Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನವಜಾತ ಶಿಶುಗಳ ಸಂರಕ್ಷಣೆಗಾಗಿ ತಾಯಿಯ ಎದೆಹಾಲು ಸಂಗ್ರಹ ಕೇಂದ್ರ ಸ್ಥಾಪನೆ*
ಇತ್ತೀಚಿನ ಸುದ್ದಿಗಳು

*ನವಜಾತ ಶಿಶುಗಳ ಸಂರಕ್ಷಣೆಗಾಗಿ ತಾಯಿಯ ಎದೆಹಾಲು ಸಂಗ್ರಹ ಕೇಂದ್ರ ಸ್ಥಾಪನೆ*

January 13, 20262 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.13 NEWS DESK : ನವಜಾತ ಶಿಶುಗಳ ಸಂರಕ್ಷಣೆಗೆ ಪೂರಕವಾಗಿ ‘ತಾಯಿಯ ಎದೆಹಾಲು ಸಂಗ್ರಹ ಕೇಂದ್ರ’ಗಳನ್ನು ತೆರೆಯುವ ನಿಟ್ಟಿನಲ್ಲಿ ರೋಟರಿ ಸೇವಾ ಸಂಸ್ಥೆ ಪ್ರಥಮ ಆದ್ಯತೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆಯೆಂದು ರೋಟರಿ ಜಿಲ್ಲಾ ರಾಜ್ಯಪಾಲರಾದ ಪಿ.ಕೆ.ರಾಮಕೃಷ್ಣ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಕಷ್ಟು ಬಾರಿ ನವಜಾತ ಶಿಶುಗಳು ಅಗತ್ಯ ಪೋಷಕಾಂಶಯುಕ್ತ ಹಾಲಿನ ಕೊರತೆಯಿಂದ ಕೊನೆಯುಸಿರೆಳೆಯುತ್ತವೆ. ನವಜಾತ ಶಿಶುಗಳ ರಕ್ಷಣೆಗೆ ಕೃತಕ ಹಾಲು ಸಹಕಾರಿಯಾಗದಿರುವುದನ್ನು ಮನಗಂಡ ರೋಟರಿ ಸಂಸ್ಥೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಹಾಗೂ ಮಂಗಳೂರಿನಲ್ಲಿ ‘ತಾಯಿ ಎದೆ ಹಾಲು ಸಂಗ್ರಹ ಕೇಂದ್ರ’ವನ್ನು ತೆರೆದಿದೆ. ಇವುಗಳ ಮೂಲಕ ಈಗಾಗಲೆ 436 ನವಜಾತ ಶಿಶುಗಳು ಪ್ರಯೋಜನವನ್ನು ಪಡೆದುಕೊಂಡಿರುವುದಾಗಿ ತಿಳಿಸಿದರು. ರಾಜ್ಯ ಸರ್ಕಾರವು ನವಜಾತ ಶಿಶುಗಳ ರಕ್ಷಣೆಯ ನಿಟ್ಟಿನಲ್ಲಿ ಆಸಕ್ತವಾಗಿರುವುದಲ್ಲದೆ, ಪ್ರತಿ ಜಿಲ್ಲಾ ಕೇಂದ್ರದ ಆಸ್ಪತ್ರೆಯಲ್ಲಿ ‘ತಾಯಿಯ ಎದೆಹಾಲು ಸಂಗ್ರಹ ಕೇಂದ್ರ’ವನ್ನು ತೆರೆಯುವ ನಿಟ್ಟಿನ ಚಿಂತನೆಗಳನ್ನು ನಡೆಸಿದೆಯೆಂದು ಅವರು ಹೇಳಿದರು. :: ಜೀವ ರಕ್ಷಣೆಗೆ ಅಗತ್ಯ ಮಾರ್ಗದರ್ಶನ :: ಹೃದಯಾಘಾತದ ಸಂದರ್ಭ ಸಂಕಷ್ಟದಲ್ಲಿರುವ ವ್ಯಕ್ತಿಯ ಜೀವ ರಕ್ಷಣೆಗೆ ಪೂರಕವಾದ ಪ್ರಥಮ ಚಿಕಿತ್ಸಾ ಕ್ರಮಗಳ ಬಗ್ಗೆ ಜನ ಸಾಮಾನ್ಯರಿಗೆ ಮಾಹಿತಿ ನೀಡುವ ಕಾರ್ಯಕ್ರಮಗಳ ಬಗ್ಗೆ ರೋಟರಿ ಕಾರ್ಯನಿರತವಾಗಿದೆ. ಈ ನಿಟ್ಟಿನಲ್ಲಿ ಆಯಾ ಪ್ರದೇಶದ ಜನರಲ್ಲಿ ಹಾಗೂ ಆಟೋ ರಿಕ್ಷಾ ಚಾಲಕರಿಗೆ ಮಾಹಿತಿ ಒದಗಿಸುವ ಕಾರ್ಯಗಳನ್ನು ನಡೆಸಲಾಗುತ್ತಿದೆಯೆಂದು ರಾಮಕೃಷ್ಣ ಅವರು ತಿಳಿಸಿದರು. :: ಪೋಲಿಯೋ ಲಸಿಕಾ ಕಾರ್ಯಕ್ರಮ :: ಅಂತರಾಷ್ಟ್ರೀಯ ರೋಟರಿ ಫೌಂಡೇಶನ್ ಸಂಸ್ಥೆಯು ವಿಶ್ವದಿಂದಲೆ ಪೋಲೀಯೋವನ್ನು ನಿರ್ಮೂಲನ ಮಾಡಬೇಕೆನ್ನುವ ನಿಟ್ಟಿನಲ್ಲಿ ‘ಪಲ್ಸ್ ಪೋಲಿಯೋ’ ಕಾರ್ಯಕ್ರಮವನ್ನು ವಿಶ್ವದಾಂದ್ಯಂತ ನಡೆಸಲು ಅಗತ್ಯ ಹಣಕಾಸನ್ನು ಒದಗಿಸಿಕೊಂಡು ಬಂದಿದೆ. ಭಾರತದಲ್ಲಿ ಪೋಲಿಯೋ ಪ್ರಕರಣಗಳು ಇಲ್ಲವಾದರು, ನೆರೆಯ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳಲ್ಲಿ 59 ಪೋಲಿಯೋ ಪ್ರಕರಣಗಳು ದಾಖಲಾಗಿದೆ. ಈ ಹಿನ್ನೆಲೆ ಭಾರvದಲ್ಲಿ ಪೋಲೀಯೋ ಲಸಿಕಾ ಕಾರ್ಯಕ್ರಮ ಮುಂದುರಿಸಲಾಗಿದೆಯೆಂದು ಮಾಹಿತಿ ನೀಡಿದರು. ರೋಟರಿ ಜಿಲ್ಲಾ ಸಹಾಯಕ ರಾಜ್ಯಪಾಲ ದಿಲನ್ ಚಂಗಪ್ಪ ಅವರು ಮಾತನಾಡಿ, ಹೆಣ್ಣು ಮಕ್ಕಳಲ್ಲಿನ ‘ಗರ್ಭ ಕಂಠದ ಕ್ಯಾನ್ಸರ್’ ತಡೆಗೆ ಪೂರಕವಾಗಿ ರೋಟರಿ ಸಂಸ್ಥೆಯು ವಿವಿಧ ಶಾಲೆಗಳಲ್ಲಿ ಮಕ್ಕಳು ಮತ್ತು ಅವರ ಪೋಷಕರಿಗೆ ಅರಿವು ನೀಡುವ ಕಾರ್ಯಕ್ರಮವನ್ನು ಪ್ರಮುಖವಾಗಿ ಕೈಗೆತ್ತಿಕೊಂಡು ನಡೆಸುತ್ತಿರುವುದಾಗಿ ತಿಳಿಸಿದರು. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷರಾದ ರತ್ನಾಕರ ರೈ ಅವರು ಮಾತನಾಡಿ, ಸಂಸ್ಥೆಯ ವತಿಯಿಂದ ಜನಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಮೇಕೇರಿ ಮತ್ತು ಕಗ್ಗೋಡ್ಲು ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಾದ ಪರಿಕರಗಳನ್ನು ಇದೀಗ ವಿತರಿಸಲಾಗುತ್ತಿದೆ, ವಿವಿಧ ಶಾಲೆಗಳಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಪ್ರೇರಣಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಶೀಘ್ರದಲ್ಲೆ ಕೃತಕ ಕಾಲು ಜೋಡಣಾ ಶಿಬಿರವನ್ನು ಆಯೋಜಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರೋಟರಿ ಪ್ರಮುಖರಾದ ಬಿ.ಜಿ.ಅನಂತಶಯನ, ರೋಟರಿ ಕಾರ್ಯದರ್ಶಿ ಬಿ.ಕೆ.ಕಾರ್ಯಪ್ಪ, ರೋಟರಿ ಪಬ್ಲಿಕ್ ಇಮೇಜ್ ಕಮಿಟಿ ಉಪಾಧ್ಯಕ್ಷ ಅನಿಲ್ ಎಚ್.ಟಿ. ಉಪಸ್ಥಿತರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ತಾಯಿ ಆಸೆ ಈಡೇರಿಸಲು ಸ್ಕೂಟರ್‌ನಲ್ಲಿ ದೇಶ ಪರ್ಯಟನೆ : ಮಡಿಕೇರಿಗೆ ಆಗಮಿಸಿದ ತಾಯಿ-ಮಗನಿಗೆ ರೋಟರಿ ಸಂಸ್ಥೆಯಿಂದ ಆತ್ಮೀಯ ಸ್ವಾಗತ*
Next Article *ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಅಭಿನಂದಿಸಿದ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟ*

Related Posts

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು…

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.