ಮಡಿಕೇರಿ ಡಿ.23 NEWS DESK : ದ.ಕ.ಆದಿದ್ರಾವಿಡ ಯುವ ವೇದಿಕೆ ನಿಯೋಗವು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ.ಎಂ.ಶಾಹೀದ್ ತೆಕ್ಕಿಲ್ ಅವರನ್ನು ಭೇಟಿ ಮಾಡಿದರು. ಸುಳ್ಯ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿದ ವೇದಿಕೆಯ ಪ್ರಮುಖರು ಹಾಗೂ ಪದಾದಿಕಾರಿಗಳು ಸುಳ್ಯ ತಾಲ್ಲೂಕಿನ ಕಸಬಾ ಗ್ರಾಮದಲ್ಲಿ ಆದಿದ್ರಾವಿಡ ಯುವ ವೇದಿಕೆಯ ನೂತನ ಸಮುದಾಯ ಭವನ ನಿರ್ಮಿಸಲು ಸರಕಾರದ ವತಿಯಿಂದ ಭೂಮಿಯನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿದರು. ಈ ಸಂದರ್ಭ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಆದಿದ್ರಾವಿಡ ಯುವ ವೇದಿಕೆಯ ಅಧ್ಯಕ್ಷ ಸುಂದರ, ಕಾರ್ಯದರ್ಶಿ ಸತೀಶ್, ಕೋಶಾಧಿಕಾರಿ ಗೋಪಾಲ ಆರಂಬೂರು, ಉಪಾಧ್ಯಕ್ಷ ಅಶ್ವಿನ್ ಅಜ್ಜಾವರ ಹಾಗೂ ಯೂತ್ ಕಾಂಗ್ರೆಸ್ ಮುಖಂಡ ರಂಜಿತ್ ರೈ ಮೇನಲ ಮುಂತಾದವರು ಉಪಸ್ಥಿತರಿದ್ದರು.











