ಮಡಿಕೇರಿ ಡಿ.29 NEWS DESK : ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದಲ್ಲಿ ಕೊಡಗು ಜನತೆಯನ್ನು ದಶಕಗಳದಿಂದ ಕಾಡುತ್ತಿದ್ದ ಜಮ್ಮ ಹಾಗೂ ಪಟ್ಟೇದಾರ್ ಸಮಸ್ಯೆ ನಿವಾರಣೆಗೆ ಕಾನೂನು ರೂಪಿಸಲು ಕರ್ನಾಟಕ ಭೂಕಂದಾಯ ಮಸೂದೆಗೆಯನ್ನು ಅಂಗೀಕಾರಗೊಳಿಸಲು ಶ್ರಮಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕೊಡಗು ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭ ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷರು ದುಡಿಯಂಡ ಸೂಫಿ ಹಾಜಿ, ಉಪಾಧ್ಯಕ್ಷರು ಚಿಮ್ಮಿಚೀರ ಇಬ್ರಾಹಿಂ, ಕೋಶಾಧಿಕಾರಿ ಹಂಸ ಕೊಟ್ಟಮುಡಿ, ಸಂಘಟನಾ ಕಾರ್ಯದರ್ಶಿ ಇಸ್ಮಾಯಿಲ್, ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್ ,ವಿರಾಜಪೇಟೆ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಕೋಳುಮಂಡ ರಫೀಕ್, ರಜಕ್, ಮೈದು, ಪರವಂಡ ಸಿರಾಜ್, ಅಂದಾಯಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.











