
ಮಡಿಕೇರಿ ಜ.24 NEWS DESK : ಬೆಂಗಳೂರು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಬೆಳಗಾವಿ ಜಿಲ್ಲಾ ಯುವ ಘಟಕದ ವತಿಯಿಂದ ನೀಡಲಾಗುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿಗೆ ಕೊಡಗಿನ ಬಿ.ಎಲ್.ಯಶಸ್ ರೈ ಆಯ್ಕೆಯಾಗಿದ್ದಾರೆ. ಬಿ.ಎಲ್.ಯಶಸ್ ರೈ 2025ರಲ್ಲಿ ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿಶೇಷ ಯುವ ರಾಯಭಾರಿಯಾಗಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಅಲ್ಲದೆ ಜಿಲ್ಲಾ ಯುವ ಜನೋತ್ಸವದಲ್ಲಿ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ್ದರು. ಇವರು ಮೂರ್ನಾಡು ಕೊಡಂಬೂರುವಿನ ಲವಕುಮಾರ್ ರೈ ಹಾಗೂ ಜಯಂತಿ ರೈ ದಂಪತಿಯ ಪುತ್ರ. ಜ.27 ರಂದು ಬೆಳಗಾವಿ ಜಿಲ್ಲೆ ಮೂಡಲಗಿಯಲ್ಲಿ ನಡೆಯುವ ಯುವಜಾತ್ರೆ ಕಾರ್ಯಕ್ರಮದಲ್ಲಿ ಬಿ.ಎಲ್.ಯಶಸ್ ರೈ ಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









