Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬೇಟೋಳಿ-ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಮಕರ ಜ್ಯೋತಿ ಪೂಜೆ
ಇತ್ತೀಚಿನ ಸುದ್ದಿಗಳು

*ಬೇಟೋಳಿ-ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಮಕರ ಜ್ಯೋತಿ ಪೂಜೆ

January 15, 20262 Mins Read
Share
Facebook Twitter LinkedIn Pinterest WhatsApp Email

ವಿರಾಜಪೇಟೆ ಜ.15 NEWS DESK :  ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ  ಶ್ರೀ ಅಯ್ಯಪ್ಪ ಮಹೋತ್ಸವ ಹಾಗೂ ಮಕರ ಜ್ಯೋತಿ ಪೂಜಾ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅರ್ಚಕರಾದ ಪ್ರವೀಣ್ ಭಟ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ಶ್ರೀ ಅಯ್ಯಪ್ಪ ಉತ್ಸವದ ಪ್ರಯುಕ್ತ ದೇವಾಲಯದಲ್ಲಿ ದೇವತಾ ಪ್ರಾರ್ಥನೆ, ಗಣಪತಿ ಹೋಮ ನೆರವೇರಿತು. ಶ್ರೀ ಅಯ್ಯಪ್ಪ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ನಾಗ, ಶ್ರೀ ವನದುರ್ಗೆ ದೇವರುಗಳ ಗುಡಿಯಲ್ಲಿ ಪೂಜೆಯನ್ನು ಸಲ್ಲಿಸಲಾಯಿತು. ನಂತರ ಅರ್ಚಕರು ಶ್ರೀ ಅಯ್ಯಪ್ಪ ಸ್ವಾಮಿಗೆ ಹೂವಿನ ಅಲಂಕಾರ ಪೂಜೆ ಸಲ್ಲಿಸಿದರು. ದೇವಸ್ಥಾನದ ಒಳ ಆವರಣದಲ್ಲಿ ನಿರ್ಮಿಸಲಾಗಿದ್ದ ಹದಿನೆಂಟು ಮೆಟ್ಟಿಲುಗಳುಳ್ಳ ಮಂಟಪದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಅರ್ಚಕರು ಹಾಲಿನ ಅಭಿಷೇಕ, ತುಪ್ಪದ ಅಭಿಷೇಕ, ಸೀಯಾಳದ ಅಭಿಷೇಕ ಹಾಗೂ ಪಂಚಾಮೃತ ಅಭಿಷೇಕ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಿತು. ಸಂಜೆ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನ ಬಳಿಕ ಪುದುಪಾಡಿ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಮಕರ ಜ್ಯೋತಿ ಪೂಜೆಯು ಶಾಸ್ತ್ರೋಕ್ತವಾಗಿ ಜರುಗಿತು. ಈ ಸಂದರ್ಭ ಶ್ರೀ ಅಯ್ಯಪ್ಪ ಮೂರ್ತಿಯ ಮಂಟಪದ ಎದುರು ಪಡಿ ಪೂಜೆ ನೆರವೇರಿತು. ಅರ್ಚಕರು ಅಯ್ಯಪ್ಪ ಸ್ವಾಮಿಗೆ ಸಂಕಲ್ಪವನ್ನು ಸಲ್ಲಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಮಹಿಳಾ ಭಜನಾ ಮಂಡಳಿಯ ವತಿಯಿಂದ ಭಜನಾವಳಿ, ಸ್ಥಳೀಯ ಶಾಲಾ ಮಕ್ಕಳಿಂದ ಕುಣಿತ ಭಜನೆ ನಡೆಯಿತು. ಶ್ರೀ ಅಯ್ಯಪ್ಪ ಮಹೋತ್ಸವದ ಪ್ರಯುಕ್ತ ಮಧ್ಯಾಹ್ನ ಹಾಗೂ ರಾತ್ರಿ ಭಕ್ತಾದಿಗಳಿಗೆ ಅನ್ನದಾನ ನೆರವೇರಿತು. ಸ್ಥಳೀಯ ಚಿತ್ರಕಲಾ ಕಲಾವಿದರಾದ ಸುನಾದ್ ಭಾರದ್ವಾಜ್ ಶ್ರೀ ಅಯ್ಯಪ್ಪ ಸಭಾಭವನಕ್ಕೆ ಕ್ಯಾನ್ವಾಸ್ ಪೇಂಟಿಂಗ್ ನಲ್ಲಿ ರಚಿಸಿದ ಗಣಪತಿ ಹಾಗೂ ಅಯ್ಯಪ್ಪ ಸ್ವಾಮಿ ದೇವರುಗಳ ಚಿತ್ರ ಕಲಾಕೃತಿಗಳನ್ನು ದೇವಸ್ಥಾನದ ಆಡಳಿತ ಮಂಡಳಿಯವರಿಗೆ ಹಸ್ತಾಂತರಿಸಿದರು. :: ಮಹಾಗಣಪತಿ ದೇವರಿಗೆ ಬೆಳ್ಳಿಯ ಮುಖ ಕವಚದ ಸಮರ್ಪಣೆ ::  ಶ್ರೀ ಅಯ್ಯಪ್ಪ ಮಹೋತ್ಸವದ ಸಂದರ್ಭದಲ್ಲಿ  ತಮ್ಮ ಮನದ ಇಷ್ಟಾರ್ಥಗಳು ಈಡೇರಿದ ಫಲವಾಗಿ ದಾನಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಬಿ.ಜಿ.ನಂದ ಬೋರ್ಕರ್, ಗೀತಾ ಬೋರ್ಕರ್ ದಂಪತಿಗಳು ಹಾಗೂ ಬೆಂಗಳೂರಿನ ದಾನಿಗಳಾದ ಪದ್ಮನಾಭ ಮಡ್ಕೇಕರ್, ಜಯ ದಂಪತಿಗಳು ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವರಿಗೆ ಬೆಳ್ಳಿಯ ಮುಖ ಕವಚ ಹಾಗೂ ಶ್ರೀ ನಾಗದೇವರಿಗೆ ಹಿತ್ತಾಳೆಯ ಮುಖ ಕವಚವನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸಂತೋಷ್, ಉಪಾಧ್ಯಕ್ಷರುಗಳಾದ ನಂದ ಬೋರ್ಕರ್, ಶೈಲೇಶ್ ಕಾಮತ್, ಕಾರ್ಯದರ್ಶಿ ಶಾಂತಿಭೂಷಣ್, ಸದಸ್ಯರುಗಳಾದ ರಾಮಶರ್ಮ, ವಾಸುದೇವ ಬಿ.ಆರ್., ಶ್ರೀಕಾಂತ್ ರಾವ್, ವೀಣಾ, ತೀರ್ಥರಾಮ್, ಸುಮನ ಬಿ.ಪಿ., ದಿನೇಶ್, ಸೀತಮ್ಮ ಹಾಗೂ ಭಕ್ತಾದಿಗಳು ಹಾಜರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಜಿಮ್ ಟ್ರೈನರ್ ಬೇಕಾಗಿದ್ದಾರೆ : SM  ಫಿಟ್ನೆಸ್, ಜಿಮ್, ಟೋಲ್  ಗೇಟ್, ಮಡಿಕೇರಿ*
Next Article *ಗಡಿಭಾಗ ಪರಿಶೀಲಿಸಿದ ಕೊಡಗು ಎಸ್ ಪಿ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.