
ಬೆಂಗಳೂರು ನ.23 NEWS DESK : ಬೀದರ್ ನಲ್ಲಿ ನಡೆಯಲಿರುವ ಪತ್ರಕರ್ತರ 40ನೇ ರಾಜ್ಯ ಸಮ್ಮೇಳನದ ಲೋಗೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆಗೊಳಿಸಿ, ಶುಭ ಕೋರಿದರು. ಸಚಿವರಾದ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಸಂಘದ ರಾಜ್ಯ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.









