
ಮಡಿಕೇರಿ ಜ.7 NEWS DESK : ವಿರಾಜಪೇಟೆ ಗ್ರಾಮಾಂತರ ಠಾಣೆಯ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಠಾಣೆಯ ಅಧಿಕಾರಿಗಳು ವಿವಿಧ ಶಾಲಾ ವಿದ್ಯಾರ್ಥಿಗಳ ಸಭೆ ನಡೆಸಿ ರಸ್ತೆ ಸುರಕ್ಷತೆ, ಸಂಚಾರ ಕಾನೂನು, ರಸ್ತೆ ಅಪಘಾತದ ಸಂದರ್ಭ ನಾಗರಿಕ ಜವಾಬ್ದಾರಿ ಮುಂತಾದ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು.









