Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಯುವ ಜನತೆಯ ಪ್ರೇರಕ ಶಕ್ತಿ ಸ್ವಾಮಿ ವಿವೇಕಾನಂದರು*
ಇತ್ತೀಚಿನ ಸುದ್ದಿಗಳು

*ಯುವ ಜನತೆಯ ಪ್ರೇರಕ ಶಕ್ತಿ ಸ್ವಾಮಿ ವಿವೇಕಾನಂದರು*

January 12, 20263 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.12 NEWS DESK : ಯುವಶಕ್ತಿ ರಾಷ್ಟ್ರ ಶಕ್ತಿ..ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ಯುವಜನತೆಗೆ ಕರೆ ನೀಡಿದ ಹರಿಕಾರ, ಮಹಾಚೇತನ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬವನ್ನು ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಯುವಕರ ಬಗ್ಗೆ ಅಪಾರ ನಂಬಿಕೆ ಹೊಂದಿದ್ದ ಅವರು ಯುವಶಕ್ತಿಕ್ಕಿಂತ ಮಿಗಿಲಾದದ್ದು ಯಾವುದು ಇಲ್ಲ. ನನಗೆ ಗಟ್ಟಿಮುಟ್ಟಾದ 100 ಜನ ಯುವಕರನ್ನು ಕೊಡಿ ನಾನು ನವ ಭಾರತವನ್ನು ನಿರ್ಮಾಣ ಮಾಡುತ್ತೀವಿ ಎಂದು ಕರೆ ನೀಡಿದ ಮಹಾನ್ ಚೇತನ.  ಯುವಕರು ಹೇಡಿಗಳಲ್ಲ, ಪರಾವಲಂಬಿಗಳಲ್ಲ ಎಂದ ಅವರು ನಿಮ್ಮ ಬದುಕಿನ ಶಿಲ್ಪಿಗಳು ನೀವೇ ಎಂದು ಯುವಜನತೆಗೆ ಸಂದೇಶವನ್ನು ಸಾರಿದರು. ಅವರ ಹುಟ್ಟು ಹಬ್ಬವನ್ನು ಭಾರತ ಸರ್ಕಾರ 1985 ರಿಂದ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದೆ. ಸ್ವಾಮಿ ವಿವೇಕಾನಂದರನ್ನು ವ್ಯಕ್ತಪಡಿಸಿದ ಕೆಲವು ಅಭಿಪ್ರಾಯಗಳು ಏನೆಂದರೆ, ಆಧುನಿಕ ಜಗತ್ತಿನ ನಿರ್ಮಾತ್ರರಲ್ಲಿ ವಿವೇಕಾನಂದರನ್ನು ಪ್ರಮುಖರೆಂದು ಗೌರವಿಸುತ್ತದೆ. ಭಾರತವನ್ನು ಅರಿಯಬೇಕೆಂದರೆ ಸ್ವಾಮಿ ವಿವೇಕಾನಂದರ ಕುರಿತು ಅಧ್ಯಯನ ಮಾಡಬೇಕು. ಅಮೆರಿಕನ್ನರಿಗೆ ಕೊಲಂಬಸ್ ನೆಲವನ್ನು ಹುಡುಕಿಕೊಟ್ಟರೆ, ವಿವೇಕಾನಂದರು ಅವರಿಗೆ ಚೈತನ್ಯವನ್ನು ಹುಡುಕಿಕೊಟ್ಟರು. ನಮ್ಮನ್ನು ಬೆಚ್ಚಗೆ ಇಡುವ ಬೆಂಕಿ ನಮ್ಮನ್ನು ಸುಡಲು ಬಲ್ಲದು ಎಂದರು. ಯಾವ ಯಾವ ಕೆಲಸವನ್ನು ಆದರೆ ಯಾವ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಬಹುದು ಎನ್ನುವ ಸ್ವಾಮಿ ವಿವೇಕಾನಂದರ ನಿಲುವು ಇಂದಿಗೂ ಪ್ರಸ್ತುತ.  ಬಡವರ ಸೇವೆ ಅವರ ಪ್ರಬಲ ಅಸ್ತ್ರವಾಗಿತ್ತು.  ಬಡವರ ಸೇವೆ ಮಾಡುವುದರಲ್ಲಿ ಅವರು ಪರಮಾತ್ಮನ ಆರಾಧನೆಯನ್ನು ಕಂಡುಕೊಂಡವರು. ದೇವರ ಮುಂದೆ ಎಲ್ಲರೂ ಸಮಾನರು ಎಂದು ಭಾವಿಸಿದ್ದರು.  ಯುವಶಕ್ತಿಯ ಪ್ರೇರಕ ಸ್ವಾಮಿ ವಿವೇಕಾನಂದರು ಬದುಕಿದ್ದು, ಕೇವಲ 39 ವರ್ಷ 5 ತಿಂಗಳು ಮಾತ್ರ. ಆದರೆ ಇವರ ಜೀವಿತಾವಧಿಯಲ್ಲಿ ಸಾಧಿಸಿದ್ದು ಅಪಾರ. ದೇಶಭಕ್ತರಾಗಿ, ವಿಶ್ವ ಪ್ರಜೆಯಾಗಿ, ದಿವ್ಯಜ್ಞಾನಿಯಾಗಿ, ಮಾನವೀಯ ಹರಿಕಾರರಾಗಿ ದೇಶಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. 1893ರಲ್ಲಿ ಚಿಕಾಗೋದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಮಾತನಾಡುತ್ತ ನನ್ನ ಸಹೋದರ ಸಹೋದರಿಯರೇ ಎಂದು ಹೇಳುವ ಮೂಲಕ ಪಾಶ್ಚಿಮತ್ಯರ ಕಣ್ಣು ತೆರೆಸಿದರು. ಭಾರತದ ಸನಾತನ ಧರ್ಮದ ಹಿರಿಮೆಯನ್ನು ವಿಶ್ವ ಮಟ್ಟಕ್ಕೆ ತಿಳಿಸಿ ಅದುವರೆಗೂ ಲೇಡಿಸ್ ಅಂಡ್ ಜೆಂಟಲ್ ಮ್ಯಾನ್ ಎಂದು ಬೋಧಿಸುತ್ತಿದ್ದ ಪಶ್ಚಿಮಾತ್ಯರಿಗೆ ಈ ಮಾತು ಸೂಜಿಗಲ್ಲಿನಂತೆ ಎಳೆದುಬಿಟ್ಟವು. ಸನಾತನ ಧರ್ಮದ ಹಿರಿಮೆಯನ್ನು ವಿಶ್ವಕ್ಕೆ ತಿಳಿಸಿ ವಿವೇಕಾನಂದರು ವಿಶ್ವವಿಖ್ಯಾತರಾದರು. ತಮ್ಮ ಕಣಕಣದಲ್ಲೂ ದೇಶಭಕ್ತಿಯನ್ನು ತುಂಬಿಕೊಂಡಿದ್ದ ಈ ಮಹಾನುಭಾವರು ಭಾರತ ದೇಶದ ತರುಣರಿಗೆ ಎಂದೆಂದಿಗೂ ಸ್ಪೂರ್ತಿದಾಯಕರು. ನೊಬೆಲ್ ಪುರಸ್ಕೃತರಾದ ರವೀಂದ್ರನಾಥ ಠಾಗೋರ್ ಅವರು  ಭಾರತವನ್ನು ತಿಳಿಯಬೇಕಾದರೆ ಸ್ವಾಮಿ ವಿವೇಕಾನಂದರನ್ನು ಓದಿ ಎಂದು ಹೇಳಿದ್ದಾರೆ. ಶ್ರೀ ರಾಮಕೃಷ್ಣ ಪರಮಹಂಸರ ಕಟ್ಟಾ ಶಿಷ್ಯರಾಗಿದ್ದ ಸ್ವಾಮಿ ವಿವೇಕಾನಂದರು, ಅವರ ತತ್ವ ಹಾಗೂ ಆದರ್ಶಗಳನ್ನು ಪಾಲಿಸಿಕೊಂಡು ಬಂದಿದ್ದರು. ಕೊಲ್ಕತ್ತಾದ ವಿಶ್ವನಾಥ ಭುವನೇಶ್ವರಿ ದಂಪತಿಗಳ ಪುತ್ರರಾಗಿ ಜ.12 ರಂದು 1863 ರಲ್ಲಿ ಜನಿಸಿದರು. ಹುಟ್ಟು ಹೆಸರು ನರೇಂದ್ರ ಬಾಲ್ಯದಿಂದಲೇ ಶ್ರೀರಾಮನ ಕಥೆಗಳನ್ನು ಬಹಳ ಇಷ್ಟಪಟ್ಟು ಹೇಳುತ್ತಿದ್ದರು ಇವರು ತಮ್ಮ ತಾಯಿಯಿಂದ ರಾಮಾಯಣ ಮಹಾಭಾರತದ ಕಥೆಗಳನ್ನು ಕೇಳಿ ತಿಳಿದುಕೊಳ್ಳುತ್ತಿದ್ದರು. ಶಾಲೆಯಲ್ಲಿ ಮಾಡುತ್ತಿದ್ದ ಪಾಠಗಳನ್ನು ಬಹಳ ಬೇಗ ಅರ್ಥ ಮಾಡಿಕೊಳ್ಳುವಲ್ಲಿ ನಿಸ್ಸೀಮರಾಗಿದ್ದರು ಪಾಠದಲ್ಲಿ ಮಾತ್ರವಲ್ಲದೆ ಆಟೋಟಗಳಲ್ಲಿ ಪ್ರವೀಣರಾಗಿದ್ದು ವ್ಯಾಯಾಮ ಕತ್ತಿ ವರಸೆ ಕುಸ್ತಿಗಳನ್ನು ಅವರು ಕಲಿತ್ತಿದ್ದರು. 1884ರಲ್ಲಿ ಬಿಎ ಪದವಿಯನ್ನು ಪಡೆದಿದ್ದರು. ಹಿಂದೂ ಧರ್ಮವೂ ಒಂದು ಧರ್ಮ ಮಾತ್ರವಲ್ಲ ಒಂದು ಮನುಷ್ಯನ ಜೀವನ ವಿಧಾನ. ಸೌಹಾರ್ದ ಹಾಗೂ ಸಹಿಷ್ಣುತೆ ಇದರ ಒಂದು ಮೂಲ. ಹಿಂದೂ ಧರ್ಮ ಅದಕ್ಕೆ ಭಾರತ ದೇಶದಲ್ಲಿ ಎಲ್ಲಾ ಧರ್ಮದವರು ಜಾತಿ ಧರ್ಮ ಭೇದ ಇಲ್ಲದೆ ಜೀವಿಸುತ್ತಿದ್ದಾರೆ. ಅದು ಎಲ್ಲ ಧರ್ಮವನ್ನು ಗೌರವಿಸುತ್ತಿದೆ ಎಂದರು. ವಿವೇಕಾನಂದರು ನಿಮ್ಮನ್ನು ನೀವು ಜಯಿಸಿ ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ. ನಿಮ್ಮ ಏಳಿಗೆಯಲ್ಲಿ ನಿಮ್ಮ ಭವಿಷ್ಯವನ್ನು ನೀವೇ ರೂಪಿಸಿಕೊಳ್ಳಿ ನಿಮಗೆ ಯಾರು ಹೊರಗಿನವರು ಸಹಾಯ ಮಾಡಲಾರದು. ನಿಮಗೆ ನಿಮ್ಮ ಮೇಲೆ ನಂಬಿಕೆ ಇದ್ದರೆ ಸಾಕು ಎಂದು ಭಾವಿಸಿದ್ದರು. ಇವರು ಕೇವಲ ರಾಮಕೃಷ್ಣರ ಶಿಷ್ಯರಾಗಿ ಉಳಿಯದೆ ತಮ್ಮದೇ ಶೈಲಿಯಲ್ಲಿ ದೊಡ್ಡ ಚಿಂತಕರಾಗಿ ಹೆಸರು ಮಾಡಿದರು. ಇಲ್ಲೆಲ್ಲೂ ದೇವರು ಇದ್ದಾನೆ ಎಂದು ಅವರು ಹೇಳಿದ್ದರು. ದೇವರಿಲ್ಲದ ಸರ್ವಂ ದೇವಮಯಂ ಎಂದು ಹೇಳಿದ್ದರು. ಇತರ ದೇಶಗಳ ಪರ್ಯಾಟನೆಯ ಸಂದರ್ಭ ಶಂಕರಾಚಾರ್ಯರು ಧರ್ಮ ಪ್ರಚಾರ ಮಾಡಿದ ವಾರಣಾಸಿಗೆ ಭೇಟಿ ನೀಡಿದರು. ಅಲ್ಲಿ ಬಂಗಾಳ ಬರಹಗಾರ ಭೂದೇವ ಮುಖ್ಯೋಪಾಧ್ಯಾಯ ಹಾಗೂ ಹಿಂದೂ ಸಂತ ತೈಲ0ಗ್ ಅವರನ್ನು ಭೇಟಿ ಮಾಡಿದರು. ಇಷ್ಟು ಸಣ್ಣ ಪ್ರಾಯದಲ್ಲಿ ದೂರ ದೃಷ್ಟಿ ಮತ್ತು ಪ್ರಭುದ ವಿಚಾರವನ್ನು ಹೊಂದಿದ ನರೇಂದ್ರರನ್ನು ಮುಂದೆ ನೀನು ದೊಡ್ಡ ವ್ಯಕ್ತಿಯಾಗುವೆ ಎಂದು ಅವರು ಪ್ರಶಂಸಿದರು. ಅಲ್ಲದೆ ಲಕ್ನೋ ಅಯೋದ್ಯ. ಹೃಷಿಕೇಶ ರಾಮೇಶ್ವರ ಕನ್ಯಾಕುಮಾರಿಯವರೆಗೂ ರಾಜರುಗಳನ್ನು ಭೇಟಿ ಮಾಡಿದರು. ತಮ್ಮ ತಂದೆಯ ಮರಣ ನಂತರ ಕುಟುಂಬದ ಜವಾಬ್ದಾರಿ ಜೊತೆಗೆ ತಮ್ಮ ಗುರುಗಳಾದ ರಾಮಕೃಷ್ಣ ಪರಮಹಂಸರ ಸೇವೆಯ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತು ಗುರುಗಳು ಕಾಲವಾದ ನಂತರ ಕಾಳಿಪುರದ ತೋಟದ ಮನೆಯಲ್ಲಿ ವಾಸ ಪ್ರಾರಂಬಿಸಿದರು. ಹೀಗೆ ರಾಮೇಶ್ವರಕ್ಕೆ ತೆರಳಿ ಕನ್ಯಾಕುಮಾರಿ ಹೋದರು. ಅಲ್ಲಿ ಸಮುದ್ರದ ಬದಿಯಲ್ಲಿ ಕುಳಿತು ಧ್ಯಾನ ಆರಂಭಿಸಿದರು. ಇವರು ದೇಶದ ಉದ್ದಗಲಕ್ಕೂ ಶಿಷ್ಯರನ್ನು ಹೊಂದಿದ್ದರು. ಹಲವಾರು ರಾಜರುಗಳು ಕೂಡ ಇವರ ಶಿಷ್ಯರಾಗಿದ್ದರು. ಇವರು ಹಲವಾರು ಮಠಗಳನ್ನು ಪ್ರಾರಂಭಿಸಿದರು. ಭಾರತವಲ್ಲದೆ ಬಾಂಗ್ಲಾದೇಶ, ಗ್ರೀಸ್, ಅಮೆರಿಕ, ಶ್ರೀಲಂಕಾ ಅಲ್ಲದೆ ಎರಡು ಬಾರಿ ಪಾಶ್ಚ್ಯಾತ್ಯ ದೇಶಗಳಿಗೆ ಭೇಟಿ ನೀಡಿ ಯುವಕರಿಗೆ ಮಾರ್ಗದರ್ಶನ ನೀಡಿದರು. ಯುವಕರಿಗೆ ಇವರ ಕೊಡುಗೆ ಅಪಾರ. ಯುವಜನರಲ್ಲಿ ನಿಮ್ಮ ಅಸೂಹೆ ಮತ್ತು ಸಹಕಾರಗಳನ್ನು ತೊರೆಯಿರಿ ಅದ್ಭುತ ಶಕ್ತಿಯೊಂದಿಗೆ ಮುನ್ನುಗ್ಗಿ ಬನ್ನಿ ಎಂದು ಯುವಕರಿಗೆ ಪ್ರೇರಣೆ ನೀಡಿದ ಮಹಾನ್ ಚೇತನ ವಿವೇಕಾನಂದರು. ಇಂದು ಅವರ ಹುಟ್ಟು ಹಬ್ಬದ ಸಂಭ್ರಮ ಏಕಾನಂದರ ಆದರ್ಶವನ್ನು ಮುಂದುವರಿಸಿಕೊಂಡು ದೇಶ ಸೇವೆಯಲ್ಲಿ ತೊಡಗುವಂತಾಗಲಿ. ನವ ಭಾರತದ ಮಹಾನ್ ನಾಯಕರಾದ ಸ್ವಾಮಿ ವಿವೇಕಾನಂದರು ಎಂದೆಂದಿಗೂ ಅಜರಾಮರ.
ಲೇಖನ :: ಪಿ. ಪಿ..ಸುಕುಮಾರ್. ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತರು, ಹಾಕತ್ತೂರು. 

 

Share. Facebook Twitter Pinterest LinkedIn Tumblr Email WhatsApp
Previous Article*ಪಾಲಿಬೆಟ್ಟದಲ್ಲಿ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ಅಗತ್ಯ : ವಿಜು ಸುಬ್ರಮಣಿ*
Next Article NH-275 ಹೆದ್ದಾರಿ ಸುರಕ್ಷತೆ : ಕೇಂದ್ರ ಸರ್ಕಾರದಿಂದ 94.08 ಕೋಟಿ ರೂ.ಗಳ ಬೃಹತ್ ಯೋಜನೆಗೆ ಹಣ ಬಿಡುಗಡೆ : ಸಂಸದ ಯದುವೀರ್*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.