ಮಡಿಕೇರಿ ಡಿ.25 NEWS DESK : ಕುಶಾಲನಗರ ಸಮೀಪದ ಬೊಳ್ಳೂರು ಗ್ರಾಮದಲ್ಲಿರುವ ಐಶ್ವರ್ಯ ಪಬ್ಲಿಕ್ ಸ್ಕೂಲ್ ಹಾಗೂ ಪದವಿ ಪೂರ್ವ ಕಾಲೇಜಿನ ‘ನೃತ್ಯ ಕಲಾಂಜಲಿ’ ವಾರ್ಷಿಕೋತ್ಸವ ಡಿ.26 ರಂದು ನಡೆಯಲಿದೆ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪುಲಿಯಂಡ ರಾಮ್ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎಲ್ ಚಿದಾನಂದ ಕುಮಾರ್ ಮುಖ್ಯ ಅತಿಥಿಗಳಾಗಿ ಮತ್ತು ವೀರಾಜಪೇಟೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಕೊಡಗು ಜಿಲ್ಲಾ ಪಿಯು ಕಾಲೇಜು ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಎನ್.ಕೆ.ಜ್ಯೋತಿ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










