Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಯಾರಿ : ಅಗತ್ಯ ಸಹಕಾರದ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು

*ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಯಾರಿ : ಅಗತ್ಯ ಸಹಕಾರದ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*

January 4, 20263 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ NEWS DESK ಜ.4 : ಸೋಮವಾರಪೇಟೆಯ ಐಗೂರಿನಲ್ಲಿ ನಡೆಯಲಿರುವ ಸೋಮವಾರಪೇಟೆ ತಾಲ್ಲೂಕು 9 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಅಚ್ಚುಕಟ್ಟಾಗಿ ಎಲ್ಲರೂ ನೆನಪಿಸಿಕೊಳ್ಳುವಂತ ರೀತಿಯಲ್ಲಿ ನಡೆಸಬೇಕು. ಅದಕ್ಕೆ ಬೇಕಾದ ಎಲ್ಲ ತಯಾರಿಯನ್ನು ಮಾಡಿಕೊಳ್ಳಿ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಸಮ್ಮೇಳನದ ಗೌರವಾಧ್ಯಕ್ಷರೂ ಆದ ಡಾ. ಮಂತರ್ ಗೌಡ ನುಡಿದರು. ಅವರು ಐಗೂರಿನ ಸಹಕಾರ ಸಂಘದ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಿವಿಧ ಉಪಸಮಿತಿಗಳ ಸಮ್ಮೇಳನದ ತಯಾರಿ ಕುರಿತು ವಿವರಣೆ ಪಡೆದರು. ಹಣಕಾಸು ಸಮಿತಿಯ ಅಧ್ಯಕ್ಷ ಕೆ ಪಿ ರಾಯ್, ಆಹಾರ ಸಮಿತಿಯ ಅಧ್ಯಕ್ಷ ಮಚ್ಚಂಡ ಅಶೋಕ್, ಮೆರವಣಿಗೆ ಸಮಿತಿಯ ಅಧ್ಯಕ್ಷ ಡಿ.ಎಸ್. ಚಂಗಪ್ಪ, ವೇದಿಕೆ ತಯಾರಿ ಸಮಿತಿಯ ಅಧ್ಯಕ್ಷ ಸಿ.ಕೆ. ರೋಹಿತ್, ಅಲಂಕಾರ ಸಮಿತಿಯ ಅಧ್ಯಕ್ಷ ಕೆ.ಪಿ ದಿನೇಶ್, ಸ್ಮರಣ ಸಂಚಿಕೆಯ ಸಂಪಾದಕ ಎಸ್.ಎಂ ಚಂಗಪ್ಪ, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಸಮ್ಮೇಳನದ ಹೆಚ್.ಕೆ ಉಮೇಶ್ ತಯಾರಿಗಳ ಕುರಿತು ಮಾಹಿತಿ ನೀಡಿದರು. ಇದು ತಾಲೂಕು ಸಮ್ಮೇಳನವಾದರೂ ಐಗೂರು ಮತ್ತು ಸುತ್ತಮುತ್ತಲ ಹಳ್ಳಿಗಳ ಮನೆಯ ಉತ್ಸವವಾಗಬೇಕು ಎಲ್ಲರೂ ಇದರಲ್ಲಿ ಪಾಲ್ಗೊಳ್ಳುವಂತಾಗಲು ಸಮಿತಿಯವರು ಎಲ್ಲಾ ಗ್ರಾಮಗಳಲ್ಲಿ ಸಭೆ ಸೇರಿ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಬೇಕು. ಅಲ್ಲದೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಮತ್ತು ಗಡಿಭಾಗದಲ್ಲಿ ಪ್ರಚಾರದ ಬ್ಯಾನರ್ ಗಳನ್ನು ಅಳವಡಿಸಬೇಕು ಎಂದು ಶಾಸಕರು ನುಡಿದರು. ಸಾಹಿತ್ಯ ಸಮ್ಮೇಳನದ ವಿವಿಧ ಉಪಸಮಿತಿಗಳಲ್ಲಿರುವ 200ಕ್ಕೂ ಹೆಚ್ಚು ಸದಸ್ಯರು ಸ್ವತಃ ಸಮ್ಮೇಳನಕ್ಕೆ ಅಗತ್ಯ ಸಹಕಾರ ನೀಡಬೇಕು. ಕೊನೆಯ ಪಕ್ಷ ಪ್ರತಿಯೊಬ್ಬ ಸದಸ್ಯರು ತಮ್ಮ ಕೈಲಾಗುವ ಹಣ ನೀಡುವ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಹಣಕಾಸು ಸಮಿತಿ ಅಧ್ಯಕ್ಷ ಕೆ.ಪಿ.ರಾಯ್ ಮನವಿ ಮಾಡಿದರು. ಮಧ್ಯಾಹ್ನ ಮತ್ತು ರಾತ್ರಿ ಸೇರಿ ಸುಮಾರು 6,000 ಜನರಿಗೆ ಊಟ ಉಪಹಾರಗಳ ವ್ಯವಸ್ಥೆ ಮಾಡಲಿರುವುದಾಗಿ ಆಹಾರ ಸಮಿತಿಯ ಅಧ್ಯಕ್ಷ ಮಚ್ಚಂಡ ಅಶೋಕ್ ನುಡಿದರು. ಮಡಿಕೇರಿ ಸೋಮವಾರಪೇಟೆ ರಸ್ತೆಯ ಸಂಪರ್ಕ ಸೇತುವೆಯಾಗಿದ್ದ ಕಬ್ಬಿಣದ ಸೇತುವೆಯನ್ನು ಬದಲಾಯಿಸುವ ಕೆಲಸ ನಡೆಯುತ್ತಿದ್ದು ಮೆರವಣಿಗೆಯನ್ನು ಸಾಂಕೇತಿಕವಾಗಿ ಐಗೂರಿನಲ್ಲಿ ನಡೆಸಿ ನಂತರ ಕಾಜೂರು ಜಂಕ್ಷನ್ ನಿಂದ ಸಮ್ಮೇಳನ ನಡೆಯುವ ಸರಕಾರಿ ಪ್ರಾಥಮಿಕ ಶಾಲೆಯವರೆಗೆ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಯನ್ನು ವಿವಿಧ ಕಲಾತಂಡಗಳು, ಡೊಳ್ಳು ಕುಣಿತ, ಕಳಸ ಹೊತ್ತ ಮಹಿಳೆಯರು, ಸ್ತ್ರೀಶಕ್ತಿ, ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘ, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ವಿದ್ಯಾರ್ಥಿಗಳು ಕನ್ನಡ ಅಭಿಮಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರನ್ನು ಒಳಗೊಂಡಂತೆ ಮೆರವಣಿಗೆಯ ಮೂಲಕ ಸಮ್ಮೇಳನದ ವೇದಿಕೆಗೆ ಕರೆದುಕೊಂಡು ಹೋಗಲಾಗುವುದು ಎಂದು ಮೆರವಣಿಗೆ ಸಮಿತಿ ಅಧ್ಯಕ್ಷರಾದ ಡಿ.ಎಸ್.ಚಂಗಪ್ಪ ನುಡಿದರು. ಆಕರ್ಷಣೀಯವಾದ ವೇದಿಕೆ ಮತ್ತು 2,000 ಜನ ಕುಳಿತುಕೊಳ್ಳುವಂತಹ ಸಭಾಂಗಣವನ್ನು ರಚಿಸಲಾಗುವುದು. ವೇದಿಕೆಯಲ್ಲಿ ಎಲ್.ಇ.ಡಿ ಪರದೆಯನ್ನು ಹಾಕಲಾಗುವುದು ಮತ್ತು ಸಮ್ಮೇಳನದಲ್ಲಿ ಪುಸ್ತಕ ಮಳಿಗೆ ಜನಪದ ಪಾರಂಪರಿಕ ವಸ್ತುಗಳ ಮಳಿಗೆಗಳನ್ನು ರಚಿಸಲಾಗುವುದು ಎಂದು ಮೆರವಣಿಗೆ ಸಮಿತಿ ಅಧ್ಯಕ್ಷರಾದ ಸಿ.ಕೆ.ರೋಹಿತ್ ನುಡಿದರು. ಸೋಮವಾರಪೇಟೆ ತಾಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿಗೆ ನಾಡಿಗೆ ಸೇವೆ ಸಲ್ಲಿಸಿ ಮರೆಯಾದ 9 ಹಿರಿಯರ ನೆನಪಿನ ದ್ವಾರಗಳನ್ನು ರಚಿಸಲಾಗುವುದು ಮತ್ತು ನಗರ ಅಲಂಕಾರ ಮತ್ತು ಮೆರವಣಿಗೆ ನಡೆಯುವ ಸ್ಥಳವನ್ನು ಸುಂದರವಾಗಿ ಸಜ್ಜುಗೊಳಿಸಲಾಗುವುದು ಎಂದು ಅಲಂಕಾರ ಸಮಿತಿ ಅಧ್ಯಕ್ಷ ಕೆ.ಪಿ ದಿನೇಶ್ ನುಡಿದರು. ಸ್ಮರಣ ಸಂಚಿಕೆಯ ಸಂಪಾದಕ ಎಸ್.ಎಮ್ ಚಂಗಪ್ಪ ರವರು ಮಾತನಾಡುತ್ತಾ ಸ್ಮರಣ ಸಂಚಿಕೆಯಲ್ಲಿ ನಾಡಿನ ಹಿರಿಯರ, ಶಾಸಕರ ಸಂದೇಶಗಳನ್ನು ಅಳವಡಿಸಲಾಗುವುದು. ಸೋಮವಾರಪೇಟೆ ತಾಲೂಕಿನ ಐತಿಹ್ಯ ಮತ್ತು ಪ್ರವಾಸೋದ್ಯಮ ಸ್ಥಳಗಳ ಕುರಿತು ಲೇಖನಗಳನ್ನು ಮತ್ತು ಕಾರ್ಯಕ್ರಮದ ಫೋಟೋಗಳನ್ನು ಕೂಡ ಅಳವಡಿಸಲಾಗುವುದು ಎಂದರು. ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಎಚ್.ಕೆ ಉಮೇಶ್  ಸೋಮವಾರಪೇಟೆ ತಾಲೂಕಿನ ಎಲ್ಲಾ ಶಾಲೆ ಕಾಲೇಜುಗಳಿಗೆ ಮತ್ತು ಕಲಾವಿದರಿಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಆದರೆ ಐಗೂರು ಸುತ್ತು ಮುತ್ತಲ ಪ್ರದೇಶದ ವಿದ್ಯಾರ್ಥಿಗಳಿಗೆ ಮತ್ತು ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಐಗೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಜಿ.ಕೆ ವಿನೋದ್ ಮಾತನಾಡುತ್ತಾ ನಮ್ಮ ಗ್ರಾಮದಲ್ಲಿ ಆಗುತ್ತಿರುವ ಈ ಸಮ್ಮೇಳನ ನಮ್ಮೆಲ್ಲರ ಪ್ರತಿಷ್ಠೆಯಾಗಿದ್ದು ಇದನ್ನು ಸುಸೂತ್ರವಾಗಿ ನಡೆಸಿಕೊಂಡು ಹೋಗಲು ಪಂಚಾಯಿತಿಯಿಂದ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು ಮತ್ತು ಗ್ರಾಮಸ್ಥರು ಸಹ ತನು ಮನ ಧನ ಸಹಾಯ ನೀಡುವ ಮೂಲಕ ಸಮ್ಮೇಳನವನ್ನು ಯಶಸ್ವಿ ಮಾಡಿಕೊಡಬೇಕು ಎಂದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಾಗೂ ಸಮ್ಮೇಳನದ ಮಹಾಪೋಷಕ ಟಿ.ಪಿ ರಮೇಶ್ ರವರು ಮಾತನಾಡುತ್ತಾ ಕಾರ್ಯಕ್ರಮ ನಡೆಯುವ ವೇದಿಕೆಗೆ ತಾಲೂಕಿನ ಹಿರಿಯ ಸಾಹಿತಿಯ ಹೆಸರನ್ನು ಇಡಬೇಕು. ನಂತರ ಸಭಾಂಗಣ, ಪುಸ್ತಕ ಮಳಿಗೆ, ಮಹಾದ್ವಾರ ಗಳಿಗೆ ಐಗೂರು ಸುತ್ತು ಮುತ್ತಲ ದಾನಿಗಳ, ಹಿರಿಯರ ಹೆಸರುಗಳನ್ನು ಇಡಬೇಕು ಮೆರವಣಿಗೆ ಮತ್ತು ಊಟದ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಲೋಪ ಬರದಂತೆ ಮುಂಜಾಗುರುಕತೆ ವಹಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಡಬೇಕು ಎಂದು ವಿವಿಧ ಸಮಿತಿಗಳಲ್ಲಿ ಮನವಿ ಮಾಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಸಮ್ಮೇಳನದ ಗೌರವಾಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡುತ್ತಾ ಐಗೂರು ಸಾಹಿತ್ಯ ಸಮ್ಮೇಳನವು ಇಲ್ಲಿವರೆಗೆ ನಡೆದಂತಹ ಎಲ್ಲಾ ಸಮ್ಮೇಳನಕ್ಕಿಂತಲೂ  ಉತ್ತಮ ರೀತಿಯಲ್ಲಿ ನಡೆಯಬೇಕು. ಸಮ್ಮೇಳನದ ನೆನಪಿಗಾಗಿ ರಚಿಸುವ ಸ್ಮರಣ ಸಂಚಿಕೆಯಲ್ಲಿ ಇಲ್ಲಿ ರಚಿಸುವ 9 ದ್ವಾರಗಳಲ್ಲಿ ನೆನಪಿಸಿಕೊಳ್ಳುವ ಹಿರಿಯರ ಕುರಿತು ಲೇಖನಗಳ ಅಳವಡಿಸಬೇಕು ಮತ್ತು ಸಮ್ಮೇಳನದಲ್ಲಿ ಸನ್ಮಾನಿಸಲ್ಪಡುವ ಸಾಧಕರ ಪರಿಚಯವನ್ನು ಆ ಪುಸ್ತಕದಲ್ಲಿ ಅಳವಡಿಸುವ ಮೂಲಕ ಸಂಗ್ರಹ ಯೋಗ್ಯ ಕೃತಿಯನ್ನಾಗಿಸಬೇಕು ಎಂದರು ವೇದಿಕೆಯಲ್ಲಿ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಸಮ್ಮೇಳನದ ಕಾರ್ಯಾಧ್ಯಕ್ಷ ಎಸ್.ಡಿ ವಿಜೇತ್, ಐಗೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಸಮ್ಮೇಳನ ಸಮಿತಿಯ ಕಾರ್ಯದರ್ಶಿ ನಂಗಾರು ಕೀರ್ತಿ ಪ್ರಸಾದ್, ಮಾಜಿ ತಾಲೂಕು  ಅಧ್ಯಕ್ಷ ಜೆ‌.ಸಿ ಶೇಖರ್, ನಿಕಟಪೂರ್ವ ಅಧ್ಯಕ್ಷ ಜವರಪ್ಪ,ಗೌರವ ಕಾರ್ಯದರ್ಶಿ ವೀರರಾಜು ಉಪಸ್ಥಿತರಿದ್ದರು. ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ಎಲ್ಲರನ್ನೂ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಜಿಲ್ಲಾ ಸಶಸ್ತ್ರ ದಳ, ಶ್ವಾನ ದಳ ಮತ್ತು ಪೊಲೀಸ್‌ ಕ್ಯಾಂಟೀನ್‌ ಗೆ ಭೇಟಿ*
Next Article *ನಿಧನ ಸುದ್ದಿ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.