
ಮಡಿಕೇರಿ ಡಿ.29 NEWS DESK : ಕನ್ನಡ ಭವನದ ವತಿಯಿಂದ ಕೊಡಮಾಡುವ ನಾಡೋಜ ಡಾ.ಕಯ್ಯಾರ ರಾಷ್ಟ್ರೀಯ ಪ್ರಶಸ್ತಿಗೆ ಬರಹಗಾರ, ಪತ್ರಕರ್ತ ಚಂದನ್ ನಂದರಬೆಟ್ಟು ಭಾಜನರಾಗಿದ್ದಾರೆ. ಡಾ.ವಾಮನ್ ರಾವ್ ಬೇಕಲ್-ಸಂದ್ಯಾ ರಾಣಿ ನೇತೃತ್ವದ ಕಾಸರಗೋಡುವಿನ ಕನ್ನಡ ಭವನ ರಜತ ಸಂಭ್ರಮ ಅಂಗವಾಗಿ ಜ.18 ರಂದು ಕಾಸರಗೋಡಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ.ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








