
ಕುಶಾಲನಗರ ಜ.17 NEWS DESK : ನಾಡು ಕಂಡ ಧೀಮಂತ ನಾಯಕ, ಸ್ವಾತಂತ್ರ್ಯ ಚಳುವಳಿಯಲ್ಲಿ ತೊಡಗಿಸಿಕೊಂಡು ಗಾಂಧೀಜಿ ಯವರ ವಿಚಾರಧಾರೆಗಳ ಚಿಂತಕ, ಮಾಜಿ ಸಚಿವ ಹಾಗೂ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಭೀಮಣ್ಣ ಖಂಡ್ರೆ ನಿಧನಕ್ಕೆ ಕೊಡಗು ವೀರಶೈವ ಮಹಾಸಭಾದ ವತಿಯಿಂದ ಸಂತಾಪ ಕೋರಲಾಯಿತು. ಕುಶಾಲನಗರದ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಆವರಣದಲ್ಲಿ ಭೀಮಣ್ಣ ಖಂಡ್ರೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಮಹಾಸಭಾ ಕೊಡಗು ಜಿಲ್ಲಾ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಂಬಶಿವಯ್ಯ, ಸಹ ಕಾರ್ಯದರ್ಶಿ ಎಂ.ಎಸ್.ಗಣೇಶ್, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಹೆಚ್.ಎಂ.ಮಧುಸೂದನ್, ಕಾರ್ಯದರ್ಶಿ ಧರ್ಮೇಂದ್ರ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಕೋಶಾಧಿಕಾರಿ ಕೆ.ಪಿ.ಪರಮೇಶ್, ಸಮಾಜದ ಪ್ರಮುಖರಾದ ಎಂ.ಎಸ್.ಲೋಕೇಶ್, ಸಹಕಾರ ಸಂಘಧ ಸಿಇಒ ಬಸವಣ್ಣಯ್ಯ, ಕಾವ್ಯ, ಭೂಮಿಕಾ, ಪರಶಿವಮೂರ್ತಿ ಇದ್ದರು.









