ವಿರಾಜಪೇಟೆ ಡಿ.23 NEWS DESK : ವಿರಾಜಪೇಟೆಯಲ್ಲಿ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಅಂಬೇಡ್ಕರ್ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಾ.ಸುಭಾಷ್ ನಾಣಯ್ಯ ನೇತೃತ್ವದಲ್ಲಿ ಬಿಜೆಪಿಯ ಹಲವಾರು ನಾಯಕರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಹಾಗೂ ಶಾಸಕರ ಜನಪದ ಕಾಳಜಿ ಹಾಗೂ ಕಾರ್ಯ ವೈಖರಿಯನ್ನು ಮೆಚ್ಚಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಎಲ್ಲರಿಗೂ ಪಕ್ಷದ ಶಲ್ಯ ಹೊದಿಸಿ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಸಮಾಜದ ಪರ ಚಿಂತನೆ ಬೆಳೆಸಿಕೊಂಡು ನಾಡಿನ ಏಳಿಗೆಗೆ ಶ್ರಮಿಸುವ ಉದ್ದೇಶದಿಂದ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಎಲ್ಲರನ್ನೂ ಸ್ವಾಗತಿಸುತ್ತಾ ಶುಭಕೋರಿದರು. ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕೆಂದು ಸಲಹೆ ನೀಡಿದ ಶಾಸಕರು, ಒಳ್ಳೆಯ ಆಡಳಿತ ಹಾಗೂ ಜನಪರ ಕಾಳಜಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಾಧ್ಯ ಎಂದು ಹೇಳಿದರು. ಈ ಸಂದರ್ಭ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಅರುಣ್ ಮಾಚಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಪಕ್ಷದ ಮುಖಂಡರು, ಪ್ರಚಾರ ಸಮಿತಿಯ ಅಧ್ಯಕ್ಷರಾದ ಟಿ.ಪಿ.ರಮೇಶ್, ಹಿರಿಯ ಮುಖಂಡರು ಪೆಮ್ಮಂಡ ಪೊನ್ನಪ್ಪ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಡಿಸಿಸಿ ಸದಸ್ಯರು ಅಬ್ದುಲ್ ರೆಹಮಾನ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಮಿದೇರೀರ ನವೀನ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಾನಂಡ ಪ್ರತ್ಯು, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಸಾರ ಚಂಗಪ್ಪ, ಜಿಲ್ಲಾ ಅಲ್ಪಸಂಖ್ಯಾತರ ಘಟದ ಅಧ್ಯಕ್ಷ ಹನೀಫ್, ಕೆಪಿಪಿಸಿ ಒಬಿಸಿ ಘಟದ ಉಪಾಧ್ಯಕ್ಷ ಕೆ.ಎಂ.ಬಾಲಕೃಷ್ಣ, ಎಸ್ ಟಿ ಘಟದ ಅಧ್ಯಕ್ಷರು ಜಯೇಂದ್ರ, ಅಯ್ಯಪ್ಪ, ಪೊನ್ನಂಪೇಟೆ ಪ್ರಚಾರ ಸಮಿತಿಯ ಅಧ್ಯಕ್ಷರು ಟಾಟ್ಟು ಮೊಣ್ಣಪ್ಪ, ವಿರಾಜಪೇಟೆ ಪ್ರಚಾರ ಸಮಿತಿಯ ಅಧ್ಯಕ್ಷರು ಮತೀನ್, ಪಕ್ಷದ ಎಲ್ಲಾ ಹಿರಿಯ ನಾಯಕರುಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಡಿಸಿಸಿ ಪದಾಧಿಕಾರಿಗಳು, ಸರಕಾರ ನಾಮನಿರ್ದೇಶಿತ ಅಧ್ಯಕ್ಷರುಗಳು, ಸದಸ್ಯರುಗಳು, ಚುನಾಯಿತ ಜನಪ್ರತಿನಿಧಿಗಳು, ವಲಯ ಹಾಗೂ ಬೂತ್ ಮಟ್ಟದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಎಸ್ ಸಿ ಘಟದ ಅಧ್ಯಕ್ಷರುಗಳು, ಪದಾಧಿಕಾರಿಗಳು,ಅಲ್ಪಸಂಖ್ಯಾತರ ಘಟದ ಅಧ್ಯಕ್ಷರು, ಪದಾಧಿಕಾರಿಗಳು, ಒಬಿಸಿ ಘಟದ ಅಧ್ಯಕ್ಷರು ಪದಾಧಿಕಾರಿಗಳು, ಮಹಿಳಾ ಘಟಕದ ಅಧ್ಯಕ್ಷರುಗಳು ಪದಾಧಿಕಾರಿಗಳು, ಯುವ ಕಾಂಗ್ರೆಸ್ ಘಟದ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆ ಯಲ್ಲಿ ಸೇರಿದ ಕಾರ್ಯಕರ್ತರು ಉಪಸ್ಥಿತರಿದ್ದರು.











