ಮಡಿಕೇರಿ ಜ.6 NEWS DESK : ಕೊಡಗು ಗೌಡ ಯುವ ವೇದಿಕೆ ನೂತನ ಆಡಳಿತ ಮಂಡಳಿಯ ಸದಸ್ಯರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿಯಾದರು. ಅಧ್ಯಕ್ಷ ಬಾಲಾಡಿ ಮನೋಜ್ ನೇತೃತ್ವದಲ್ಲಿ ಕುಶಾಲನಗರದ ವಿಶ್ರಾಂತಿ ಗೃಹದಲ್ಲಿ ಶಾಸಕರನ್ನು ಭೇಟಿಯಾದ ಕೊಡಗು ಗೌಡ ಯುವ ವೇದಿಕೆಯ ಪ್ರಮುಖರು, ಏಪ್ರಿಲ್ ತಿಂಗಳಲ್ಲಿ ನಡೆಯುವ ಒಲಂಪಿಕ್ ಮಾದರಿಯ ಕ್ರೀಡಾಕೂಟದ ಕುರಿತು ಚರ್ಚಿಸಿದರು. ಈ ಬಾರಿ ಕೊಡಗು ಗೌಡ ಯುವ ವೇದಿಕೆಯ ನೇತೃತ್ವದಲ್ಲಿ ಏ.27 ರಿಂದ ಮೇ 17 ರ ವರೆಗೆ ಗೌಡ ಸಮುದಾಯಗಳ ನಡುವೆ ಕುಟುಂಬವಾರು ಟೆನ್ನಿಸ್ ಬಾಲ್ ಕ್ರಿಕೆಟ್ ಹಾಗೂ ಮೊದಲ ವರ್ಷದ ರಿಂಕ್ ಹಾಕಿ, ಶೂಟಿಂಗ್ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯತೆಯ ಪೈಪೋಟಿ ಮಿಸ್ಟರ್ ಗೌಡ ಮಿಸ್ ಗೌಡತಿ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ಶಾಸಕರು ಸಹಕಾರ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು ಕ್ರೀಡೆಯ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೂ ಸಹಕಾರ ನೀಡುವಂತೆ ತಿಳಿಸಿದ್ದು, ವೇದಿಕೆಯ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವ ಭರವಸೆ ನೀಡಿದರು. ನಿಯೋಗದಲ್ಲಿ ಕೊಡಗು ಗೌಡ ಯುವ ವೇದಿಕೆಯ ಉಪಾಧ್ಯಕ್ಷ ಪರಿಚನ ಸತೀಶ್, ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ಹಾಗೂ ಕೆದಂಬಾಡಿ ಕಾಂಚನ, ಖಜಾಂಚಿ ನವೀನ್ ದೇರಳ, ಸಹ ಕಾರ್ಯದರ್ಶಿ ಸೋನಿ ಹಾಗೂ ಕವನ್ ಕೊತ್ತೋಳಿ, ಕ್ರೀಡಾಧ್ಯಕ್ಷ ಕುಟ್ಟನ ಪ್ರಶಾಂತ್, ಶಿಸ್ತು ಸಮಿತಿ ಅಧ್ಯಕ್ಷ ಪಟ್ಟಡ ದೀಪಕ್ ಹಾಗೂ ನಿರ್ದೇಶಕರುಗಳಾದ ಅನುದೀಪ್ ಕಲ್ಲುಮುಟ್ಲು, ಜೈನಿರಾ ಲೋಹಿತ್, ಮುದಿಯಾರ್ ಗಣೇಶ್, ಪ್ರಚಾರ ಸಮಿತಿ ಮಾಗುಲು ಲೋಹಿತ್ ಹಾಗೂ ವಿನೋದ್ ಮೂಡಗದ್ದೆ ಇದ್ದರು.












