Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸುಂಟಿಕೊಪ್ಪ : ಅಪರಾಧ ಪ್ರಕರಣಗಳ ಪತ್ತೆಗೆ ಪೊಲೀಸರಿಗೆ ಸಹಕರಿಸಿ : ಹೆಚ್ಚುವರಿ ಎಸ್‍ಪಿ ದಿನೇಶ್ ಕುಮಾರ್ ಬಾರಿಕೆ*
ಇತ್ತೀಚಿನ ಸುದ್ದಿಗಳು

*ಸುಂಟಿಕೊಪ್ಪ : ಅಪರಾಧ ಪ್ರಕರಣಗಳ ಪತ್ತೆಗೆ ಪೊಲೀಸರಿಗೆ ಸಹಕರಿಸಿ : ಹೆಚ್ಚುವರಿ ಎಸ್‍ಪಿ ದಿನೇಶ್ ಕುಮಾರ್ ಬಾರಿಕೆ*

January 8, 20262 Mins Read
Share
Facebook Twitter LinkedIn Pinterest WhatsApp Email

ಸುಂಟಿಕೊಪ್ಪ ಜ.8 NEWS DESK : ಕೊಡಗು ಪ್ರವಾಸಿಗಾರ ತಾಣವಾಗಿದ್ದು ಇಲ್ಲಿ ಬಂದು ಹೋಗುವ ಪ್ರವಾಸಿಗಾರನ್ನು ಹಾಗೂ ಸ್ಥಳೀಯವಾಗಿ ನಡೆಯುವ ಅಪರಾಧಗಳನ್ನು ತಡೆಗಟ್ಟಲು ಆಟೋ ಚಾಲಕರು ಜೀವಂತ ಸಿಸಿಕ್ಯಾಮರವಿದ್ದಂತೆ ಅವರ ಬಗ್ಗೆ ನಿಖರ ಮಾಹಿತಿಗಳನ್ನು ನಿಮ್ಮಿಂದ ಮಾತ್ರ ಪಡೆಯಲು ಸಾಧ್ಯವೆಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ದಿನೇಶ್ ಕುಮಾರ್ ಬಾರಿಕೆ ಅಭಿಪ್ರಾಯ ವ್ಯಕ್ತಪಡಿಸಿದರು.  ಸುಂಟಿಕೊಪ್ಪ ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಡೆದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ದಿನೇಶ್ ಕುಮಾರ್ ಅವರು, ವಾಹನ ಚಾಲನೆಯ  ಸಂದರ್ಭ ಚಾಲನಾ ಪರವನಾಗಿ, ವಾಹನ ವಿಮೆ, ವಾಹನಗಳಿಗೆ ಸಂಬಂಧಿಸಿದ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಯಾಕೆಂದರೆ ಅಪಘಾತಗಳು ಸಂಭವಿಸಿದಾಗ ದಾಖಲಾತಿ ಹೊಂದಿಲ್ಲದೆ ಇರುವ ಸಂದರ್ಭ ವಾಹನಗಳ ಮಾಲೀಕರಿಗೆ ದುಪ್ಪಟ್ಟು ದಂಡ ಅಥವಾ ಜೀವನ ಪರ್ಯಂತ ಜೈಲು ಶಿಕ್ಷೆ ಅಥವಾ ದಂಡಕ್ಕೆ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು. ಆದುರಿಂದ ಪ್ರತಿಯೊಬ್ಬ ಚಾಲಕರು ವಾಹನಗಳ ಚಾಲನೆಯ ಸಂದರ್ಭ ನಿಯಮಗಳನ್ನು ಉಲಂಘಿಸದೆ ಸುರಕ್ಷಿತ ಚಾಲನೆಗೆ ಒತ್ತು ನೀಡಬೇಕೆಂದು ಅವರು ಚಾಲಕರಿಗೆ ಕಿವಿ ಮಾತು ಹೇಳಿದರು.  ಸೋಮವಾರಪೇಟೆ ಉಪ ವಿಭಾಗ ಡಿವೈಎಸ್‍ಪಿ ಚಂದ್ರಶೇಖರ್ ಮಾತನಾಡಿ, ವಾಹನ ಚಾಲನೆ ಸಂದರ್ಭ ಅಪಘಾತ ಅವಘಡಗಳು ಒಂದಕ್ಕೊಂದು ಕೊಂಡಿ ಇದ್ದಂತೆ ಇದರಿಂದ 2 ಕುಟುಂಬಗಳು ಮತ್ತು ಅವರನ್ನು ಅವಲಂಭಿತರಾಗಿರುವ ಜೀವನ ಸಾಕಷ್ಟು ಸಂಕಷ್ಟಗಳನ್ನು ಎದುರಿಸುವಂತಾಗುತ್ತದೆ. ಇದರಿಂದ ವಾಹನ ಚಾಲನಾ ಸಂದರ್ಭದಲ್ಲಿ ಮೊಬೈಲ್ ಬಳಕೆ, ಮದ್ಯಪಾನ, ಮಾದಕ ವಸ್ತುಗಳ ಸೇವೆನೆ ಹಾಗೂ ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವುದರಿಂದ ಇಂತಹ ಅನಾಹುತಗಳು ಸಂಭವಿಸಿ ಅಪಘಾತಗಳಿಂದ 2 ಕುಟುಂಬಗಳೂ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತದೆ ಇದರ ದೂರವಿರುವಂತೆ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್ ಮಾತನಾಡಿ, ವಾಹನ ಚಾಲನೆಯ ರಸ್ತೆಯ ನಿಯಮಗಳನ್ನು ಕಡ್ಡಾಯವಾಗಿ ಅಲ್ಲದೆ ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೋಯ್ಯವುದು ಅಪರಾಧ. ಸರಕು ವಾಹನಗಳು ಅಪಘಾತಕ್ಕೀಡಾದಗ ವಾಹನ ಚಾಲಕರು ಮತ್ತು ಮಾಲೀಕರೆ ಪ್ರಯಾಣಿಕರಿಗೆ ಸಂಪೂರ್ಣ ವೆಚ್ಚವನ್ನು ಭರಿಸಬೇಕಾಗುತ್ತದೆ. ಅವರಿಗೆ ಜೀವವಿಮೆ ಲಭಿಸುವುದಿಲ್ಲವೆಂದು ಅವರು ಚಾಲಕರಿಗೆ ಕಿವಿಮಾತು ಹೇಳಿದರು.  ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್‍ರಾಜ್ ಮಾತನಾಡಿ, ಕೆಲವು ಆಟೋಗಳಲ್ಲಿ ನಿಯಮಕ್ಕಿಂತ ಅಧಿಕ ಮಕ್ಕಳನ್ನು ಕರೆದೋಯ್ಯುತ್ತಿರುವುದು ಕಂಡು ಬಂದಿದ್ದು ಮುಂದಿನ ದಿನಗಳಲ್ಲಿ ನಿಯಮವನ್ನು ಉಲ್ಲಂಘಿಸಿ ಅಧಿಕ ಮಕ್ಕಳನ್ನು ಕರೆದೋಯ್ಯುವ ಆಟೋಗಳ ವಿರುದ್ದ ನಿರ್ಧಾಕ್ಷಣ್ಯ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು ಎಂದು ಅವರು ಆಟೋಚಾಲಕರಿಗೆ ಎಚ್ಚರಿಸಿದರು.  ಇದೇ ಸಂದರ್ಭ ಆಟೋ ಚಾಲಕರ ಸಂಘದ ಅಧ್ಯಕ್ಷ 15 ಕಿ.ಮೀ ದೂರ ಸಂಚರಿಸುವ ಪರವನಾಗಿ ಆಟೋಗಳಿಗೆ ಇದ್ದು ಕುಶಾಲನಗರ ಹಾಗೂ ಮಡಿಕೇರಿ ಭಾಗಗಳಿಗೆ ತುರ್ತು ಅನಾರೋಗ್ಯ ಪೀಡಿತ ರೋಗಿಗಳನ್ನು ಜಿಲ್ಲಾಸ್ಪತ್ರೆ ಹಾಗೂ ಸಾರ್ವಜನಿಕ ಆರೋಗ್ಯ ಕೇಂದ್ರಗಳಿಗೆ ಕರೆದೋಯ್ಯುವ ಸಂದರ್ಭ ಪೊಲೀಸರು ದಂಡವನ್ನು ವಿಧಿಸುತ್ತಿದ್ದು ಇದಕ್ಕೆ ವಿನಾಯಿತಿ ನೀಡುವಂತೆ ಮನವಿ ಮಾಡಿದರು.  ಈ ಸಂದರ್ಭ ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಪದಾಧಿಕಾರಿಗಳು,  ಆಟೋಚಾಲಕರು ಸಂಘದ ಪದಾಧಿಕಾರಿಗಳು ಮತ್ತಿತರರು ಇದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಹಾಕಿ ಪಂದ್ಯಾವಳಿ : ಕಕ್ಕಬ್ಬೆ ಕೇಂದ್ರ ಆಂಗ್ಲ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಸಾಧನೆ*
Next Article ಕುಶಾಲನಗರ ತಾಲ್ಲೂಕು ಸೌಂದರ್ಯ ವರ್ಧಕರ ಸಂಘದ ವಾರ್ಷಿಕೋತ್ಸವ : ಗ್ರಾಹಕರಿಗೆ ಗುಣಮಟ್ಟದ ಸೇವೆಯನ್ನು ಒದಗಿಸಲು ಕೆ.ಪಿ.ಚಂದ್ರಕಲಾ ಸಲಹೆ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.