ಚೆಟ್ಟಳ್ಳಿ ಡಿ.29 NEWS DESK : ಚೆಟ್ಟಳ್ಳಿ ಕೊಡವ ಸಮಾಜದ ವತಿಯಿಂದ ಚೆಟ್ಟಳ್ಳಿಯ ಮಂಗಳ ಸಭಾಂಗಣದಲ್ಲಿ ಸಂಭ್ರಮದ ಪುತ್ತರಿ ನಮ್ಮೆರ ಊರೊರ್ಮೆ ಕೂಟ ನಡೆಯಿತು. ಕೊಡವ ಸಂಪ್ರದಾಯದ ದುಡಿಕೊಟ್ಟ್ ನೊಂದಿಗೆ ಸಭಾಂಗಣಕ್ಕೆ ತೆರಳಲಾಯಿತು. ಪುರುಷ, ಮಹಿಳೆಯರಿಗೆ ಹಾಗೂ ದಂಪತಿಗಳಿಗೆ ವಿವಿಧ ಮನೋರಂಜನಾ ಕ್ರೀಡೆಯನ್ನು ಆಯೋಜಿಸಲಾಗಿತ್ತು. ಮಹಿಳೆಯರ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷರಾದ ಮುಳ್ಳಂಡ ರತ್ತುಚಂಗಪ್ಪ ಮಾತನಾಡಿ, ಕೊಡವ ಜನಾಂಗ ಉಳಿವು ಐನ್ ಮನೆಯಿಂದಲೇ ಪ್ರಾರಂಭಗೊಳ್ಳಬೇಕು. ಒಡಹುಟ್ಟಿದ ಸಹೋದರು, ಕುಟುಂಬದವರು ಒಗ್ಗಟ್ಟಾಗಿದ್ದಾಗ ಮಾತ್ರವೇ ಕೊಡವರ ಉಳಿವು ಸಾಧ್ಯವೆಂದರು. ಎಲ್ಲರು ಒಗ್ಗಟ್ಡಿನಿಂದ ಸಮಾಜದ ಅಭಿವೃದ್ಧಿಗೆ ಸಹಕರಿಸ ಬೇಕೆಂದರು. ನಿರ್ದೇಶಕರಾದ ಬಟ್ಟೀರ ರಕ್ಷುಕಾಳಪ್ಪ ಪುತ್ತರಿ ಹಬ್ಬದ ವಿಶೇಷತೆಯ ಬಗ್ಗೆ ವಿವರಿಸಿದರು. ನಂತರ ಕ್ರೀಡಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾಜದ ಉಪಾಧ್ಯಕ್ಷ ಬಿದ್ದಂಡ ಮಾದಯ್ಯ, ಕಾರ್ಯದರ್ಶಿ ಪುತ್ತರಿರ ಕಾಳಯ್ಯ, ಜಂಟಿಕಾರ್ಯದರ್ಶಿ ಮುಳ್ಳಂಡ ಶೋಭಾಚಂಗಪ್ಪ, ಖಜಾಂಚಿ ಕೆಚ್ಚೆಟ್ಟೀರ ರತಿ ಕಾರ್ಯಪ್ಪ, ಜಂಟಿ ಕಾರ್ಯದರ್ಶಿ ಐಚೆಟ್ಟೀರ ಮಾಚಯ್ಯ, ಕಾನೂನು ಸಲಹೆಗಾರರಾದ ಕಡೇಮಡ ವಿನ್ಸಿ ಅಪ್ಪಯ್ಯ, ನಿರ್ದೇಶಕರಾದ ಬಟ್ಟೀರ ರಕ್ಷು ಕಾಳಪ್ಪ, ಪುತ್ತರಿರ ಕಾಶಿ ಸುಬ್ಬಯ್ಯ, ಅಡಿಕೇರಿ ಶಾಂತಿ ಮುತ್ತಪ್ಪ, ಬಲ್ಲಾರಂಡ ರಾಜಪ್ಪ, ಮುಳ್ಳಂಡ ಮಾಯಮ್ಮ, ಐಚೆಟ್ಟೀರ ಸುನಿತಾ ಮಾಚಯ್ಯ ಹಾಗೂ ಸಮಾಜದ ಸದಸ್ಯರು ಭಾಗವಹಿಸಿದರು. ಪಳಂಗಡ ಗೀತಾ ಸುಬ್ಬಯ್ಯ ಪ್ರಾರ್ಥಿಸಿದರು. ಸಮಾಜದ ಅಧ್ಯಕ್ಷ ಮುಳ್ಳಂಡ ರತ್ತುಚಂಗಪ್ಪ ಸ್ವಾಗತಿಸಿದರು. ಮುಳ್ಳಂಡ ಶೋಭಾಚಂಗಪ್ಪ ವಂದಿಸಿದರು.











