Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ : ಅಮರಶಿಲ್ಪಿ ಜಕಣಾಚಾರಿ ಅವರು ನಾಡುಕಂಡ ಅದ್ಭುತ ಶಿಲ್ಪಿ : ಸಾಹಿತಿ ಉ.ರಾ.ನಾಗೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ : ಅಮರಶಿಲ್ಪಿ ಜಕಣಾಚಾರಿ ಅವರು ನಾಡುಕಂಡ ಅದ್ಭುತ ಶಿಲ್ಪಿ : ಸಾಹಿತಿ ಉ.ರಾ.ನಾಗೇಶ್*

ಜನವರಿ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.1 NEWS DESK : ಅಮರಶಿಲ್ಪಿ ಜಕಣಾಚಾರಿ ಅವರು ನಾಡುಕಂಡ ಅದ್ಭುತ ಶಿಲ್ಪಿ ಎಂದು ಸಾಹಿತಿ ಉ.ರಾ.ನಾಗೇಶ್ ಅವರು ವರ್ಣಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಮರಶಿಲ್ಪಿ ಜಕಣಾಚಾರಿ ಅವರು ಹೊಯ್ಸಳ ಶೈಲಿಯ ಕಲ್ಯಾಣ ಚಾಲುಕ್ಯರ ದೇವಾಲಯಗಳಾದ ಬೇಲೂರು ಮತ್ತು ಹಳೇಬೀಡುವಿನಂತಹ ಕಲಾಕೃತಿಗಳನ್ನು ನಿರ್ಮಿಸಿದ್ದಾರೆ ಎಂದು ಅವರು ಹೇಳಿದರು. ‘ಜಕಣಾಚಾರಿ ಅವರು ತುಮಕೂರು ಜಿಲ್ಲೆಯ ಕೈದಾಳ ಗ್ರಾಮದಲ್ಲಿ ಜನಿಸಿ ಸುಮಾರು 80 ವರ್ಷಗಳ ಕಾಲ ಬದುಕಿ 150 ಕ್ಕೂ ಹೆಚ್ಚು ದೇವಾಲಯಗಳನ್ನು ನಿರ್ಮಿಸಿ ಅಮರಶಿಲ್ಪಿ ಬಿರುದು ಹೊಂದಿದ್ದಾರೆ ಎಂದು ಉ.ರಾ.ನಾಗೇಶ್ ಅವರು ತಿಳಿಸಿದರು.’ ಬಾಲ್ಯದಿಂದಲೇ ಶಿಲ್ಪಕಲೆಗೆ ತನ್ನನ್ನು ಅರ್ಪಿಸಿಕೊಂಡು ದೇಶದಾದ್ಯಂತ ಸಂಚರಿಸಿ ನೂರಾರು ದೇವಾಲಯಗಳನ್ನು ನಿರ್ಮಿಸಿದ್ದಾರೆ ಎಂದರು. ಕರ್ನಾಟಕ ಜನಪದ ಸಂಸ್ಕøತಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರವಾಗಿದ್ದು, ರಾಜ್ಯ ಸರ್ಕಾರವು ಮಾಸ್ಟರ್ ಶಿಲ್ಪಿಗಳಿಗಾಗಿ ‘ಅಮರಶಿಲ್ಪಿ ಜಕಣಾಚಾರಿ ಪ್ರಶಸ್ತಿ’ಯನ್ನು ನೀಡುತ್ತಿದೆ ಎಂದು ಸಾಹಿತಿ ಅವರು ವಿವರಿಸಿದರು. ಭೂಮಿ ಗೆದ್ದರೆ ರಾಜ್ಯ, ಮನಸ್ಸು ಗೆದ್ದರೆ ಪೂಜ್ಯ ಭಾವನೆಯಿಂದ ಬಹಳ ಕಾಲ ಉಳಿಯುತ್ತಾರೆ. ಆ ನಿಟ್ಟಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರು ಇಂದಿಗೂ ಸಹ ಸ್ಮರಣೀಯ ಎಂದು ತಿಳಿಸಿದರು. ‘ಜನಮಾನಸದಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರು ಉಳಿದಿದ್ದು, ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯಲ್ಲಿ ಜಕಣಾಚಾರಿ ಅವರ ಬಗ್ಗೆ ಉಲ್ಲೇಖವಿರುವುದು ಸ್ಮರಣಾರ್ಥ ಎಂದು ಉ.ರಾ.ನಾಗೇಶ್ ಅವರು ಸ್ಮರಿಸಿದರು.’ ಜಕಣಾಚಾರಿ ಅವರು ಒಬ್ಬ ವಿಶೇಷ ಎಂಜಿನಿಯರ್ ಎಂದರೆ ಅತಿಶಯೋಕ್ತಿಯಲ್ಲ. ತತ್ವಜ್ಞಾನದ ಜೊತೆಗೆ ತಪಸ್ಸು ಮಾಡಿ ಶಿಲ್ಪ ಕೆಲಸದಲ್ಲಿ ಏಕಾಗ್ರತೆಯನ್ನು ಸಾಧಿಸಿದ್ದಾರೆ. ಜಕಣಾಚಾರಿ ಅವರ ದೂರದೃಷ್ಟಿ ಮೆಚ್ಚುವಂತದ್ದು ಎಂದು ಉ.ರಾ.ನಾಗೇಶ್ ಅವರು ಹೇಳಿದರು. ವಿಶ್ವಕರ್ಮ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಎಸ್.ಜೆ.ದೇವದಾಸ್ ಅವರು ಮಾತನಾಡಿ ನಾಡಿನ ಶಿಲ್ಪಕಲೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರವಾಗಿದೆ. ಆ ನಿಟ್ಟಿನಲ್ಲಿ ಸಮಾಜಕ್ಕೆ ಒಳ್ಳೆಯ ಶಿಲ್ಪಕಲೆಗಳನ್ನು ನೀಡಿದ್ದು, ಇವರ ಏಕಾಗ್ರತೆ, ಸಾಧನೆ ಸದಾ ಸ್ಮರಣೀಯ ಎಂದರು. ವಿಶ್ವಕರ್ಮ ಜಿಲ್ಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಬಿ.ನಾಗರಾಜು ಅವರು ಮಾತನಾಡಿ ಬೇಲೂರು, ಹಳೇಬೀಡು ಸೇರಿದಂತೆ ಹಲವು ಶಿಲ್ಪಗಳನ್ನು ಕಣ್ಣು ಬಿಟ್ಟು ನೋಡಬೇಕು. ಕಿವಿ ತೆರೆದಿಟ್ಟು ಕೇಳಬೇಕು ಅಂತಹ ಅದ್ಭುತ ಕೆತ್ತನೆ ಮಾಡಿದ್ದಾರೆ ಎಂದು ಅವರು ಹೇಳಿದರು. ಪ್ರಮುಖರಾದ ಪ್ರಕಾಶ್ ಆಚಾರ್ಯ ಅವರು ಮಾತನಾಡಿ ಅಮರಶಿಲ್ಪಿ ಜಕಣಾಚಾರಿ ಅವರ ಪರಿಕಲ್ಪನೆ ಮತ್ತು ದೂರದೃಷ್ಟಿ ಮತ್ತು ತಾಳ್ಮೆ ಮೆಚ್ಚುವಂತದ್ದು, ಅವರು ಕೆತ್ತನೆ ಮಾಡಿರುವ ಶಿಲ್ಪಿಗಳು ನೋಡುಗರನ್ನು ಬೆರಗುಗೊಳಿಸುತ್ತದೆ ಎಂದರು. ಬಾಬು ಆಚಾರ್ಯ ಅವರು ಮಾತನಾಡಿ ವಿಶ್ವಕರ್ಮ ಸಮಾಜದವರು, ಮರ ಕೆಲಸ, ಚಿನ್ನದ ಕೆಲಸ, ಕಬ್ಬಿಣದ ಕೆಲಸ ಹೀಗೆ ವೃತ್ತಿ ಕೌಶಲ್ಯಗಳನ್ನು ನಿರ್ವಹಿಸಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ವಿದ್ಯಾಲತಾ ವೆಂಕಟರಮಣ ಅವರು ಮಾತನಾಡಿ ವಿಶ್ವಕರ್ಮ ಸಮಾಜ, ಆರ್ಥಿಕವಾಗಿ ಮತ್ತಷ್ಟು ಸಬಲರಾಗಬೇಕು, ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದು ಹೇಳಿದರು. ಪ್ರಮುಖರಾದ ಅಶೋಕ್, ದಾಮೋದರ, ಇತರರು ಇದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಸ್ವಾಗತಿಸಿದರು. ಭವ್ಯ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.