ಸುಂಟಿಕೊಪ್ಪ ಡಿ.29 NEWS DESK : ಕೊಡಗು ಜಿಲ್ಲೆಯಿಂದ ಪ್ರಥಮ ಬಾರಿಗೆ ಫುಟ್ಬಾಲ್ ತೀರ್ಪುಗಾರರಾಗಿ ಆಯ್ಕೆಯಾದ ಕೊಡಗಿನ ಧೀರಾಜ್ ರೈ ಶ್ರೀನಿವಾಸ್ ಅವರನ್ನು ಅಮ್ಮತ್ತಿಯಲ್ಲಿರುವ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಅಮ್ಮತ್ತಿಯ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಕಾರ್ಯದರ್ಶಿ ಪಿ.ಎ.ನಾಗೇಶ್ ಉಪಾಧ್ಯಕ್ಷರಾದ ಕ್ರಿಸ್ಟೋಫರ್ ಮಡಿಕೇರಿ, ಖಜಾಂಚಿ ದೀಪು ಮಾಚಯ್ಯ, ಸಮಿತಿ ಸದಸ್ಯರಾದ ವಿಜೇಶ್ ಆಮ್ಮತ್ತಿ ತೀರ್ಪುಗಾರರಾದ ದರ್ಶನ್ ಸುಕುಮಾರ್ ಮತ್ತು ಆಶ್ವಥ್ ಇದ್ದರು.











