ಮಡಿಕೇರಿ ಜ.6 NEWS DESK : ಕೇರಳದ ಬೈತೂರಿನ ಉತ್ಸವಕ್ಕೆ ಕೊಡಗಿನ ಭಕ್ತ ಜನರನ್ನು ಆಹ್ವಾನಿಸಲು ಬೈತೂರು ದೇವಾಲಯದಿಂದ ಕೋಮರತಚ್ಚನ್ ಜ.9 ರವರೆಗೆ ಕೊಡಗಿನ ವಿವಿಧ ದೇವಾಲಯಗಳು ಹಾಗೂ ಐನ್ ಮನೆಗೆ ಭೇಟಿ ನೀಡಲಿದ್ದಾರೆ. ಜ.7 ರಂದು ಬೆಳಿಗ್ಗೆ 10 ಗಂಟೆಯಿಂದ 10.30 ಗಂಟೆಯವರೆಗೆ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಶ್ರೀ ಕೋಟೆ ಗಣಪತಿ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನ ಸಮಿತಿ ಕೋರಿದೆ.











