Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೊರೆನೂರಿನಲ್ಲಿ ಕುವೆಂಪು ಕುರಿತ ಉಪನ್ಯಾಸ : ಕನ್ನಡ ಸಾಹಿತ್ಯ ಲೋಕದ ಅಪ್ರತಿಮ ಸಾಹಿತಿ ಕುವೆಂಪು : ಡಾ.ಜೆ.ಸೋಮಣ್ಣ ಬಣ್ಣನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೊರೆನೂರಿನಲ್ಲಿ ಕುವೆಂಪು ಕುರಿತ ಉಪನ್ಯಾಸ : ಕನ್ನಡ ಸಾಹಿತ್ಯ ಲೋಕದ ಅಪ್ರತಿಮ ಸಾಹಿತಿ ಕುವೆಂಪು : ಡಾ.ಜೆ.ಸೋಮಣ್ಣ ಬಣ್ಣನೆ*

ಜನವರಿ 5, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಜ.5 NEWS DESK : ಸಮಾಜದಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸುವುದರೊಂದಿಗೆ ಸಮಾಜದಲ್ಲಿ ಸರ್ವರಿಗೂ ಸಮ ಬಾಳು, ಸರ್ವರಿಗೂ ಸಮಪಾಲು ಸಿಗಬೇಕು ಎಂದು ಹಂಬಲಿಸಿದ ಕನ್ನಡದ ಮೇರು ಕವಿ ಕುವೆಂಪು ಎಂದು ಸಾಹಿತಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪುರಸ್ಕೃತರಾದ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ ಜೆ.ಸೋಮಣ್ಣ ತೊರೆನೂರಿನಲ್ಲಿ ಬಣ್ಣಿಸಿದರು. ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದ ರೇವೇಗೌಡನಕೊಪ್ಪಲಿನ ಶನೇಶ್ವರ ದೇವಸ್ಥಾನದ ಆವರಣದಲ್ಲಿ “ಕಣಿವೆ ಕಟ್ಟೆ” ಕೊಡಗು ಬಳಗದ ವತಿಯಿಂದ ಭಾನುವಾರ ರಾಷ್ಟ್ರಕವಿ ಕುವೆಂಪು ಅವರ ವಿಶ್ವ ಮಾನವ ಸಂದೇಶದ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿ, ಕುವೆಂಪು ಅವರು ವೈಚಾರಿಕತೆ ನೆಲಗಟ್ಟೆಯಲ್ಲಿ ತಮ್ಮ ಸಾಹಿತ್ಯ ರಚಿಸುವ ಮೂಲಕ ಜನರಲ್ಲಿ ವೈಚಾರಿಕತೆ ಬಗ್ಗೆ ಬೆಳಕು ಚೆಲ್ಲಿದ್ದಾರೆ ಎಂದರು. ಹುಟ್ಟುವ ಪ್ರತಿ ಮಗುವು ವಿಶ್ವಮಾನವನೇ! ಆ ನಂತರ ಆ ಮಗುವನ್ನು “ಜಾತಿ,ಮತ”ದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ. ಹಾಗಾಗ ಬಾರದು ಎಂದರು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪು  ಅವರದಾಗಿತ್ತು.ಹಾಗಾಗಿ ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಮೂಡಿ ಬಂದ ಆಶಯವೇ ವಿಶ್ವಮಾನವ ಸಂದೇಶವಾಗಿದೆ. ಬುದ್ಧ, ಬಸವರ ಹಾಗೆ ಸಮಾಜದಲ್ಲಿ ವ್ಯಕ್ತಿ ಸ್ವತಂತ್ರವಾಗಿ, ವೈಚಾರಿಕ ದೃಷ್ಟಿಕೋನವನ್ನು ಬೆಳೆಸಿಕೊಂಡುವ ವಿಶ್ವ ಮಾನವನಾಗಿ ರೂಪುಗೊಳ್ಳ ಬೇಕು ಎಂಬುದು ಕುವೆಂಪು ಅವರ ಸಂದೇಶವಾಗಿದೆ ಎಂದರು. ಪ್ರಖರ ವೈಚಾರಿಕತೆ ಮತ್ತು ವೈಜ್ಞಾನಿಕವಾಗಿ ಚಿಂತಿಸುತ್ತಿದ್ದ ಕುವೆಂಪು ಅವರಿಗೆ ದೇವರ ಹೆಸರಿನಲ್ಲಿ ಬಿತ್ತುತ್ತಿದ್ದ ಮತ ಮೌಢ್ಯತೆ ಬಗ್ಗೆ ತೀವ್ರ ಆಕ್ರೋಶವಿತ್ತು. ಈ ಕಾರಣದಿಂದಲೇ ಅವರು ನೂರು ದೇವರನ್ನೆಲ್ಲ ನೂಕಾಚೆ ದೂರ, ಭಾರತಾಂಬೆಯ ದೇವಿ ಪೂಜಿಸುವ ಭಾರ ಎಂದು ಕರೆಕೊಟ್ಟಿದ್ದು. ಮತ್ತಷ್ಟು ಮುಂದಕ್ಕೆ ಹೋಗಿ , ಗುಡಿಯೊಳಗೆ ಬೆಚ್ಚಗೆ ಕುಳಿತಿರುವವರ ಬಗ್ಗೆ ಇರುವ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಾರೆ ಎಂದು ಡಾ.ಸೋಮಣ್ಣ ಹೇಳಿದರು. ಗಾಂಧೀಜಿಯವರ ಸರ್ವೋದಯ ತತ್ವಕ್ಕೆ ಮಾರು ಹೋಗಿದ್ದ ಕುವೆಂಪು ಮನುಜ ಮತ,.ವಿಶ್ವಪಥ, ಸರ್ವೋದಯ, ಸಮನ್ವಯ,ಪೂರ್ಣ ದೃಷ್ಟಿ ಎಂಬ ತತ್ವಗಳು ಸಮಾಜದಲ್ಲಿ ಬೇರೂರ ಬೇಕು ಎಂದು ಹಂಬಲಿಸಿದ್ದರು ಎಂದು ಡಾ ಸೋಮಣ್ಣ ಬಣ್ಣಿಸಿದರು. ಕುವೆಂಪು ನೀಡಿದ ವಿಶ್ವಮಾನವ ಸಂದೇಶ ನಮ್ಮ ಮನಸ್ಸುಗಳು ಜಾತಿ – ಧರ್ಮದ ಹೆಸರಿನಲ್ಲಿ ಮತ ಮೌಢ್ಯ ಗಳಿಗೆ ಕಟ್ಟು ಬಿದ್ದು ಕುಬ್ಜ ಗೊಳ್ಳುತ್ತಿರುವ ಇಂದಿನ ಸಂದರ್ಭದಲ್ಲಿ ಬಹಳ ಪ್ರಸ್ತುತ ಎನ್ನಿಸಿದೆ. “ಓ ನನ್ನ ಚೇತನ ಆಗು ನೀ ಅನಿಕೇತನ” ಎಂಬ ಅವರ ಕವಿತೆಯು ವಿಶ್ವಮಾನವ ಸಂದೇಶದ ಬಹು ಆಶಯವನ್ನು ಬಿತ್ತುತ್ತದೆ ಎಂದು ಡಾ ಸೋಮಣ್ಣ ಹೇಳಿದರು. ಈ ನೆಲದ ಮತ್ತು ಮಣ್ಣಿನ ಬಹು ದೊಡ್ಡ ಪ್ರೀತಿಯ ಕವಿಯಾಗಿದ್ದ ಕುವೆಂಪು ಅನ್ನದಾತ ರೈತ ಹಾಗೂ ಶ್ರಮಿಕ ವರ್ಗದವರ ಬಗ್ಗೆ ಅಪಾರವಾದ ಪ್ರೀತಿ, ಗೌರವವಿತ್ತು. ಇದನ್ನು ನಾವು ಅವರ `ಉಳುವ ಯೋಗಿಯ ನೋಡಲ್ಲಿ ಕವಿತೆಯಲ್ಲಿ ಕಾಣುತ್ತೇವೆ. ಇಂಥ ಪೂರ್ಣ ದೃಷ್ಟಿಯ ಕವಿಯನ್ನು ಯುಗದ ಕವಿ, ಜಗದ ಕವಿ ಎಂದು ಬಣ್ಣಿಸಿದರು. ಕುವೆಂಪು ಅವರ ಸಾಹಿತ್ಯ ರಚನೆ ಕುರಿತು ಮಾತನಾಡಿದ
ಜಿಲ್ಲಾ ಲೀಡ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ, ಕುವೆಂಪು ವಿಶ್ವ ಕಂಡ ಅಪ್ರತಿಮ ಸಾಹಿತಿ, ಚಿಂತಕ. ಯಾವುದೇ ಸಾಹಿತಿಗಳಿಗೂ ಕಡಿಮೆ ಇಲ್ಲದಂತೆ ನೂರಾರು ಸಾಹಿತ್ಯಗಳನ್ನು ರಚಿಸುವ ಮೂಲಕ ಸಮಾಜದಲ್ಲಿ ವೈಚಾರಿಕ ಕ್ರಾಂತಿ ಬೆಳೆಸಲು ಪ್ರಮುಖ ಕಾರಣರಾಗಿದ್ದಾರೆ ಎಂದರು.
ಕನ್ನಡ ಸಾಹಿತ್ಯ ಲೋಕಕ್ಕೆ ರಾಷ್ಟ್ರಕವಿ ಕುವೆಂಪು ಅವರ ಕೊಡುಗೆ ಅಪಾರ. ಅವರ ವೈಚಾರಿಕ ನಿಲುವು ಮತ್ತು ಆದರ್ಶಗಳು ಇಂದಿಗೂ ನಮಗೆ ದಾರಿ ದೀಪ ಎಂದರು. ಮಲೆನಾಡು ಪರಿಸರದಲ್ಲಿ ಬೆಳೆದು ಸಮಾಜದ ಬಗ್ಗೆ ಕುವೆಂಪು ಅವರ ದೃಷ್ಟಿಕೋನ ಹಾಗೂ ಕಾಳಜಿ ಅಪ್ರತಿಮವಾದದ್ದು .ಸರಕಾರ ಕುವೆಂಪು ಅವರ ಅನೇಕ ಚಿಂತನೆಗಳನ್ನು ಆಡಳಿತದಲ್ಲಿ ರೂಢಿಸಿಕೊಂಡಿದೆ ಎಂದು ಬಾಲಚಂದ್ರ ತಿಳಿಸಿದರು. ಮಲೆನಾಡು ಪರಿಸರದಲ್ಲಿ ಬೆಳೆದು ಸಮಾಜದ ಬಗ್ಗೆ ಕುವೆಂಪು ಅವರ ದೃಷ್ಟಿಕೋನ ಹಾಗೂ ಕಾಳಜಿ ಅಪ್ರತಿಮವಾದದ್ದು. ಸಮಾಜ ಕುವೆಂಪು ಅವರ ವೈಚಾರಿಕತೆಯನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜದ ಪ್ರಗತಿಗೆ ಸಹಕರಿಸಬೇಕು ಎಂದು ಹೇಳಿದರು. ಸಾಹಿತಿ ಕಣಿವೆ ಭಾರದ್ವಾಜ ಆನಂದತೀರ್ಥ ಮಾತನಾಡಿ, ಕುವೆಂಪು ಅವರ ಬದುಕಿನ ಒಳನೋಟ ಹಾಗೂ ಅವರ ವೈಚಾರಿಕ ಚಿಂತನೆ ಬಗ್ಗೆ ತಿಳಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ‌ ನಿಕಟ ಪೂರ್ವ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಮಾತನಾಡಿ, ಕಣಿವೆ ಕಟ್ಟೆಯ ಬಳಗದ ವತಿಯಿಂದ ಸಾಹಿತ್ಯ ಚಟುವಟಿಕೆಗಳು ಸೇರಿದಂತೆ ಹಮ್ಮಿಕೊಳ್ಳುತ್ತಿರುವ ವೈವಿಧ್ಯಮಯ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ. ನಾವು ಕುವೆಂಪು ಅವರನ್ನು ವೈಜ್ಞಾನಿಕ ನೆಲಗಟ್ಟಿನಲ್ಲಿ ನೋಡುವ ಮೂಲಕ ಅವರ ಆದರ್ಶಗಳನ್ನು ಮೈಗೂಢಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಆತಿಥ್ಯ ವಹಿಸಿ ಉಪನ್ಯಾಸಕ್ಕೆ ಚಾಲನೆ ನೀಡಿ ಮಾತನಾಡಿದ ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಕೆ.ಎಸ್.ಕೃಷ್ಣೇಗೌಡ, ಕನ್ನಡ ನಾಡು – ನುಡಿ, ಸಂಸ್ಕೃತಿ ಮತ್ತು ಪರಂಪರೆ ಹಾಗೂ ಇಲ್ಲಿನ ನೆಲ- ಜಲ ಹಾಗೂ ಪ್ರಕೃತಿ- ಪರಿಸರದ ಸೊಬಗನ್ನು ತಮ್ಮ ಸಾಹಿತ್ಯದ ಮೂಲಕ ಪರಿಚಯಿಸುವ ಮೂಲಕ ರಾಷ್ಟ್ರಕವಿಯಾಗಿ ಹೊರಹೊಮ್ಮಿದ ಕೀರ್ತಿ ಕುವೆಂಪು ಅವರಿಗೆ ಸಲ್ಲುತ್ತದೆ ಎಂದರು.
ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಎಚ್.ವಿ.ಶಿವಪ್ಪ,ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ,ಎಸ್.ಬಿ.ಎಂ.ಬ್ಯಾಂಕ್ ನ ನಿವೃತ್ತ ಹಿರಿಯ ಅಧಿಕಾರಿ ಸೂದನ ರತ್ನಾವತಿ, ಕಣಿವೆ ಕಟ್ಟೆಯ ಪ್ರಧಾನ ಸಂಚಾಲಕ ಕೆ.ವಿ.ಉಮೇಶ್, ಸಂಚಾಲಕರಾದ ಟಿ.ಜಿ.ಪ್ರೇಮಕುಮಾರ್, ಎಂ.ಎನ್.ವೆಂಕಟನಾಯಕ್, ಲೇಖಕರಾದ ಸುನೀತ ಲೋಕೇಶ್, ಲೀಲಾಕುಮಾರಿ ತೊಡಿಕಾನ, ಮಾಲಾದೇವಿ ಮೂರ್ತಿ, ಕವಿಗಳಾದ ಟಿ.ಎಚ್.ಸುಕುಮಾರ್, ಕವಿತ ಪುಟ್ಟೇಗೌಡ, ಗ್ರಾ.ಪಂ.ಮಾಜಿ ಸದಸ್ಯೆ ನಿಂಗಾಜಮ್ಮ, ಕಸಾಪ ಪ್ರಮುಖರಾದ ಎಂ.ಎನ್.ಮೂರ್ತಿ, ಟಿ.ಬಿ.ಮಂಜುನಾಥ್, ಎಚ್.ಎನ್.ಸುಬ್ರಮಣ್ಯ, ಎಸ್.ಎಸ್.ನಾಗರಾಜ್, ಎಚ್.ಎಸ್.ಲೋಕೇಶ್, ಜಿಲ್ಲಾ ರಕ್ಷಣಾ ವೇದಿಕೆ( ಶಿವರಾಮೇಗೌಡ ಬಣ) ಯ ಅಧ್ಯಕ್ಷ ಕೆ.ಎನ್.ದೀಪಕ್, ಯುವ ಘಟಕದ ಸಂಘಟನಾ ಕಾರ್ಯದರ್ಶಿ ಪರಮೇಶ್, ಅನುಗ್ರಹ ಕಾಲೇಜಿನ ಪ್ರಾಂಶುಪಾಲ ಎಚ್.ಬಿ.ಲಿಂಗಮೂರ್ತಿ, ಕುಶಾಲನಗರ ಎ.ಪಿ.ಸಿ.ಎಂ.ಎಸ್.ನ ನಿರ್ದೇಶಕ ಎಚ್.ಬಿ.ಚಂದ್ರಪ್ಪ, ವಿವಿಧ ಸಂಘಟನೆಗಳ ಪ್ರಮುಖರಾದ ಟಿ.ಎಸ್.ಶಾಂಭಶಿವಮೂರ್ತಿ, ಎಸ್.ವಿ.ಶಿವಾನಂದ, ಎಸ್.ಎಸ್.ಚಂದ್ರಶೇಖರ್, ಸಿ.ಎನ್.ಲೋಕೇಶ್,ಟಿ.ಜಿ.ಲೋಕೇಶ್,  ಎಚ್.ಎಸ್.ಪುಟ್ಟಪ್ಪ, ಟಿ.ಆರ್.ಉಮೇಶ್, ಟಿ.ಎಸ್.ಚಂದ್ರಶೇಖರ್, ಟಿ.ವೈ.ಸಂಗಮೇಶ್, ಟಿ.ಕೆ.ಕುಮಾರ್, ಇತರರು ಇದ್ದರು. ಕಲಾವಿದ ಭರಮಣ ಬೆಟಗೇರಿ ಕುವೆಂಪು ಗೀತೆ ಹಾಡಿದರು. ವೇದ ಲೋಕೇಶ್ ಮತ್ತು ಯಶೋಧ ಶಿವಾನಂದ ಗೀತೆ ಹಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.