Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಏ.27 ರಿಂದ ಮೇ 17ರ ವರೆಗೆ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟ ಮತ್ತು ವೈವಿಧ್ಯಮಯ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ಏ.27 ರಿಂದ ಮೇ 17ರ ವರೆಗೆ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟ ಮತ್ತು ವೈವಿಧ್ಯಮಯ ಕಾರ್ಯಕ್ರಮ*

January 5, 20263 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.5 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಏ.27 ರಿಂದ ಮೇ 17ರವರೆಗೆ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟ ಮತ್ತು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕೊಡಗು ಗೌಡ ಯುವ ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಶಿತ್ ಮಾದಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌಡ ಜನಾಂಗದ ಒಗ್ಗಟ್ಟು, ಅಭಿವೃದ್ಧಿ, ಹಕ್ಕೊತ್ತಾಯ, ಕ್ರೀಡೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗಾಗಿ ಕಳೆದ ಹಲವು ವರ್ಷಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಇದೀಗ ಬಾಳಾಡಿ ಮನೋಜ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಗೌಡ ವೇದಿಕೆಯ ನೂತನ ಸಮಿತಿ ರಚನೆಯಾಗಿದ್ದು, ಈ ಸಮಿತಿ ವತಿಯಿಂದ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು. 10 ಕುಟುಂಬ 18 ಗೋತ್ರದ ಗೌಡ ಜನಾಂಗದ 27ನೇ ವರ್ಷದ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟವು ಏ.27 ರಿಂದ ಮೇ 17ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ ಕುಟುಂಬವಾರು ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಹಾಗೂ ಗೌಡ ಜನಾಂಗಬಾಂಧವರಿಗೆ ಕುಟುಂಬವಾರು “ಸೂಪರ್ 5 ರಿಂಕ್ ಹಾಕಿ” ಕ್ರೀಡಾಕೂಟ, ಗುಂಡು ಹೊಡೆಯುವ ಸ್ಪರ್ಧೆ ಮತ್ತು ಮಿಸ್ಟರ್ ಗೌಡ, ಮಿಸ್ ಗೌಡತಿ ಎಂಬ ಸಾಂಸ್ಕೃತಿಕ ಕಲರವವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಿಶಿತ್ ಮಾದಯ್ಯ ಹೇಳಿದರು. ಕಳೆದ ವರ್ಷ ನಡೆದ ಗೌಡ ಜನಾಂಗದ ಕ್ರಿಕೆಟ್ ಪಂದ್ಯಾವಳಿಯಲ್ಲಿ 292 ಕುಟುಂಬಗಳು ಭಾಗವಹಿಸಿದ್ದವು. ಈ ಬಾರಿ 300ಕ್ಕೂ ಹೆಚ್ಚು ಕುಟುಂಬ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಇದೇ ಪ್ರಪ್ರಥಮ ಬಾರಿಗೆ ಗೌಡ ಜನಾಂಗಬಾಂಧವರಿಗೆ ಕುಟುಂಬವಾರು ಹಾಕಿ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ. ಇದು ಐದು ಆಟಗಾರರನ್ನು ಒಳಗೊಂಡ ರಿಂಕ್ ಹಾಕಿ ಮಾದರಿಯಲ್ಲಿ ನಡೆಯಲಿದೆ. ಸುಮಾರು 100 ಕುಟುಂಬಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಗೌಡ ಜನಾಂಗದ ಸಾಂಸ್ಕೃತಿಕ ಕ್ರೀಡೆಯಾದ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು 12ತ್ ಬೋರ್, 0.22 ರೈಫಲ್ ಮತ್ತು ಏರ್ ರೈಫಲ್ ಎಂಬ ಮೂರು ವಿಭಾಗದಲ್ಲಿ ಆಯೋಜನೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಗೌಡ ಜನಾಂಗದ ಯುವ ಪ್ರತಿಭೆಗಳನ್ನು ಗುರುತಿಸಲು “ಮಿಸ್ಟರ್ ಗೌಡ” ಮತ್ತು “ಮಿಸ್ ಗೌಡತಿ” ಎಂಬ ಸ್ಪರ್ಧೆಯನ್ನು ನಡೆಸಲಾಗುತ್ತಿದೆ. ಗೌಡ ಸಂಸ್ಕೃತಿ, ಆಚಾರ ವಿಚಾರ, ಭಾಷೆ ಮತ್ತು ದೈಹಿಕ ಸದೃಢತೆಯನ್ನು ಪರೀಕ್ಷಿಸಿ ವಿಜೇತರನ್ನು ಘೋಷಿಸಲಾಗುತ್ತದೆ ಎಂದು ಹೇಳಿದರು. ಜಿಪಿಎಲ್ ಸೀಸನ್-4 :: ಕೊಡಗು ಗೌಡ ಯುವ ವೇದಿಕೆ ಯುವ ಪ್ರತಿಭೆ ಗಳನ್ನು ಗುರುತಿಸಿ ಪ್ರೊಫೆಷನಲ್ ಕ್ರಿಕೆಟಿಂಗ್ ಕೆರಿಯರ್ ರೂಪಿಸಿಕೊಳ್ಳಲು ಜಿಪಿಎಲ್ ಸೀಸನ್-4 ನ್ನು ಡಿ.16 ರಿಂದ ಡಿ.31 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಕ್ರೀಡಾಕೂಟದಲ್ಲಿ ಕೊಡಗು ಮತ್ತು ದಕ್ಷಿಣ ಕನ್ನಡದ ಎಲ್ಲಾ ಒಕ್ಕಲಿಗ ಬಾಂಧವರು ಭಾಗವಹಿಸಬಹುದಾಗಿದೆ. ಕುಟುಂಬವಾರು ಟೆನ್ನಿಸ್ ಬಾಲ್ ಕ್ರೀಡಾಕೂಟ ಹಾಗೂ ಮೊದಲ ಬಾರಿಗೆ ಆಯೋಜನೆ ಗೊಳ್ಳುತ್ತಿರುವ ರಿಂಕ್ ಹಾಕಿ ಕ್ರೀಡಾಕೂಟಕ್ಕೆ ಕುಟುಂಬಗಳು ಹೆಸರು ನೋಂದಾಯಿಸಲು ಕುಟ್ಟನ ಪ್ರಶಾಂತ್ 7019671130, ಪೂಜಾರಿರ ಮಿತ್ರ 9663253025, ಪರಿಚನ ಸೋನಿ 7676452107 ಹಾಗೂ “ಮಿಸ್ಟರ್ ಗೌಡ” ಮತ್ತು “ಮಿಸ್ ಗೌಡತಿ” ಸ್ಪರ್ಧೆಗೆ 9008198955 ಸಂಪರ್ಕಿಸಬಹುದಾಗಿದೆ ಎಂದು ರಿಶಿತ್ ಮಾದಯ್ಯ ತಿಳಿಸಿದರು. *ಅನುದಾಕ್ಕೆ ಒತ್ತಾಯ* ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಬಾಳಾಡಿ ಮನೋಜ್ ಕುಮಾರ್ ಮಾತನಾಡಿ, ಕೊಡಗು ಗೌಡ ಯುವ ವೇದಿಕೆ ನಡೆಸುವ ಕ್ರೀಡಾಕೂಟಕ್ಕೆ 2023 ರಿಂದ ಸರಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ, ಈ ಹಿಂದಿನ ವರ್ಷಗಳಲ್ಲಿ ಅನುದಾನ ನೀಡಲಾಗಿದೆ ಎಂದರು. ಜನಾಂಗ ಬಾಂಧವರು ಹಾಗೂ ಹಿತೈಷಿಗಳ ನೆರವಿನಿಂದ ಕ್ರೀಡಾಕೂಟವನ್ನು ಯಶಸ್ವಿಯಾಗಿ ಮುಂದುವರೆಸುತ್ತಾ ಬಂದಿದ್ದೇವೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಬಳಿ ಅನುದಾನದ ಕುರಿತು ಚರ್ಚಿಸಲಾಗಿದೆ. ಶಾಸಕರು ಈ ವರ್ಷ ಅನುದಾನವನ್ನು ಸರಕಾರದಿಂದ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕ್ರೀಡಾಕೂಟಕ್ಕೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಈ ಕಾರ್ಯಕ್ರಮಕ್ಕೆ ಬಹಳಷ್ಟು ಅನುದಾನದ ಅವಶ್ಯಕತೆ ಇರುವುದರಿಂದ ಶಾಸಕರುಗಳು ಅನುದಾನ ಬಿಡುಗಡೆ ಮಾಡುವಂತೆ ಬಾಳಾಡಿ ಮನೋಜ್ ಕುಮಾರ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಗೌಡ ಯುವ ವೇದಿಕೆಯ ಉಪಾಧ್ಯಕ್ಷರಾದ ಪರಿಚನ ಸತೀಶ್, ಎಡಿಕೇರಿ ಪ್ರಸನ್ನ, ಕಾರ್ಯದರ್ಶಿ ಕೆದಂಬಾಡಿ ಕಾಂಚನ ಗೌಡ ಹಾಗೂ ಆಹಾರ ಸಮಿತಿ ಅಧ್ಯಕ್ಷರಾದ ಫೈಕೇರ ಗಗನ್ ದೇವಯ್ಯ ಉಪಸ್ಥಿತರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಜ.9 ಮತ್ತು 10 ರಂದು ‘ನೀನಾಸಂ ತಿರುಗಾಟ’ ನಾಟಕ ಪ್ರದರ್ಶನ*
Next Article *ಕೊಡಗಿನ ಸಾಧಕರಿಗೆ ಗಡಿನಾಡ ಪ್ರಶಸ್ತಿ ಪ್ರಕಟ*

Related Posts

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು…

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.