
ಸುಂಟಿಕೊಪ್ಪ ಜ.16 NEWS DESK : ಸುಂಟಿಕೊಪ್ಪ ಪೊಂಗಲ್ ಸಮಿತಿ ವತಿಯಿಂದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಸಂಭ್ರಮದಿಂದÀ ಪೊಂಗಲ್(ಮಕರಸಂಕ್ರಾಂತಿ) ಹಬ್ಬವನ್ನು ಆಚರಿಸಲಾಯಿತು. ಸುಂಟಿಕೊಪ್ಪ ಪೊಂಗಲ್ ಸಮಿತಿ ವತಿಯಿಂದ 26ನೇ ವರ್ಷದ ಆಚರಣೆಯ ಅಂಗವಾಗಿ ಬೆಳಿಗ್ಗೆ ಮಧುರಮ್ಮ ಬಡಾವಣೆಯಲ್ಲಿರುವ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ಮಹಿಳೆಯರು, ಯುವತಿಯರು ಪೂರ್ಣಕುಂಭ ಕಳಸವನ್ನು ಇರಿಸಿ ವಿಶೇಷ ಪೂಜೆಯನ್ನು ನೇರವೇರಿಸಿದರು. ನಂತರ ದೇವಾಲಯದ ಟ್ರಸ್ಟಿ, ಸಮಿತಿ ಕಾರ್ಯದರ್ಶಿ ಎ.ಲೋಕೇಶ್ ಕುಮಾರ್ ಪೂರ್ಣಕುಂಭ ಕಳಸವನ್ನು ಹೊತ್ತು ಕೊಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮದುರಮ್ಮ ಬಡಾವಣೆಯ ವೃಕ್ಷೋದ್ಭವ ದೇವಾಲಯದಿಂದ ನಾದಸ್ವರದೊಂದಿಗೆ ಶ್ರೀ ಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಇರಿಸಿ ಮುಖ್ಯ ಬೀದಿಗಳ ಮೂಲಕ ಮೆರವಣಿಗೆ ನಡೆಸಿ ರಾಮ ಮಂದಿರ, ಅಯ್ಯಪ್ಪ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಚಾಮುಂಡೇಶ್ವರಿ, ಶ್ರೀ ಮುತ್ತಪ್ಪ ದೇವಾಲಯದಲ್ಲಿ ಕಳಸಗಳನಿಟ್ಟು ಪೂಜೆ ಸಲ್ಲಿಸಲಾಯಿತು. ಭಕ್ತರು ದೇವಾಲಯದ ಆವರಣದಲ್ಲಿ ಪೊಂಗಲ್ಮಾಡಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಮಧ್ಯಾಹ್ನ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ಸಮಿತಿಯ ಸದಸ್ಯರಾದ ಎಸ್.ಸುರೇಶ, ಎಸ್.ಸುಂದರೇಶ್, ಎಂ.ರಾಜಾ, ಎಂ.ಗಣೇಶ, ರಾಜ, ಜಗದೀಶ, ವೆಂಕಟೇಶ, ಗಣೇಶ, ವಿಘ್ನೇಶ್ ನಿಖಿಲ್, ಏಳುಮಲೈ ಇತರರು ಹಾಜರಿದ್ದರು.









