ಮಡಿಕೇರಿ ಡಿ.20 NEWS DESK : ಕರ್ನಾಟಕ ಸರ್ಕಾರದ ಯೋಜನೆಯಂತೆ ಸೋಮವಾರಪೇಟೆ, ಶಾಂತಳ್ಳಿ, ಕೊಡ್ಲಿಪೇಟೆ, ಶನಿವಾರಸಂತೆ ಹೋಬಳಿಗಳ ವ್ಯಾಪ್ತಿಯಲ್ಲಿನ ಎಲ್ಲಾ ಗ್ರಾಮಗಳಿಗೆ ಸಂಬಂಧಿಸಿದಂತೆ ಇ-ಪೌತಿ ಖಾತೆ ಬದಲಾವಣೆ ಸಂಬಂಧ ಆಂದೋಲನ ನಡೆಯಲಿದೆ. ಪೌತಿ ವಾರಸುದಾರಿಕೆಯ ಖಾತೆಗೆ ಖಾತೆದಾರರ ಮರಣ ದೃಢೀಕರಣ ಪತ್ರ, ಒಂದು ವೇಳೆ ಮರಣ ದೃಢೀಕರಣ ಲಭ್ಯವಿಲ್ಲದಿದ್ದಲ್ಲಿ ಆಧಾರ ಮತ್ತು ಪಡಿತರ ಚೀಟಿ ದಾಖಲೆಗಳಂತೆ ಸಂಬಂಧಪಟ್ಟ ವಾರಸುದಾರರಿಂದ ಅಫಿಡೆವಿಟ್ ಪಡೆದುಕೊಳ್ಳುವುದು, ಆರ್ಡಿ ಸಂಖ್ಯೆಯುಳ್ಳ ವಂಶ ವೃಕ್ಷ ದೃಢೀಕರಣ ಪತ್ರ, ಚಾಲ್ತಿ ಸಾಲಿನ ಪಹಣಿ ಹಾಗೂ ಆಧಾರ್ ಪ್ರತಿ ಮತ್ತು ದೂರವಾಣಿ ಸಂಖ್ಯೆ ಈ ದಾಖಲಾತಿಗಳೊಂದಿಗೆ ಮನವಿಯನ್ನು/ ದಾಖಲೆಗಳನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಅವರು ತಿಳಿಸಿದ್ದಾರೆ.










