Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » NH-275 ಹೆದ್ದಾರಿ ಸುರಕ್ಷತೆ : ಕೇಂದ್ರ ಸರ್ಕಾರದಿಂದ 94.08 ಕೋಟಿ ರೂ.ಗಳ ಬೃಹತ್ ಯೋಜನೆಗೆ ಹಣ ಬಿಡುಗಡೆ : ಸಂಸದ ಯದುವೀರ್*
ಇತ್ತೀಚಿನ ಸುದ್ದಿಗಳು

NH-275 ಹೆದ್ದಾರಿ ಸುರಕ್ಷತೆ : ಕೇಂದ್ರ ಸರ್ಕಾರದಿಂದ 94.08 ಕೋಟಿ ರೂ.ಗಳ ಬೃಹತ್ ಯೋಜನೆಗೆ ಹಣ ಬಿಡುಗಡೆ : ಸಂಸದ ಯದುವೀರ್*

January 12, 20262 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.12 NEWS DESK : ರಾಜ್ಯದ NH-275 ಹೆದ್ದಾರಿ ಸುರಕ್ಷತೆಗಾಗಿ ಕೇಂದ್ರ ಸರ್ಕಾರದಿಂದ 94.08 ಕೋಟಿ ರೂ.ಗಳ ಬೃಹತ್ ಯೋಜನೆಗೆ ತಾಂತ್ರಿಕ ಅನುಮೋದನೆ ನೀಡಿ ಹಣಬಿಡುಗಡೆ ಮಾಡಲಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕರ್ನಾಟಕದ ಅತ್ಯಂತ ಜನನಿಬಿಡ ಹೆದ್ದಾರಿಗಳಲ್ಲಿ ಒಂದಾದ NH-275 (ಬಂಟ್ವಾಳ-ಬೆಂಗಳೂರು ವಿಭಾಗ) ರಸ್ತೆಯ ಅಭಿವೃದ್ಧಿಗಾಗಿ (ಸಂಪಾಜೆ ಯಿಂದ ಕುಶಾಲನಗರ ವರೆಗೆ) ಭರ್ಜರಿ ಕೊಡುಗೆ ನೀಡಿದ್ದು, ಈ ರಸ್ತೆ ಅಭಿವೃದ್ಧಿ ಕಾಣಲಿದೆ ಎಂದಿದ್ದಾರೆ. ಈ ಹೆದ್ದಾರಿಯ ಆಯ್ದ ಭಾಗಗಳಲ್ಲಿ ರಕ್ಷಣಾತ್ಮಕ ಗೋಡೆಗಳ ನಿರ್ಮಾಣ ಮತ್ತು ಸುರಕ್ಷತಾ ಕಾಮಗಾರಿಗಳಿಗಾಗಿ 94.08 ಕೋಟಿ ರೂಪಾಯಿಗಳ ಆರ್ಥಿಕ ಮತ್ತು ತಾಂತ್ರಿಕ ಮಂಜೂರಾತಿಯನ್ನು ನೀಡಿ ಆದೇಶ ಹೊರಡಿಸಿದ್ದುಯೋಜನೆಯ ಹಿನ್ನೆಲೆ ಮತ್ತು ಉದ್ದೇಶಬಂಟ್ವಾಳ ಮತ್ತು ಬೆಂಗಳೂರು ನಡುವಿನ ಈ ಘಟ್ಟ ಪ್ರದೇಶದ ರಸ್ತೆಯು ಮಳೆಗಾಲದಲ್ಲಿ ಪದೇ ಪದೇ ಭೂಕುಸಿತಕ್ಕೆ ತುತ್ತಾಗುತ್ತಿತ್ತು. ಇದನ್ನು ತಡೆಗಟ್ಟಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಲು ಕಿಮೀ 78.000 ರಿಂದ 125.000 ವರೆಗಿನ (ಸಂಪಾಜೆ ಯಿಂದ ಕುಶಾಲನಗರ ವರೆಗೆ) ವ್ಯಾಪ್ತಿಯಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು. ಈ ಯೋಜನೆಯನ್ನು EPC (Engineering, Procurement, and Construction) ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದೆ ಎಂದು ಅವರು ತಿಳಿಸಿದರು. :: ಪ್ರಮುಖ ಕಾಮಗಾರಿಗಳು :: ಸಚಿವಾಲಯದ ತಾಂತ್ರಿಕ ವರದಿಯ ಪ್ರಕಾರ, :: ಯೋಜನೆಯು ರಕ್ಷಣಾತ್ಮಕ ಗೋಡೆಗಳು : : ಒಟ್ಟು 1,650 ಮೀಟರ್ ಉದ್ದದ ಆರ್‌ಸಿಸಿ ಕ್ಯಾಂಟಿಲಿವರ್ ರಿಟೈನಿಂಗ್ ವಾಲ್ ಮತ್ತು ಕಣಿವೆಯ ಬದಿಯಲ್ಲಿ ವಿಶೇಷವಾಗಿ 110 ಮೀಟರ್ ಉದ್ದದ ಪ್ರೆಶರ್ ರಿಲೀಫ್ ಗೋಡೆಗಳನ್ನು ನಿರ್ಮಿಸಲಾಗುವುದು. :: ಬ್ರೆಸ್ಟ್ ವಾಲ್ ಮತ್ತು ಚರಂಡಿ : ಗುಡ್ಡದ ಬದಿಯಲ್ಲಿ ಮಣ್ಣು ಕುಸಿಯದಂತೆ 1,910 ಮೀಟರ್ ಉದ್ದದ ಬ್ರೆಸ್ಟ್ ವಾಲ್ ಮತ್ತು ನೀರು ಸರಾಗವಾಗಿ ಹರಿಯಲು 2,720 ಮೀಟರ್ ಉದ್ದದ ಚೂಟ್ ಡ್ರೈನ್‌ಗಳನ್ನು ನಿರ್ಮಿಸಲಾಗುತಿದೆ ಎಂದಿದ್ದಾರೆ. :: ತಿರುವುಗಳ ಸುಧಾರಣೆ : : ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು 17 ಆಯ್ದ ಸ್ಥಳಗಳಲ್ಲಿ ಒಟ್ಟು 1,690 ಮೀಟರ್ ಉದ್ದದ ರಸ್ತೆಯನ್ನು ವಿಸ್ತರಿಸಲಾಗುತಿದೆ. :: ಮೋರಿಗಳ ಪುನರ್ನಿರ್ಮಾಣ : : ಕಿಮೀ 77.750 ಮತ್ತು 89.670 ರಲ್ಲಿ ಹಳೆಯದಾದ ಎರಡು ಬಾಕ್ಸ್ ಮೋರಿಗಳನ್ನು ಮರುನಿರ್ಮಾಣ ಮಾಡಲಾಗುವುದು. :: ಸುರಕ್ಷತಾ ಕ್ರಮಗಳು : : ರಕ್ಷಣಾತ್ಮಕ ಕ್ರಾಶ್ ಬ್ಯಾರಿಯರ್‌ಗಳು ಮತ್ತು ಆಧುನಿಕ ಸಂಚಾರ ಸೂಚನಾ ಫಲಕಗಳನ್ನು ಅಳವಡಿಸಲಾಗುವುದು ಎಂದರು. ರೂ. 94.08 ಕೋಟಿ (ಜಿಎಸ್‌ಟಿ ಮತ್ತು ನಿರ್ವಹಣಾ ವೆಚ್ಚಗಳು ಸೇರಿ). ವೆಚ್ಚದ ಯೋಜನೆಯು
ಮಳೆಗಾಲವನ್ನೂ ಒಳಗೊಂಡಂತೆ 18 ತಿಂಗಳುಗಳಲ್ಲಿ ಪೂರ್ಣಗೊಳ್ಳಲಿದೆ. :: ನಿರ್ವಹಣೆ : : ಗುತ್ತಿಗೆದಾರರು ಕಾಮಗಾರಿ ಮುಗಿದ ನಂತರ ಮುಂದಿನ 10 ವರ್ಷಗಳ ಕಾಲ ರಸ್ತೆಯ ದೋಷ ಹೊಣೆಗಾರಿಕೆ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಯೋಜನೆಯ ಗುಣಮಟ್ಟ ಕಾಪಾಡಲು ಸಚಿವಾಲಯವು ಹಲವು ಷರತ್ತುಗಳನ್ನು ವಿಧಿಸಿದೆಕಾಮಗಾರಿ ಆರಂಭಿಸುವ ಮುನ್ನ ಮತ್ತು ನಂತರ ನೆಟ್‌ವರ್ಕ್ ಸರ್ವೆ ವೆಹಿಕಲ್ (NSV) ಮೂಲಕ ರಸ್ತೆಯ ಗುಣಮಟ್ಟವನ್ನು ದಾಖಲಿಸುವುದು ಕಡ್ಡಾಯಗೊಳಿಸಿದೆ ಎಂದಿದ್ದಾರೆ. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಏಕಕಾಲಕ್ಕೆ 3 ಕಿಮೀಗಿಂತ ಹೆಚ್ಚು ಉದ್ದದ ಕಾಮಗಾರಿ ನಡೆಸದಂತೆ ಸೂಚಿಸಲಾಗಿದೆ. ಈ ಯೋಜನೆಯು ಪೂರ್ಣಗೊಂಡ ನಂತರ, ಬೆಂಗಳೂರು ಮತ್ತು ಕರಾವಳಿ ಭಾಗದ ನಡುವಿನ ಸಂಚಾರವು ಹವಾಮಾನ ವೈಪರೀತ್ಯಗಳ ಸಂದರ್ಭದಲ್ಲೂ ಹೆಚ್ಚು ಸುರಕ್ಷಿತ ಮತ್ತು ಸುಗಮವಾಗಲಿದೆ.ಕಾಮಗಾರಿಗೆ ಮಡಿಕೇರಿ ಸಮೀಪದಲ್ಲಿ 2026 ಜನವರಿ ಜನವರಿ ಮಾಹೆಯ ಕೊನೆಯ ವಾರದಂದು ಚಾಲನೆ ನೀಡುವುದಾಗಿ ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ಯುವ ಜನತೆಯ ಪ್ರೇರಕ ಶಕ್ತಿ ಸ್ವಾಮಿ ವಿವೇಕಾನಂದರು*
Next Article *ಕುಶಾಲನಗರದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಗ್ಲೋಫೆಸ್ಟ್” ವಜ್ರಾಭರಣಗಳ ವಾರ್ಷಿಕ ಮಹೋತ್ಸವ : ಕೇವಲ 4 ದಿನಗಳು ಮಾತ್ರ : ಇಂದೇ ಭೇಟಿ ನೀಡಿ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.