

ಮಡಿಕೇರಿ ಜ.24 NEWS DESK : ಅರೆಭಾಷಿಕ ಗೌಡ ಜನಾಂಗದ ಶ್ರೇಯೋಭಿವೃದ್ಧಿಗಾಗಿ ನಾಲ್ಕು ದಶಕಗಳ ಹಿಂದೆ ನಗರದಲ್ಲಿ ಸ್ಥಾಪಿತವಾದ ‘ಕೊಡಗು ಗೌಡ ಸಮಾಜ’ದ 2026 ರಿಂದ 28ನೇ ಸಾಲಿನವರೆಗಿನ ನೂತನ ಆಡಳಿತ ಮಂಡಳಿ ರಚನೆಯಾಗಿದ್ದು, ಅಧ್ಯಕ್ಷರಾಗಿ ದಂಬೆಕೋಡಿ ಎಸ್.ಆನಂದ ಅವರು ಆಯ್ಕೆಯಾಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಗೌಡ ಸಮಾಜದ ನೂತನ ಅಧ್ಯಕ್ಷ ದಂಬೆಕೋಡಿ ಎಸ್.ಆನಂದ ಅವರು ಆಡಳಿತ ಮಂಡಳಿ ರಚನೆಯ ಕುರಿತು ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಸೂರ್ತಲೆ ಸೋಮಣ್ಣ, ಕಾರ್ಯದರ್ಶಿಯಾಗಿ ಪೂಳಕಂಡ ಎಂ.ಸಂದೀಪ್, ಖಜಾಂಚಿಯಾಗಿ ಕಾಳೇರಮ್ಮನ ನಂದ ಕುಮಾರ್, ನಿರ್ದೇಶಕರುಗಳಾಗಿ ಅಮೆ ಸೀತಾರಾಮ್, ಪೊನ್ನಚನ ಮಧು ಸೂದನ್, ಕೊಲ್ಯದ ಗಿರೀಶ್, ಹುದೇರಿ ರಾಜೇಂದ್ರ, ಪೈಕೆರ ಮನೋಹರ, ಪೇರಿಯನ ಘನಶ್ಯಾಮ್, ತೋಟಂಬೈಲು ಅನಂತ ಕುಮಾರ್, ಮಂದ್ರಿರ ತೇಜಸ್, ಕೊಂಬನ ಪ್ರವೀಣ್, ಚೊಕ್ಕಾಡಿ ಪ್ರೇಮಾ ರಾಘವಯ್ಯ ಹಾಗೂ ಮೂಲೆಮಜಲು ಅಮಿತ ಆಯ್ಕೆಯಾಗಿದ್ದಾರೆ. ಕೊಡಗು ಗೌಡ ಸಮಾಜದ ಹಿಂದಿನ ಅಧ್ಯಕ್ಷ ಪೇರಿಯನ ಜಯಾನಂದ ಅವರು ಹತ್ತು ವರ್ಷಗಳ ಕಾಲ ಅಧ್ಯಕ್ಷರಾಗಿ ಉತ್ತಮ ಆಡಳಿತವನ್ನು ನಡೆಸಿದ್ದಾರೆ. ಇವರ ಅವಧಿಯಲ್ಲಿ ಸಮಾಜದ ಎಲ್ಲರಿಗೂ ಅನುಕೂಲವಾಗುವಂತಹ ಸುಸಜ್ಜಿತವಾದ ಕಲ್ಯಾಣ ಮಂಟಪ ನಿರ್ಮಾಣವಾಗಿದೆ ಎಂದು ದಂಬೆಕೋಡಿ ಆನಂದ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜದ ಉಪಾಧ್ಯಕ್ಷ ಸೂರ್ತಲೆ ಸೋಮಣ್ಣ ಅವರು ಮಾತನಾಡಿ, ಸಮಾಜದ ಕಾರ್ಯಚಟುವಟಿಕೆಗಳಿಗೆ ಜಾಗದ ಕೊರತೆಯನ್ನು ಮನಗಂಡು ಮದೆ ಗ್ರಾಮದಲ್ಲಿ 8 ಏಕರೆ ಜಾಗವನ್ನು ಮಂಜೂರು ಮಾಡುವಂತೆ ಈ ಹಿಂದಿನ ಬಿಜೆಪಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು ಮತ್ತು ಜಾಗ ಮಂಜೂರಾತಿಗೆ ಸತತ ಪ್ರಯತ್ನ ಮಾಡಲಾಗಿತ್ತು. ಈ ಹಂತದಲ್ಲಿ ಸರಕಾರ ಬದಲಾಯಿತು, ಇದೀಗ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಹಕಾರದಿಂದ ಕೊಡಗು ಗೌಡ ಸಮಾಜಕ್ಕೆ ಸೂಚಿತ ಪ್ರದೇಶದಲ್ಲಿ 6 ಏಕರೆ ಜಾಗ ಮಂಜೂರಾಗಿದೆ. ಈ ಹಿನ್ನೆಲೆ ಶಾಸಕ ಪೊನ್ನಣ್ಣ ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವನ್ನು ಸಮಾಜದ ವತಿಯಿಂದ ಆಯೋಜಿಸಲಾಗುವುದು ಎಂದರು. ಕೊಡಗು ಗೌಡ ಸಮಾಜಕ್ಕೆ ಮಂಜೂರಾಗಿರುವ ಜಾಗದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡುವ ಚಿಂತನೆಯನ್ನು ಗೌಡ ಸಮಾಜ ಹೊಂದಿದೆ ಎಂದು ಸೂರ್ತಲೆ ಸೋಮಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಗೌಡ ಸಮಾಜದ ಮಾಜಿ ಅಧ್ಯಕ್ಷ ಪೇರಿಯನ ಜಯಾನಂದ, ನೂತನ ಕಾರ್ಯದರ್ಶಿ ಪೂಳಕಂಡ ಎಂ.ಸಂದೀಪ್, ನಿರ್ದೇಶಕರುಗಳಾದ ಕೊಲ್ಯದ ಗಿರೀಶ್ ಹಾಗೂ ಹುದೇರಿ ರಾಜೇಂದ್ರ ಉಪಸ್ಥಿತರಿದ್ದರು.









