
ಗೋಣಿಕೊಪ್ಪ ಜ.20 NEWS DESK : ಪ್ರಗತಿ ಆಟೋಚಾಲಕರ ಮತ್ತು ಮಾಲೀಕರ ಸಂಘ ವತಿಯಿಂದ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಆಟೋ ಚಾಲಕರಿಗೆ ಕಾರ್ಮಿಕ ಕಾರ್ಡ್ ವಿತರಣೆ ಮಾಡಲಾಯಿತು. ಗೋಣಿಕೊಪ್ಪ ಪಂಚಾಯಿತಿ ಹಳೆ ಕಟ್ಟಡ ಸಂಭಾಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 90ಕ್ಕೂ ಹೆಚ್ಚು ಆಟೋಚಾಲಕರಿಗೆ ವಿತರಣೆ ನಡೆಯಿತು. ಮಡಿಕೇರಿ ಕಾರ್ಮಿಕ ಇಲಾಖೆ ಅಧಿಕಾರಿ ವಾಣಿ ಮಾತನಾಡಿ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್ಧನ್ ಪಿಂಚಣಿ ಸವಲತ್ತು ಪಡೆಯಲು 40 ವರ್ಷದ ಒಳಗಿನವರು ಅರ್ಹರಾಗಿರುತ್ತಾರೆ. ಜೊತೆಗೆ ಮೋಟರು ಸಾರಿಗೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆತರಲಾಗಿದೆ. ಈ ಯೋಜನೆಗಳ ಸದುಪಯೋಗಕ್ಕೆ ಆಟೋಚಾಲಕರು ಗಮನ ಹರಿಸಬೇಕು ಎಂದು ಹೇಳಿದರು. ಕಾರ್ಮಿಕ ಇಲಾಖೆಯಲ್ಲಿ ಸಿಗುವ ಹಲವಾರು ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಸಾಹಿತಿ ಜಗದೀಶ್ ಜೋಡುಬೀಟಿ ಮಾತನಾಡಿ, ಆಟೋಚಾಲಕರು ಸಾಮಾಜಿಕ ಬದ್ಧತೆಯೊಂದಿಗೆತಮ್ಮಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನಾಡಿನ ನೆಲ-ಜಲ, ಸಂಸ್ಕøತಿ, ಭಾμÉಗಳ ಸಮೃದ್ಧಿ ಮತ್ತು ಮಹಿಳೆ, ಮಕ್ಕಳ, ವೃದ್ಧರ, ಅನಾರೋಗ್ಯ ಪೀಡಿತರ ಸುರಕ್ಷತೆಯೆಡೆಯ ಜವಾಬ್ದಾರಿಯು ಆಟೋಚಾಲಕರಾದ್ದಾಗಿದೆ. ಅಂತಹ ಪ್ರಾಮಾಣಿಕ ನಿμÁ್ಠವಂತ ಆಟೋಚಾಲಕರ ಬದುಕಿನಲ್ಲಿ ವ್ಯತ್ಯಾಸಗಳು ಉಂಟಾದಾಗ ಸರಿಪಡಿಸುವ ಜವಾಬ್ದಾರಿ ಸಮಾಜದ ಹೊಣೆಗಾರಿಕೆಯೂ ಹೌದು. ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಆಟೋಚಾಲಕರ ಅಥವಾ ಮೋಟರ್ ವಾಹನ ಚಾಲಕರಿಗೆ ಪಿಂಚಣಿ ಯೋಜನೆಜತೆಗೆ, ಹಲವಾರು ಅಪಘಾತ ವಿಮೆಗಳ ಯೋಜನೆಗಳನ್ನು ಜಾರಿಗೆತಂದು ಕಾರ್ಮಿಕರಡೆಗೆ ತಲುಪಿಸುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ. ಈ ಸವಲತ್ತುಗಳನ್ನು ಬಹುದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಂಡು ಆಕಸ್ಮಿಕವಾಗಿ ಮುಂದೆ ಎದುರಾಗಬಹುದಾದ ಆಘಾತಗಳಿಂದ ವಿಚಲಿತರಾಗುವ ವ್ಯವಸ್ಥೆಯಿಂದ ಹೊರಾಗುಳಿದು ಕೊಂಡು ಆತ್ಮಸ್ಥೈರ್ಯದೊಂದಿಗೆ ಜೀವನೋತ್ಸವವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪ್ರಗತಿ ಆಟೋಚಾಲಕರ ಸಂಘದ ಗೌರವಾಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಸಲಹೆಯೊಂದಿಗೆ ಸಂಘದ ಅಧ್ಯಕ್ಷ ಡಾಡುಜೋಸೆಫ್ ಅಧ್ಯಕ್ಷತೆಯಲ್ಲಿ ಉಪಾಧ್ಯಕ್ಷ ವಿನೋದ್, ಕಾರ್ಯದರ್ಶಿ ಸನ್ನು ಕಾರ್ಯಪ್ಪ, ಖಜಾಂಚಿ ಪ್ರಕಾಸ್, ನಿಕಟಪೂರ್ವ ಅಧ್ಯಕ್ಷ ಭೀಮಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ, ಪೊನ್ನಂಪೇಟೆ ಕಾರ್ಮಿಕ ಇಲಾಖೆ ಅಧಿಕಾರಿ ಕಾವ್ಯ ಸೇರಿದಂತೆ ಸಂಘದ ಪದಾಧಿಕಾರಿಗಳು ಸದಸ್ಯರುಗಳು ಹಾಜರಿದ್ದರು.









