
ಸುಂಟಿಕೊಪ್ಪ ಜ.8 NEWS DESK : ಕೊಡಗು ಪ್ರವಾಸಿಗಾರ ತಾಣವಾಗಿದ್ದು ಇಲ್ಲಿ ಬಂದು ಹೋಗುವ ಪ್ರವಾಸಿಗಾರನ್ನು ಹಾಗೂ ಸ್ಥಳೀಯವಾಗಿ ನಡೆಯುವ ಅಪರಾಧಗಳನ್ನು ತಡೆಗಟ್ಟಲು ಆಟೋ ಚಾಲಕರು ಜೀವಂತ ಸಿಸಿಕ್ಯಾಮರವಿದ್ದಂತೆ ಅವರ ಬಗ್ಗೆ ನಿಖರ ಮಾಹಿತಿಗಳನ್ನು ನಿಮ್ಮಿಂದ ಮಾತ್ರ ಪಡೆಯಲು ಸಾಧ್ಯವೆಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ದಿನೇಶ್ ಕುಮಾರ್ ಬಾರಿಕೆ ಅಭಿಪ್ರಾಯ ವ್ಯಕ್ತಪಡಿಸಿದರು. ಸುಂಟಿಕೊಪ್ಪ ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಡೆದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ದಿನೇಶ್ ಕುಮಾರ್ ಅವರು, ವಾಹನ ಚಾಲನೆಯ ಸಂದರ್ಭ ಚಾಲನಾ ಪರವನಾಗಿ, ವಾಹನ ವಿಮೆ, ವಾಹನಗಳಿಗೆ ಸಂಬಂಧಿಸಿದ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಯಾಕೆಂದರೆ ಅಪಘಾತಗಳು ಸಂಭವಿಸಿದಾಗ ದಾಖಲಾತಿ ಹೊಂದಿಲ್ಲದೆ ಇರುವ ಸಂದರ್ಭ ವಾಹನಗಳ ಮಾಲೀಕರಿಗೆ ದುಪ್ಪಟ್ಟು ದಂಡ ಅಥವಾ ಜೀವನ ಪರ್ಯಂತ ಜೈಲು ಶಿಕ್ಷೆ ಅಥವಾ ದಂಡಕ್ಕೆ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು. ಆದುರಿಂದ ಪ್ರತಿಯೊಬ್ಬ ಚಾಲಕರು ವಾಹನಗಳ ಚಾಲನೆಯ ಸಂದರ್ಭ ನಿಯಮಗಳನ್ನು ಉಲಂಘಿಸದೆ ಸುರಕ್ಷಿತ ಚಾಲನೆಗೆ ಒತ್ತು ನೀಡಬೇಕೆಂದು ಅವರು ಚಾಲಕರಿಗೆ ಕಿವಿ ಮಾತು ಹೇಳಿದರು. ಸೋಮವಾರಪೇಟೆ ಉಪ ವಿಭಾಗ ಡಿವೈಎಸ್ಪಿ ಚಂದ್ರಶೇಖರ್ ಮಾತನಾಡಿ, ವಾಹನ ಚಾಲನೆ ಸಂದರ್ಭ ಅಪಘಾತ ಅವಘಡಗಳು ಒಂದಕ್ಕೊಂದು ಕೊಂಡಿ ಇದ್ದಂತೆ ಇದರಿಂದ 2 ಕುಟುಂಬಗಳು ಮತ್ತು ಅವರನ್ನು ಅವಲಂಭಿತರಾಗಿರುವ ಜೀವನ ಸಾಕಷ್ಟು ಸಂಕಷ್ಟಗಳನ್ನು ಎದುರಿಸುವಂತಾಗುತ್ತದೆ. ಇದರಿಂದ ವಾಹನ ಚಾಲನಾ ಸಂದರ್ಭದಲ್ಲಿ ಮೊಬೈಲ್ ಬಳಕೆ, ಮದ್ಯಪಾನ, ಮಾದಕ ವಸ್ತುಗಳ ಸೇವೆನೆ ಹಾಗೂ ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವುದರಿಂದ ಇಂತಹ ಅನಾಹುತಗಳು ಸಂಭವಿಸಿ ಅಪಘಾತಗಳಿಂದ 2 ಕುಟುಂಬಗಳೂ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತದೆ ಇದರ ದೂರವಿರುವಂತೆ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್ ಮಾತನಾಡಿ, ವಾಹನ ಚಾಲನೆಯ ರಸ್ತೆಯ ನಿಯಮಗಳನ್ನು ಕಡ್ಡಾಯವಾಗಿ ಅಲ್ಲದೆ ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೋಯ್ಯವುದು ಅಪರಾಧ. ಸರಕು ವಾಹನಗಳು ಅಪಘಾತಕ್ಕೀಡಾದಗ ವಾಹನ ಚಾಲಕರು ಮತ್ತು ಮಾಲೀಕರೆ ಪ್ರಯಾಣಿಕರಿಗೆ ಸಂಪೂರ್ಣ ವೆಚ್ಚವನ್ನು ಭರಿಸಬೇಕಾಗುತ್ತದೆ. ಅವರಿಗೆ ಜೀವವಿಮೆ ಲಭಿಸುವುದಿಲ್ಲವೆಂದು ಅವರು ಚಾಲಕರಿಗೆ ಕಿವಿಮಾತು ಹೇಳಿದರು. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್ರಾಜ್ ಮಾತನಾಡಿ, ಕೆಲವು ಆಟೋಗಳಲ್ಲಿ ನಿಯಮಕ್ಕಿಂತ ಅಧಿಕ ಮಕ್ಕಳನ್ನು ಕರೆದೋಯ್ಯುತ್ತಿರುವುದು ಕಂಡು ಬಂದಿದ್ದು ಮುಂದಿನ ದಿನಗಳಲ್ಲಿ ನಿಯಮವನ್ನು ಉಲ್ಲಂಘಿಸಿ ಅಧಿಕ ಮಕ್ಕಳನ್ನು ಕರೆದೋಯ್ಯುವ ಆಟೋಗಳ ವಿರುದ್ದ ನಿರ್ಧಾಕ್ಷಣ್ಯ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು ಎಂದು ಅವರು ಆಟೋಚಾಲಕರಿಗೆ ಎಚ್ಚರಿಸಿದರು. ಇದೇ ಸಂದರ್ಭ ಆಟೋ ಚಾಲಕರ ಸಂಘದ ಅಧ್ಯಕ್ಷ 15 ಕಿ.ಮೀ ದೂರ ಸಂಚರಿಸುವ ಪರವನಾಗಿ ಆಟೋಗಳಿಗೆ ಇದ್ದು ಕುಶಾಲನಗರ ಹಾಗೂ ಮಡಿಕೇರಿ ಭಾಗಗಳಿಗೆ ತುರ್ತು ಅನಾರೋಗ್ಯ ಪೀಡಿತ ರೋಗಿಗಳನ್ನು ಜಿಲ್ಲಾಸ್ಪತ್ರೆ ಹಾಗೂ ಸಾರ್ವಜನಿಕ ಆರೋಗ್ಯ ಕೇಂದ್ರಗಳಿಗೆ ಕರೆದೋಯ್ಯುವ ಸಂದರ್ಭ ಪೊಲೀಸರು ದಂಡವನ್ನು ವಿಧಿಸುತ್ತಿದ್ದು ಇದಕ್ಕೆ ವಿನಾಯಿತಿ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭ ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಪದಾಧಿಕಾರಿಗಳು, ಆಟೋಚಾಲಕರು ಸಂಘದ ಪದಾಧಿಕಾರಿಗಳು ಮತ್ತಿತರರು ಇದ್ದರು.









