ಮಡಿಕೇರಿ ಜ.6 NEWS DESK : ಕೊಡಗು ಜಿಲ್ಲಾ ವಿದ್ಯಾ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮ ಜ.11 ರಂದು ಮಡಿಕೇರಿ ಗೌಡ ಸಮಾಜದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಆಹ್ವಾನಿಸಲಾಯಿತು. ಶಾಸಕರ ಗೃಹದ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ಹೆಚ್.ಎಸ್ ಚೇತನ್ ಹಾಗೂ ನಿರ್ದೇಶಕರು ಸನ್ಮಾನಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.











