
ಸುಂಟಿಕೊಪ್ಪ ಜ.21 NEWS DESK : ಮಕ್ಕಳು ಯಾವುದೇ ಉನ್ನತ ಶಿಕ್ಷಣಗಳಲ್ಲಿ ಎಷ್ಟೇ ದೊಡ್ಡ ಸಾಧನೆ ಮಾಡಿದರೂ ಪರಿಗಣನೆಗೆ ಬರುವುದಿಲ್ಲ. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳೇ ನಿಮ್ಮ ಮುಂದಿನ ಭವಿಷ್ಯಕ್ಕೆ ಮುನ್ನುಡಿ ಅದುದ್ದರಿಂದ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದಾಗ ಮಾತ್ರ ನಿಮ್ಮ ಗುರಿ ಸಾಧನೆಗೆ ಸಹಕಾರಿಯಾಗಲಿದೆ ಎಂದು ಪೋಷಕರಿಗೆ ಶಿಕ್ಷಕಿ ಹರ್ಷಿತಾ ಮಾಹಿತಿ ನೀಡಿದರು. ಮಂಜಿಕೆರೆ ಸಮುದಾಯ ಭವನದಲ್ಲಿ ಕಾನ್ಬೈಲ್ ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಾಕಾವೇರಿ ಜ್ಞಾನ ವಿಕಾಸ ಕೇಂದ್ರದ ಕಾನ್ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಆಯೋಜಿಸಲಾಗಿದ್ದ ಮಾಹಿತಿ ಕಾರ್ಯಾಗಾರವನ್ನು ಉದ್ದೇಶಿಸಿ ಶಿಕ್ಷಕಿ ಹರ್ಷಿತ ಮಾತನಾಡಿದರು. ಮಕ್ಕಳು ಮೊಬೈಲ್ ಬಳಕೆಯ ಸಂದರ್ಭ ಪಠ್ಯ ಚಟುವಟಿಕೆಗೆ ಸಂಬಂಧಿಸಿದ ಅಥವಾ ಇತರೆ ವಿಚಾರಗಳ ಬಳಕೆ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನಿಗಾವಹಿಸಬೇಕು. ಮಕ್ಕಳು ಎಸ್ಎಸ್ಎಲ್ಸಿ ಮತ್ತು ಪಿಯುಸಿ ಅಂಕಗಳೇ ಮಕ್ಕಳ ಮುಂದಿನ ಭವಿಷ್ಯಕ್ಕೆ ಬೇಕಾಗಿರುವ ಅಂಕವಾಗಿದೆ. ಪದವಿ ಶಿಕ್ಷಣದಲ್ಲಿ ಉನ್ನತ ಶ್ರೇಣಿಯಲ್ಲಿ ಪಡೆದರೂ ಯಾವುದೇ ಪ್ರಯೋಜನವಿಲ್ಲ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಸಾಧನೆಯೇ ಪದವಿ ಮತ್ತು ಉನ್ನತ ಶಿಕ್ಷಣಕ್ಕೆ ಬೂನಾದಿಯಾಗಲಿದೆ. ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಗಳಾಗಿರುವ ಕಲೆ, ಕ್ರೀಡೆ ಸೇರಿದಂತೆ ಇನ್ನಿತರ ಪ್ರತಿಭೆಗಳನ್ನು ಹೊಂದಿರುತ್ತಾರೆ. ಅವರಿಗೆ ಅದೇ ಮಾದರಿಯ ಶಿಕ್ಷಣಕ್ಕೆ ಪೋಷಕರು ಆದ್ಯತೆ ನೀಡಬೇಕೆ ಹೊರತು ಪೋಷಕರು ಅವರ ಪ್ರತಿಭೆಗಳನ್ನು ಮೊಟಕುಗೊಳಿಸಿ ಇತರೆ ಮಕ್ಕಳ ಪಡೆಯುವ ಶಿಕ್ಷಣಕ್ಕೆ ಪೋಷಕರು ಪಡೆಯಲೆಂದು ಆಗ್ರಹಿಸುವುದು ಬಹುದೊಡ್ಡ ತಪ್ಪು. ಮಕ್ಕಳ ವಿವೇಚನೆಯನ್ನು ಅರಿತು ಶಿಕ್ಷಣಕ್ಕೆ ಆದ್ಯತೆ ನೀಡುವುದರಿಂದ ಮಕ್ಕಳ ಉತ್ತಮ ಭವಿಷ್ಯ ಎಂದು ಹೇಳಿದರು. ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿ ರೋಷಿತ ಮಾತನಾಡಿ, ಇಂದಿನ ದಿನಗಳಲ್ಲಿ ಮಹಿಳೆಯರಲ್ಲಿ ಋತುಚಕ್ರ ಸಮಸ್ಯೆಯ ಕಾಡಲು ನಮ್ಮಲ್ಲಿನ ಆಹಾರ ಪದ್ಧತಿಯೇ ಮೂಲಕಾರಣವಾಗಿದೆ. ನಾವು ದೈನಂದಿನ ಆಹಾರ ಪದ್ಧತಿಯು ದಿನದಿಂದ ದಿನಕ್ಕೆ ಬದಲಾಗುತ್ತಿರುವುದು ಮತ್ತು ಹಿಂದಿನ ಕಾಲದಲ್ಲಿ ರಸಾಯನಿಕ ಗೊಬ್ಬರ ಬಳಕೆಯಿಂದ ದೂರವಿದ್ದು ಇತ್ತೀಚಿನ ವರ್ಷಗಳಲ್ಲಿ ಬಳಕೆಯನ್ನು ಹೆಚ್ಚು ಅವಲಂಭಿತರಾಗಿರುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಉದ್ಭವಿಸಲು ಕಾರಣವೆಂದರು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ನಿಧಿ ತಂಡದ ಸದಸ್ಯೆ ಮೇರಿ ಅವರು ವಹಿಸಿದ್ದರು. ಈ ಸಂದರ್ಭ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಖತ್ತೀಜ, ಜ್ಞಾನವಿಕಾಸ ಕಾನ್ಬೈಲ್ ವ್ಯಾಪ್ತಿಯ ಸೇವಾ ಪ್ರತಿನಿಧಿ ಯಶೋಧ ಬಸವರಾಜ್, ಮತ್ತಿತರರು ಇದ್ದರು. ಕಾನ್ಬೈಲ್ ವ್ಯಾಪ್ತಿಯ ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವ ಸಹಾಯ ಸಂಘಗಳಾದ ಭೂಮಿಕ, ಶ್ರೀನಿಧಿ, ಕನ್ನಿಕ, ದೃಥಿ, ಭಗವತಿ ಹಾಗೂ ಜನನಿ ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು. ಸವಿತ ಸ್ವಾಗತಿಸಿದರು. ಪೌಸಿಯ ವಂದಿಸಿದರು.









