. ವ್ಯಕ್ತಿಯಿಂದ ರಾಷ್ಟ್ರ ನಿರ್ಮಾಣವೆಂದರೆ ನಿರಂತರವಾದ ಅಧ್ಯಯನದೊಂದಿಗೆ ಜ್ಞಾನ ಸಂಪತ್ತನ್ನು ತಮ್ಮದಾಗಿಸಿಕೊಳ್ಳುವುದು ಹಾಗೂ ಪರಿವರ್ತನೆಯತ್ತ ಮುಖ ಮಾಡುವುದು. ಇದರೊಂದಿಗೆ ತಮ್ಮ ಇತಿ ಮಿತಿಗಳಲ್ಲಿ, ಊರು, ಗ್ರಾಮ, ಬಡಾವಣೆಗಳಲ್ಲಿ ರಾಷ್ಟ್ರ ಹಿತಕ್ಕೆ ಪೂರಕವಾದ ಚಿಂತನೆಗಳನ್ನು ದಿನಕ್ಕೆ ಕನಿಷ್ಟ ಅರ್ಧ ಗಂಟೆಯ ಕಾಲ ಜನರಿಗೆ ತಲುಪಿಸುವ ಕಾರ್ಯದಲ್ಲಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ನಿರಂತರ ಪ್ರಕ್ರಿಯೆಯಾದಾಗ ರಾಷ್ಟ್ರ ನಿರ್ಮಾಣದ ಕನಸು ನನಸಾಗುತ್ತದೆ ಎಂದು ರಾಘವೇಂದ್ರ ಹೇಳಿದರು. ಪುಟ್ಟ ರಾಷ್ಟ್ರ ಇಸ್ರೇಲ್‍ನ್ನು ಕಟ್ಟಿ ಬೆಳೆÉಸುವಲ್ಲಿ ಮಹತ್ತರ ಪಾತ್ರ ವಹಿಸಿದ ಅಲ್ಲಿನ ಪ್ರಥಮ ಪ್ರಧಾನಿ ಬೆಂಗುರಿಯನ್ ಅವರು, ದೇಶವನ್ನು ಕಟ್ಟಿ ಅಧಿಕಾರ ಬಿಟ್ಟು ಗ್ರಾಮೀಣ ಭಾಗದಲ್ಲಿ ನೆಲೆಸಿದ್ದರು. ಬಳಿಕ ದೇಶಕ್ಕೆ ಅವರ ಅಗತ್ಯವಿದ್ದಾಗ ರಕ್ಷಣಾ ಸಚಿವರಾಗಿಯೂ ಕಾರ್ಯನಿರ್ವಹಿಸಿದರು. ಸ್ವಹಿತಾಸಕ್ತಿಗಳನ್ನು ಮರೆತು ರಾಷ್ಟ್ರ ಕಟ್ಟುವ ಅಂತಹ ನಾಯಕರು ಸ್ವಾತಂತ್ರ್ಯಾ ನಂತರದ ದಿನಗಳಲ್ಲಿ ಭಾರತಲ್ಲಿ ಕಂಡು ಬರಲೇ ಇಲ್ಲ. ಇಲ್ಲಿನ ಯಾವುದೇ ರಾಜಕಾರಣಿ ಅಧಿಕಾರ ಬಿಟ್ಟು ಹೊರ ಬರುವ ಮನಸ್ಥಿತಿಯನ್ನೆ ಹೊಂದಿಲ್ಲ. ‘ವ್ಯಕ್ತಿಯಿಂದ ರಾಷ್ಟ್ರ ನಿರ್ಮಾಣ’ ಎನ್ನುವ ಚಿಂತನೆಯನ್ನು ನಮ್ಮಲ್ಲಿ ತುಂಬದಿರುವುದೇ ಇದಕ್ಕೆ ಪ್ರಮುಖ ಕಾರಣವೆಂದು ಅಭಿಪ್ರಾಯಪಟ್ಟರು. *ಯುವ ಪುರಸ್ಕಾರ ಪ್ರದಾನ* ಬೆಂಗಳೂರಿನ ನಿವಾಸಿ, ಮಹಾನಗರಿಯ ಮರಗಳ ಸಂರಕ್ಷಣೆಗಾಗಿ ‘ಬೆಂಗಳೂರು ಹುಡುಗರು’ ಸಂಸ್ಥೆಯನ್ನು ಕಟ್ಟಿ ಶ್ರಮಿಸುತ್ತಿರುವ ಮನೋಜ್ ನಂದೀಶಪ್ಪ ಅವರಿಗೆ ಎಬಿವಿಪಿಯಿಂದ ಯುವ ಪುರಸ್ಕಾರ ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಮನೋಜ್ ನಂದೀಶಪ್ಪ ಅವರು ಬೆಂಗಳೂರಿನ ಮರಗಳ ಸಂರಕ್ಷಣೆಗಾಗಿ ‘ಮೊಳೆ ಮುಕ್ತ ಮರ’, ‘ಬಂಧನ ಮುಕ್ತ ಬೆಂಗಳೂರು’ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಆ ಮೂಲಕ ಮಹಾನಗರಿಯಲ್ಲಿ ಇರುವ ಮರಗಳ ಸಂರಕ್ಷಣೆ ನಮ್ಮ ಚಿಂತನೆಯಾಗಿದೆ. ಯುವಸಮೂಹ ಸಣ್ಣಪುಟ್ಟ ವಿಚಾರಗಳಿಗೆ ಬದುಕನ್ನು ಕಳೆದುಕೊಳ್ಳುತ್ತಿರುವ ಬಗ್ಗೆ ವಿಷಾದಿಸಿ, ಬದುಕನ್ನು ಧೈರ್ಯದಿಂದ ಎದುರಿಸಬೇಕು. ಧೈರ್ಯವಿದ್ದಲ್ಲಿ ಯಾವುದೇ ಸಾಧನೆ ಮಾಡಲು ಸಾಧ್ಯ ಎಂದರು. ಎಬಿವಿಪಿ ತುಮಕೂರು ವಿಭಾಗ ಪ್ರಮುಖ್ ಅಜಯ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಎಪ್ಪತೈದು ವರ್ಷಗಳಿಂದ ಎಬಿವಿಪಿ ಸಂಘಟನೆ ರಾಷ್ಟ್ರ ವ್ಯಾಪಿ ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣದ ತನ್ನಪರಿಕಲ್ಪನೆಯಡಿ ವಿದ್ಯಾರ್ಥಿ ಸ್ನೇಹಿ ಕಾರ್ಯಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ. ಸಮಾಜದ ವಿವಿಧ ಆಯಾಮಗಳ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಬರುತ್ತಿರುವುದಾಗಿ ತಿಳಿಸಿದರು. ಸಮಾರಂಭದಲ್ಲಿ ಎಬಿವಿಪಿ ದಕ್ಷಿಣ ಪ್ರಾಂತದ ಅಧ್ಯಕ್ಷ ಡಾ. ರವಿ ಮಂಡ್ಯ ಹಾಗೂ ದಕ್ಷಿಣ ಪ್ರಾಂತದ ಕಾರ್ಯದರ್ಶಿ ಗೋಪಿ ಅರವಿಂದ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ನನ್ನ ಕಲ್ಪನೆಯ ಸ್ವಚ್ಛ ಕೊಡಗು ಪ್ರಬಂಧ ಸ್ಪರ್ಧೆ : ಕೊಡಗು ವಿದ್ಯಾಲಯದ ವಿದ್ಯಾರ್ಥಿ ಎಂ.ರುಶಿಲ್ ಪ್ರಥಮ*
Next Article *ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ : ಜೆಜೆಎಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಸೂಚನೆ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.