
ಚೆಟ್ಟಳ್ಳಿ ಜ.13 NEWS DESK : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತಕ್ಕೆ ಸಹಕಾರ ವಿದ್ಯಾನಿಧಿ ಚೆಕ್ಕನ್ನು ವಿತರಿಸಲಾಯಿತು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಿಬ್ಬಂದಿ ಅರುಣ್ ಕುಮಾರ್ ಅವರಿಗೆ ಸಂಘದ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪ ಹಸ್ತಾಂತರಿಸಿದರು. ಈ ಸಂದರ್ಭ ಸಂಘದ ನಿರ್ದೇಶಕರಾದ ಬಿ.ಎಂ.ಕಾಶಿ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಕೆ.ಎಸ್.ನಂದಿನಿ ಹಾಜರಿದ್ದರು.








